ಜಿಲ್ಲೆಗಳು

ಹಳೇದ್ವೇಷ: ರೌಡಿಶೀಟರ್ ಕೊಲೆ

ವರದಿ: ಮೋಹನ್ ಬಿ.ಟಿ

ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಭಾರತೀನಗರ ಸಮೀಪದ ದೊಡ್ಡರಸಿನಕೆರೆಯಲ್ಲಿ ನಡೆದಿದೆ.

ಗ್ರಾಮದ ಅರುಣ್ ಅಲಿಯಾಸ್ ಕಪ್ಪ (೨೩) ಎಂಬಾತನೇ ಹತ್ಯೆಯಾದ ರೌಡಿಶೀಟರ್. ಈತನ ಮೇಲೆ ಅದೇ ಗ್ರಾಮದ ದೊಡ್ಡಯ್ಯ (೨೫), ದೇವರಾಜು (೨೬) ಎಂಬುವರೇ ಹತ್ಯೆಗೈದ ಆರೋಪಿಗಳಾಗಿದ್ದಾರೆ.

ಘಟನೆ ವಿವರ:
ಹಳೇ ದ್ವೇಷದ ಹಿನ್ನೆಲೆಯಲ್ಲಿ ಅರುಣ ಹಾಗೂ ದೊಡ್ಡಯ್ಯ, ದೇವರಾಜು ಅವರ ನಡುವೆ ಭಾನುವಾರ ಸಂಜೆ ಗ್ರಾಮದಲ್ಲಿ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿದ ಕಾರಣ ಅರುಣನ ಮುಖ ಮತ್ತು ಇತರ ಕಡೆಗಳಿಗೆ ದೇವರಾಜು ಮತ್ತು ದೊಡ್ಡಯ್ಯ ಹಲ್ಲೆ ನಡೆಸಿದ್ದರು. ಹಲ್ಲೆಯಿಂದಾಗಿ ಅರುಣನ ಮುಖ, ಕೈಕಾಲುಗಳಿಗೆ ಗಾಯಗಳಾಗಿದ್ದವು. ಮೂಗಿನಿಂದ ರಕ್ತ ಸೋರುತ್ತಿತ್ತು. ಬಳಿಕ ಆತ ಕೆ.ಎಂ.ದೊಡ್ಡಿ ಆಸ್ಪತ್ರೆಗೆ ಬೈಕ್‌ನಲ್ಲಿ ಹೋಗುತ್ತಿದ್ದ.

ಬೈಕ್‌ನಲ್ಲಿ ಹೋಗುತ್ತಿದ್ದ ಅರುಣನನ್ನು ಹಿಂಬಾಲಿಸಿದ ದೊಡ್ಡಯ್ಯ ಹಾಗೂ ದೇವರಾಜು ಅವರು, ಎತ್ತಿನ ಗಾಡಿಯ ಚಕ್ರಕ್ಕೆ ಸಿಲುಕಿಸುವ ಕೊಂಡಿಯಿಂದ ಅರುಣನ ಮೇಲೆ ಹಲ್ಲೆ ನಡೆಸಿದರು. ತೀವ್ರವಾಗಿ ಗಾಯಗೊಂಡು ಅಸ್ವಸ್ಥನಾಗಿ ಕುಸಿದುಬಿದ್ದಿದ್ದ. ತಕ್ಷಣ ಸಾರ್ವಜನಿಕರು ಆತನನ್ನು ಭಾರತೀಗರದ ಜಿ. ಮಾದೇಗೌಡ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅರುಣ ಸೋಮವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ನೀಡಲಾಯಿತು. ಘಟನೆ ನಂತರ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಈ ಸಂಬಂಧ ಕೆ.ಎಂ. ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

 

 

andolana

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

33 mins ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

35 mins ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

38 mins ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

39 mins ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

44 mins ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

49 mins ago