ಹಾಸನ: ಮದುವೆ ಸಮಾರಂಭಕ್ಕೆ ಲಕ್ಷಾಂತರ ರೂ ಮೌಲ್ಯದ ಒಡವೆ ಧರಿಸಿ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ.
ತುಮಕೂರು ಜಿಲ್ಲೆ ಕುಣಿಗಲ್ನಲ್ಲಿ ಪ್ರಿಯಾಂಕಾ ಪತ್ತೆಯಾಗಿದ್ದಾರೆ. ಚಿಕ್ಕಮಗಳೂರಿನ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಫೆಬ್ರವರಿ.12ರಂದು ರಾತ್ರಿ 8 ಗಂಟೆ ಸುಮಾರಿಗೆ ಬೇಲೂರು ಬಸ್ ನಿಲ್ದಾಣದಿಂದ ಕಾಣೆಯಾಗಿದ್ದರು. ಕುಟುಂಬದವರು ಆಕೆಯನ್ನು ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ರಾಷ್ಟ್ರೀಯ ಹೆದ್ದಾರಿ 373ರ ಕೆರೆಯ ಸಮೀಪ ಪ್ರಿಯಾಂಕಾ ಮೈಮೇಲೆ ಇದ್ದ 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿಗಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವವನ್ನು ಕೆರೆಗೆ ಎಸೆದಿರುವ ಶಂಕೆಯ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ಸಹಾಯದಿಂದ ಕೆರೆಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು.
ಇದೀಗ ಹಾಸನ ಗ್ರಾಮಾಂತರ ಠಾಣೆ ಹಾಗೂ ಬೇಲೂರು ಪೊಲೀಸರು ತನಿಖೆ ಕೈಗೊಂಡು ನಾಪತ್ತೆಯಾಗಿದ್ದ ಪ್ರಿಯಾಂಕಾಳನ್ನು ಪತ್ತೆ ಮಾಡಿದ್ದಾರೆ. ನಾಪತ್ತೆಯಾಗಿದ್ದ ಪ್ರಿಯಾಂಕಾ ಕುಣಿಗಲ್ನಲ್ಲಿ ಪತ್ತೆಯಾಗಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…