ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಸುತ್ತಾಟ ಮಾಡಿದ್ದು ನಿಜ. ಆದರೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಯುವಕರು ತಪ್ಪೊಪ್ಪಿಕೊಂಡಿದ್ದಾರೆ.
ಅಲ್ಲಿ ವಾಹನದಲ್ಲಿ ಹೋಗಬಾರದು ಅಥವಾ ಈ ಬಗ್ಗೆ ಯಾವುದಾದರೂ ನಾಮಫಲಕ ಇದ್ದಿದ್ದರೆ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸಹ ಯಾರು ಇಲ್ಲದ ಕಾರಣ ನಮಗೆ ತಿಳಿದಿರಲಿಲ್ಲ. ನಾಮಫಲಕವಾದ್ರೂ ನೋಡಿ ನಾವು ಅಲ್ಲಿಗೆ ವಾಹನ ತೆಗೆದುಕೊಂಡು ಹೋಗುತ್ತಿರಲಿಲ್ಲ. ನಮ್ಮ ಕಡೆಯಿಂದ ತಪ್ಪಾಗಿರುವುದು ನಿಜ. ತಪ್ಪು ಮಾಡಿರುವುದಕ್ಕೆ ಕ್ಷಮೆ ಕೋರುತ್ತೇವೆ ಎಂದು ಯುವಕರು ತಿಳಿಸಿದ್ದಾರೆ.
ನಾವು ಕೂಡ ಪ್ರಕೃತಿ ಪ್ರಿಯರು, ನಮಗೆ ಪ್ರಕೃತಿಯನ್ನು ಹಾಳು ಮಾಡಬೇಕು ಎಂಬ ಉದ್ದೇಶ ಇರಲಿಲ್ಲ. ಹೀಗಾಗಿ ಈ ಘಟನೆ ಬಗ್ಗೆ ಯಾರೂ ಕೂಡ ಬೇರೆ ಏನನ್ನೂ ಭಾವಿಸಬೇಡಿ ಎಂದು ತಿಳಿಸಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಸೌಂದರ್ಯ ಸವಿಯಲು ಹೋದ ಯುವಕರು, ಕಾರಿನಲ್ಲಿ ಹುಚ್ಚಾಟ ಆಡಿದ್ದರು. ಈ ಘಟನೆ ನಡೆಯುತ್ತಿದ್ದಂತೆ ಪ್ರಾಣಿಪ್ರಿಯರು ಹಾಗೂ ಸಾರ್ವಜನಿಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಎಚ್ಚೆತ್ತ ಯುವಕರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಎಲ್ಲರ ಬಳಿ ಕ್ಷಮೆ ಕೇಳಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…