ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ.
ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆನೆಗಳ ಹಾವಳಿ ತಡೆಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಶುರುಮಾಡಿದೆ.
ಸಾಕಾನೆಗಳನ್ನು ಬಳಸಿಕೊಂಡು ಪುಂಡಾಟ ಆಡುತ್ತಿರುವ ಆನೆಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸಪಟ್ಟಿದ್ದಾರೆ.
ಇಂದು ಏಳು ಕುಮ್ಕಿ ಆನೆಗಳನ್ನು ಬಳಸಿಕೊಂಡು ಎರಡು ಕಾಡಾನೆಗಳನ್ನು ಬೇರ್ಪಡಿಸಿದ್ದಾರೆ.
ನಂತರ ಒಂಟಿಸಲಗ ಕುಸಿದು ಬಿದ್ದಿದ್ದು, ಅದಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡಿ ಕ್ರೇನ್ ಮೂಲಕ ಲಾರಿಗೆ ಶಿಫ್ಟ್ ಮಾಡಿದ್ದಾರೆ.
ಸೆರೆಯಾದ ಆನೆಯು ಸಂಪೂರ್ಣ ಚೇತರಿಕೆಯಾದಾಗ ಬೇರೆ ಕಾಡಿಗೆ ಬಿಡುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪುಂಡಾಟ ನಡೆಸುತ್ತಿರುವ ಆನೆಗಳನ್ನು ಸೆರೆ ಹಿಡಿದು ಬೇರೆಡೆಗೆ ಬಿಡುವುದಕ್ಕೆ ಸರ್ಕಾರ ಈಗಾಗಲೇ ಸಮ್ಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆಯೂ ಕಾರ್ಯಾಚರಣೆ ನಡೆಸುವ ಸಾಧ್ಯತೆಯಿದ್ದು, ಆನೆಗಳ ಹಾವಳಿ ತಡೆಯಲು ಕ್ರಮ ಕೈಗೊಳ್ಳಲಾಗಿದೆ.
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…
ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…
ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…