ಹಾಸನ

3 ಕೋಟಿ ಅಧಿಕ ವಂಚನೆ ಆರೋಪ : ಮಹಿಳೆಯನ್ನು ಅಟ್ಟಾಡಿಸಿ ಹೊಡೆದ ಜನ ; ಹಾಸನದ ಗ್ರಾಮದಲ್ಲಿ ಘಟನೆ

ಹಾಸನ : ಕೆಲವೇ ದಿನಗಳಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ನಂಬಿಸಿ ಹಲವು ಮಹಿಳೆಯಿಂದ ಲಕ್ಷಾಂತರ ಹಣ ಪಡೆದು ಸುಮಾರು ರೂ. 3 ಕೋಟಿಗೂ ಅಧಿಕ ವಂಚನೆ ಮಾಡಿದ ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದಿರುವ ಘಟನೆ ಹಾಸನದ ಅರಳೇಪೇಟೆಯಲ್ಲಿ ನಡೆದಿದೆ.

ಟೈಲರ್ ಶಾಪ್ ನಡೆಸುತ್ತಿದ್ದ ಮಹಿಳೆ ಹೇಮಾವತಿ ಎಂಬಾಕೆ, ತನ್ನ ಮಗಳನ್ನು ವಿದೇಶದಲ್ಲಿ ಎಮ್ ಎಸ್ ಓದಿಸಬೇಕೆಂದೂ, ಕೋಟಿ ರೂ.ಗಳ ಮನೆ ಖರೀದಿಸಿದ್ದೇನೆಂದು ಹೇಳಿ ಹಣ ಕೇಳುತ್ತಿದ್ದಳು. ಅಲ್ಲದೇ ಕೊಡಚಾದ್ರಿ ಚಿಟ್ಸ್​ನಲ್ಲಿ 1 ಕೋಟಿ ರೂ.ಗಳಿಗೂ ಅಧಿಕ ಚೀಟಿ ಹಾಕಿದ್ದೇನೆ, ಇದರಿಂದ ಕೆಲವೇ ತಿಂಗಳುಗಳಲ್ಲಿ ದುಪ್ಪಟ್ಟು ಹಣ ಬರಲಿದೆ ಎಂದು ನಕಲಿ ಸ್ಲಿಪ್ ತೋರಿಸಿ ಪರಿಚಯದ ಮಹಿಳೆಯರ ಬಳಿ ಸಾಲ ಕೇಳುತ್ತಿದ್ದಳು. ಹೀಗೆ ಹೇಮಾವತಿಯ ಬಣ್ಣ ಬಣ್ಣದ ಮಾತುಗಳಿಂದ ಮರುಳಾಗಿದ್ದ ಮಹಿಳೆಯರು ತಮ್ಮ ಚಿನ್ನವನ್ನು ಅಡವಿಟ್ಟು ಲಕ್ಷಾಂತರ ಹಣವನ್ನು ಆಕೆಗೆ ನೀಡಿದ್ದರು ಎನ್ನಲಾಗಿದೆ.

ಇದನ್ನು ಓದಿ; ತೆಂಗಿನಕಾಯಿ ವ್ಯಾಪಾರಿಗೆ 49.47 ಲಕ್ಷ ವಂಚನೆ ; ಇಂಪೋರ್ಟ್ ಎಕ್ಸ್ಪೋರ್ಟ್ ವ್ಯಾಪಾರಿಯಿಂದ ಧೋಖಾ…

ಹತ್ತಾರು ವರ್ಷಗಳಿಂದ ಡ್ರೆಸ್ ಶಾಪ್ ನಡೆಸುತ್ತಿದ್ದ ಹೇಮಾವತಿಯು ತನ್ನ ನಿತ್ಯ ಗ್ರಾಹಕರನ್ನೇ ಗುರಿಯಾಗಿಸಿಕೊಂಡಿದ್ದರು. ಇನ್ನೂ ಓರ್ವ ಮಹಿಳೆಯಿಂದಲೇ 45 ಲಕ್ಷ ರೂ. ಹಣ ಪಡೆದು ವಂಚನೆ ಮಾಡಿರುವುದಾಗಿ ತಿಳಿದುಬಂದಿದೆ.

ವಂಚನೆಗೆ ಪತಿ ಸಾಥ್
ಹೆಂಡತಿ ವಂಚನೆಗೆ ಪತಿ ವಿರೂಪಾಕ್ಷಪ್ಪ ಸಾಥ್ ನೀಡಿದ್ದಾರೆ ಎಂದು ಜನ ಆರೋಪಿಸಿದ್ದಾರೆ. ವಂಚನೆಗೊಳಗಾದ ಜನ ಮಹಿಳೆಯನ್ನು ರಸ್ತೆಯಲ್ಲಿ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವೀಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

2 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

2 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

2 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

2 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

2 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

5 hours ago