ಜಿಲ್ಲೆಗಳು

ಎಚ್ ಡಿ ಕೆ ಮತ್ತು ಸಿ. ಪಿ. ಯೋಗೇಶ್ವರ್ ನಡುವೆ ‘ನಾನಾ’ ‘ನೀನಾ’ ಗುದ್ದಾಟ !

ಚನ್ನಪಟ್ಟಣ; ಗುದ್ದಾಟ ಗಮನಿಸಿದರೆ, ಸಿಪಿವೈ ವರ್ಚಸ್ಸು ಹೆಚ್ಚಳ ಆಗುವ ಸಾಧ್ಯತೆಗಳೇ ನಿಚ್ಚಳವಾಗಿ ಕಂಡು ಬರ್ತಿದೆ. 2023 ರ ಚುನಾವಣೆಗೆ ಈ ಗುದ್ದಾಟ ಎಚ್ಚರಿಕೆ ಗಂಟೆಯಾಗಿ ಪರಿಣಮಿಸಿದೆ. ಸಿಪಿವೈಗೆ ಪಕ್ಷದಲ್ಲಿ ಮತ್ತಷ್ಟು ಗುರುತಿಸಿಕೊಳ್ಳಲು ಅವಕಾಶ ಸಿಗಬಹುದು. ಜೊತೆಗೆ ಈ ಪ್ರಕರಣ ರಾಷ್ಟ್ರಿಯ ಬಿಜೆಪಿ ನಾಯಕರ ಗಮನ ಸೆಳೆದಿರುವ ಹಿನ್ನೆಲೆಯಲ್ಲಿ, ಇದೇ ಘಟನೆ ಆಧರಿಸಿ ಸಿಪಿವೈಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತರೂ ಇಲ್ಲ ಅಚ್ಚರಿ ಎಂದೇ ವಿಶ್ಲೇಷಿಸಲಾಗುತ್ತಿದೆ. ಬಿಜೆಪಿ ತಂಡ ಸಿಪಿವೈ ಬೆಂಬಲಕ್ಕೆ‌ ನಿಲ್ಲುವ ಸಾಧ್ಯತೆಗಳು ಗೋಚರಿಸುತ್ತಿವೆ

ಚನ್ನಪಟ್ಟಣದಲ್ಲಿ ನಡೆದ ಅಭಿವೃದ್ಧಿ ಗಲಾಟೆ ವಿಚಾರ 2023 ರ ಚುನಾವಣೆ ಗುದ್ದಾಟಕ್ಕೆ ಮುನ್ನುಡಿ ಬರೆದಿದೆ! ಶನಿವಾರ ನಡೆದ ಗಲಾಟೆಯನ್ನು ಗಮನಿಸಿದರೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ಹೇಗಿರಲಿದೆ ಎಂಬುದರ ಮುನ್ಸೂಚನೆಯಾಗಿದೆ. ಈ ಗುದ್ದಾಟವು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ ನಡುವೆ ‘ನಾನಾ’ ‘ನೀನಾ’ ಕಾದಾಟದ ಆರಂಭ ಎಂದೇ ವಿಶ್ಲೇಷಿಸಲಾಗುತ್ತಿದೆ.

ಯಾರಿಗೆ ಪ್ಲಸ್? ಯಾರಿಗೆ ಮೈನಸ್ ?
ಈ ಗುದ್ದಾಟದ ತೀವ್ರತೆ ಗಮನಿಸಿದರೆ, ಸಿ. ಪಿ. ಯೋಗೇಶ್ವರ್ ವರ್ಚಸ್ಸು ಹೆಚ್ಚಳ ಆಗುವ ಸಾಧ್ಯತೆಗಳೇ ನಿಚ್ಚಳವಾಗಿ ಕಂಡು ಬರ್ತಿದೆ. 2023 ರ ಚುನಾವಣೆಗೆ ಈ ಗುದ್ದಾಟ ಎಚ್ಚರಿಕೆ ಗಂಟೆಯಾಗಿ ಪರಿಣಮಿಸಿದೆ. ಸಿಪಿವೈಗೆ ಪಕ್ಷದಲ್ಲಿ ಮತ್ತಷ್ಟು ಗುರುತಿಸಿಕೊಳ್ಳಲು ಅವಕಾಶ ಸಿಗಬಹುದು. ಜೊತೆಗೆ ಈ ಪ್ರಕರಣ ರಾಷ್ಟ್ರಿಯ ಬಿಜೆಪಿ ನಾಯಕರ ಗಮನ ಸೆಳೆದಿರುವ ಹಿನ್ನೆಲೆಯಲ್ಲಿ, ಇದೇ ಘಟನೆ ಆಧರಿಸಿ ಸಿಪಿವೈಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತರೂ ಇಲ್ಲ ಅಚ್ಚರಿ ಎಂದೇ ವಿಶ್ಲೇಷಿಸಲಾಗುತ್ತಿದೆ. ಈಗಾಗಲೇ ಇಡೀ ಬಿಜೆಪಿ ತಂಡ ಸಿಪಿವೈ ಬೆಂಬಲಕ್ಕೆ‌ ನಿಲ್ಲುವ ಸಾಧ್ಯತೆಗಳು ಗೋಚರಿಸುತ್ತಿವೆ. ಜೊತೆಯಲ್ಲೇ ಒಂದಷ್ಟು ಋಣಾತ್ಮಕ ಪರಿಣಾಮಗಳನ್ನೂ ಸಿ. ಪಿ. ಯೋಗೇಶ್ವರ್ ಎದುರಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಚುನಾವಣೆ ಸಮಯದಲ್ಲಿ ತಮ್ಮದೇ ಪಕ್ಷದ ನಾಯಕರಿಂದ ಸಿಪಿವೈ ಚೀಮಾರಿಗೆ ಒಳಗಾಗುವ ಸಾಧ್ಯತೆಯೂ ಇಲ್ಲದಿಲ್ಲ. ಎಲ್ಲಕ್ಕಿಂತಾ ಹೆಚ್ಚಾಗಿ ಸಚಿವ ಸಂಪುಟದ ವಿಸ್ತರಣೆ ಸಮಯದಲ್ಲಿ ಸಿಪಿವೈ ವಿರೋಧಿಗಳು ಇದೇ ಗಲಾಟೆಯನ್ನು ಅಸ್ತ್ರ ಮಾಡಿಕೊಂಡು ಸಿಪಿವೈಗೆ ಸ್ಥಾನ ತಪ್ಪಿಸಲು ಯತ್ನಿಸುವ ಸಾಧ್ಯತೆಗಳೂ ಇಲ್ಲದಿಲ್ಲ. ಹೀಗಾಗಿ, ಶನಿವಾರ ನಡೆದ ಹೈಡ್ರಾಮಾ, ಸಿಪಿವೈಗೆ ವರವೂ ಆಗಬಹುದು, ಶಾಪವೂ ಆಗಬಹುದು..!

andolana

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

5 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

5 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

5 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

5 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

5 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

5 hours ago