ಎಚ್.ಡಿ.ಕೋಟೆ: ಜಮೀನಿನ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ರೈತನ ಮೇಲೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಹಂಪಾಪುರದ ನಿವಾಸಿ ರಮೇಶ್ (62)) ಸಾವಿಗೀಡಾದವರು.
ಶನಿವಾರ ರಾತ್ರಿ ಜಮೀನಿನ ಕೆಲಸ ಮುಗಿಸಿಕೊಂಡು ಅಂಗಡಿಯಲ್ಲಿ ದಿನಸಿ ಪದಾರ್ಥ ತೆಗೆದುಕೊಂಡು ಹಂಪಾಪುರಕ್ಕೆ ಹೋಗುವ ಸಂದರ್ಭದಲ್ಲಿ ಹೊಮ್ಮರಗಳ್ಳಿ ಸರ್ಕಾರಿ ಶಾಲೆ ಮುಖ್ಯರಸ್ತೆಯ ಬದಿಯಲ್ಲಿ ಹೆಚ್.ಡಿ.ಕೋಟೆ ಕಡೆಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ.
ಕೂಡಲೇ ಚಾಲಕ ಬಸ್ಸನ್ನು ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ್ದು ಪೊಲೀಸರು ವಿಚಾರಣೆಯನ್ನು ನಡೆಸಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದ್ದು, ಡಿಪೋಮ್ಯಾನೇಜರ್ ತ್ಯಾಗರಾಜು ಸ್ಥಳಕ್ಕೆ ಭೇಟಿ ನೀಡಿ ಮೇಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…