ವರದಿ: ಮೋಹನ್ ಬಿ.ಟಿ
ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಭಾರತೀನಗರ ಸಮೀಪದ ದೊಡ್ಡರಸಿನಕೆರೆಯಲ್ಲಿ ನಡೆದಿದೆ.
ಗ್ರಾಮದ ಅರುಣ್ ಅಲಿಯಾಸ್ ಕಪ್ಪ (೨೩) ಎಂಬಾತನೇ ಹತ್ಯೆಯಾದ ರೌಡಿಶೀಟರ್. ಈತನ ಮೇಲೆ ಅದೇ ಗ್ರಾಮದ ದೊಡ್ಡಯ್ಯ (೨೫), ದೇವರಾಜು (೨೬) ಎಂಬುವರೇ ಹತ್ಯೆಗೈದ ಆರೋಪಿಗಳಾಗಿದ್ದಾರೆ.
ಘಟನೆ ವಿವರ:
ಹಳೇ ದ್ವೇಷದ ಹಿನ್ನೆಲೆಯಲ್ಲಿ ಅರುಣ ಹಾಗೂ ದೊಡ್ಡಯ್ಯ, ದೇವರಾಜು ಅವರ ನಡುವೆ ಭಾನುವಾರ ಸಂಜೆ ಗ್ರಾಮದಲ್ಲಿ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿದ ಕಾರಣ ಅರುಣನ ಮುಖ ಮತ್ತು ಇತರ ಕಡೆಗಳಿಗೆ ದೇವರಾಜು ಮತ್ತು ದೊಡ್ಡಯ್ಯ ಹಲ್ಲೆ ನಡೆಸಿದ್ದರು. ಹಲ್ಲೆಯಿಂದಾಗಿ ಅರುಣನ ಮುಖ, ಕೈಕಾಲುಗಳಿಗೆ ಗಾಯಗಳಾಗಿದ್ದವು. ಮೂಗಿನಿಂದ ರಕ್ತ ಸೋರುತ್ತಿತ್ತು. ಬಳಿಕ ಆತ ಕೆ.ಎಂ.ದೊಡ್ಡಿ ಆಸ್ಪತ್ರೆಗೆ ಬೈಕ್ನಲ್ಲಿ ಹೋಗುತ್ತಿದ್ದ.
ಬೈಕ್ನಲ್ಲಿ ಹೋಗುತ್ತಿದ್ದ ಅರುಣನನ್ನು ಹಿಂಬಾಲಿಸಿದ ದೊಡ್ಡಯ್ಯ ಹಾಗೂ ದೇವರಾಜು ಅವರು, ಎತ್ತಿನ ಗಾಡಿಯ ಚಕ್ರಕ್ಕೆ ಸಿಲುಕಿಸುವ ಕೊಂಡಿಯಿಂದ ಅರುಣನ ಮೇಲೆ ಹಲ್ಲೆ ನಡೆಸಿದರು. ತೀವ್ರವಾಗಿ ಗಾಯಗೊಂಡು ಅಸ್ವಸ್ಥನಾಗಿ ಕುಸಿದುಬಿದ್ದಿದ್ದ. ತಕ್ಷಣ ಸಾರ್ವಜನಿಕರು ಆತನನ್ನು ಭಾರತೀಗರದ ಜಿ. ಮಾದೇಗೌಡ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅರುಣ ಸೋಮವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ನೀಡಲಾಯಿತು. ಘಟನೆ ನಂತರ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಈ ಸಂಬಂಧ ಕೆ.ಎಂ. ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…