ಹಾಸನ

ಹಾಸನಾಂಬ ದೇವಿ ದರ್ಶನ ಪಡೆದ ಸಾಹಿತಿ ಎಸ್‌.ಎಲ್‌.ಭೈರಪ್ಪ

ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬ   ದೇವಿ ದರ್ಶನಕ್ಕೆ ರಾಜ್ಯದ ನಾನಾ ಭಾಗದಿಂದ ಭಕ್ತರು, ಗಣ್ಯರು ಆಗಮಿಸುತ್ತಿದ್ದು, ಎಂಟನೇ ದಿನವಾದ ಶುಕ್ರವಾರವೂ ಭಕ್ತರ ಸಂಖ್ಯೆ ಹೆಚ್ಚಿತ್ತು. ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ಸೇರಿದಂತೆ ಹಲವು ಗಣ್ಯರು ದೇವಿ ದರ್ಶನ ಪಡೆದರು.

ಕಳೆದ ಮೂರು ದಿನದಿಂದ ನಿತ್ಯ 30ರಿಂದ 40 ಸಾವಿರ ಭಕ್ತರು ದೇವಿ ದರ್ಶನಕ್ಕೆ ಬರುತ್ತಿದ್ದು, ರಾಜಕಾರಣಿಗಳು, ಗಣ್ಯರು, ನ್ಯಾಯಾಧೀಶರು, ಮಠಾಧೀಶರು ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಹಿರಿಯ ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ, ಶಿವಗಂಗೆ ಬೆಟ್ಟದ ಮಲಯಮುನಿ ಶಾಂತವೀರ ಸ್ವಾಮೀಜಿ, ಬಸವ ಕಲ್ಯಾಣ ಮಠದ ಸದಾಶಿವ ಸ್ವಾಮೀಜಿ, ಮೈಸೂರು ಮಹಾನಗರ ಪಾಲಿಕೆ ಮಾಜಿ ಮೇಯರ್‌ ಸುನಂದಾ ಪಾಲನೇತ್ರ ಮತ್ತಿತರರು ಆಗಮಿಸಿ ದರ್ಶನ ಪಡೆದರು.

ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ.ಗೌಡ ದೇವಾಲಯಕ್ಕೆ ಆಗಮಿಸಿ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಿದರು

andolana

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

44 mins ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

1 hour ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

1 hour ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

2 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

3 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

5 hours ago