ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಸುತ್ತಾಟ ಮಾಡಿದ್ದು ನಿಜ. ಆದರೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಯುವಕರು ತಪ್ಪೊಪ್ಪಿಕೊಂಡಿದ್ದಾರೆ.
ಅಲ್ಲಿ ವಾಹನದಲ್ಲಿ ಹೋಗಬಾರದು ಅಥವಾ ಈ ಬಗ್ಗೆ ಯಾವುದಾದರೂ ನಾಮಫಲಕ ಇದ್ದಿದ್ದರೆ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸಹ ಯಾರು ಇಲ್ಲದ ಕಾರಣ ನಮಗೆ ತಿಳಿದಿರಲಿಲ್ಲ. ನಾಮಫಲಕವಾದ್ರೂ ನೋಡಿ ನಾವು ಅಲ್ಲಿಗೆ ವಾಹನ ತೆಗೆದುಕೊಂಡು ಹೋಗುತ್ತಿರಲಿಲ್ಲ. ನಮ್ಮ ಕಡೆಯಿಂದ ತಪ್ಪಾಗಿರುವುದು ನಿಜ. ತಪ್ಪು ಮಾಡಿರುವುದಕ್ಕೆ ಕ್ಷಮೆ ಕೋರುತ್ತೇವೆ ಎಂದು ಯುವಕರು ತಿಳಿಸಿದ್ದಾರೆ.
ನಾವು ಕೂಡ ಪ್ರಕೃತಿ ಪ್ರಿಯರು, ನಮಗೆ ಪ್ರಕೃತಿಯನ್ನು ಹಾಳು ಮಾಡಬೇಕು ಎಂಬ ಉದ್ದೇಶ ಇರಲಿಲ್ಲ. ಹೀಗಾಗಿ ಈ ಘಟನೆ ಬಗ್ಗೆ ಯಾರೂ ಕೂಡ ಬೇರೆ ಏನನ್ನೂ ಭಾವಿಸಬೇಡಿ ಎಂದು ತಿಳಿಸಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಸೌಂದರ್ಯ ಸವಿಯಲು ಹೋದ ಯುವಕರು, ಕಾರಿನಲ್ಲಿ ಹುಚ್ಚಾಟ ಆಡಿದ್ದರು. ಈ ಘಟನೆ ನಡೆಯುತ್ತಿದ್ದಂತೆ ಪ್ರಾಣಿಪ್ರಿಯರು ಹಾಗೂ ಸಾರ್ವಜನಿಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಎಚ್ಚೆತ್ತ ಯುವಕರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಎಲ್ಲರ ಬಳಿ ಕ್ಷಮೆ ಕೇಳಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…