ಜಿಲ್ಲೆಗಳು

ಎಚ್ ಡಿ ಕೆ ಮತ್ತು ಸಿ. ಪಿ. ಯೋಗೇಶ್ವರ್ ನಡುವೆ ‘ನಾನಾ’ ‘ನೀನಾ’ ಗುದ್ದಾಟ !

ಚನ್ನಪಟ್ಟಣ; ಗುದ್ದಾಟ ಗಮನಿಸಿದರೆ, ಸಿಪಿವೈ ವರ್ಚಸ್ಸು ಹೆಚ್ಚಳ ಆಗುವ ಸಾಧ್ಯತೆಗಳೇ ನಿಚ್ಚಳವಾಗಿ ಕಂಡು ಬರ್ತಿದೆ. 2023 ರ ಚುನಾವಣೆಗೆ ಈ ಗುದ್ದಾಟ ಎಚ್ಚರಿಕೆ ಗಂಟೆಯಾಗಿ ಪರಿಣಮಿಸಿದೆ. ಸಿಪಿವೈಗೆ ಪಕ್ಷದಲ್ಲಿ ಮತ್ತಷ್ಟು ಗುರುತಿಸಿಕೊಳ್ಳಲು ಅವಕಾಶ ಸಿಗಬಹುದು. ಜೊತೆಗೆ ಈ ಪ್ರಕರಣ ರಾಷ್ಟ್ರಿಯ ಬಿಜೆಪಿ ನಾಯಕರ ಗಮನ ಸೆಳೆದಿರುವ ಹಿನ್ನೆಲೆಯಲ್ಲಿ, ಇದೇ ಘಟನೆ ಆಧರಿಸಿ ಸಿಪಿವೈಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತರೂ ಇಲ್ಲ ಅಚ್ಚರಿ ಎಂದೇ ವಿಶ್ಲೇಷಿಸಲಾಗುತ್ತಿದೆ. ಬಿಜೆಪಿ ತಂಡ ಸಿಪಿವೈ ಬೆಂಬಲಕ್ಕೆ‌ ನಿಲ್ಲುವ ಸಾಧ್ಯತೆಗಳು ಗೋಚರಿಸುತ್ತಿವೆ

ಚನ್ನಪಟ್ಟಣದಲ್ಲಿ ನಡೆದ ಅಭಿವೃದ್ಧಿ ಗಲಾಟೆ ವಿಚಾರ 2023 ರ ಚುನಾವಣೆ ಗುದ್ದಾಟಕ್ಕೆ ಮುನ್ನುಡಿ ಬರೆದಿದೆ! ಶನಿವಾರ ನಡೆದ ಗಲಾಟೆಯನ್ನು ಗಮನಿಸಿದರೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ಹೇಗಿರಲಿದೆ ಎಂಬುದರ ಮುನ್ಸೂಚನೆಯಾಗಿದೆ. ಈ ಗುದ್ದಾಟವು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ ನಡುವೆ ‘ನಾನಾ’ ‘ನೀನಾ’ ಕಾದಾಟದ ಆರಂಭ ಎಂದೇ ವಿಶ್ಲೇಷಿಸಲಾಗುತ್ತಿದೆ.

ಯಾರಿಗೆ ಪ್ಲಸ್? ಯಾರಿಗೆ ಮೈನಸ್ ?
ಈ ಗುದ್ದಾಟದ ತೀವ್ರತೆ ಗಮನಿಸಿದರೆ, ಸಿ. ಪಿ. ಯೋಗೇಶ್ವರ್ ವರ್ಚಸ್ಸು ಹೆಚ್ಚಳ ಆಗುವ ಸಾಧ್ಯತೆಗಳೇ ನಿಚ್ಚಳವಾಗಿ ಕಂಡು ಬರ್ತಿದೆ. 2023 ರ ಚುನಾವಣೆಗೆ ಈ ಗುದ್ದಾಟ ಎಚ್ಚರಿಕೆ ಗಂಟೆಯಾಗಿ ಪರಿಣಮಿಸಿದೆ. ಸಿಪಿವೈಗೆ ಪಕ್ಷದಲ್ಲಿ ಮತ್ತಷ್ಟು ಗುರುತಿಸಿಕೊಳ್ಳಲು ಅವಕಾಶ ಸಿಗಬಹುದು. ಜೊತೆಗೆ ಈ ಪ್ರಕರಣ ರಾಷ್ಟ್ರಿಯ ಬಿಜೆಪಿ ನಾಯಕರ ಗಮನ ಸೆಳೆದಿರುವ ಹಿನ್ನೆಲೆಯಲ್ಲಿ, ಇದೇ ಘಟನೆ ಆಧರಿಸಿ ಸಿಪಿವೈಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತರೂ ಇಲ್ಲ ಅಚ್ಚರಿ ಎಂದೇ ವಿಶ್ಲೇಷಿಸಲಾಗುತ್ತಿದೆ. ಈಗಾಗಲೇ ಇಡೀ ಬಿಜೆಪಿ ತಂಡ ಸಿಪಿವೈ ಬೆಂಬಲಕ್ಕೆ‌ ನಿಲ್ಲುವ ಸಾಧ್ಯತೆಗಳು ಗೋಚರಿಸುತ್ತಿವೆ. ಜೊತೆಯಲ್ಲೇ ಒಂದಷ್ಟು ಋಣಾತ್ಮಕ ಪರಿಣಾಮಗಳನ್ನೂ ಸಿ. ಪಿ. ಯೋಗೇಶ್ವರ್ ಎದುರಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಚುನಾವಣೆ ಸಮಯದಲ್ಲಿ ತಮ್ಮದೇ ಪಕ್ಷದ ನಾಯಕರಿಂದ ಸಿಪಿವೈ ಚೀಮಾರಿಗೆ ಒಳಗಾಗುವ ಸಾಧ್ಯತೆಯೂ ಇಲ್ಲದಿಲ್ಲ. ಎಲ್ಲಕ್ಕಿಂತಾ ಹೆಚ್ಚಾಗಿ ಸಚಿವ ಸಂಪುಟದ ವಿಸ್ತರಣೆ ಸಮಯದಲ್ಲಿ ಸಿಪಿವೈ ವಿರೋಧಿಗಳು ಇದೇ ಗಲಾಟೆಯನ್ನು ಅಸ್ತ್ರ ಮಾಡಿಕೊಂಡು ಸಿಪಿವೈಗೆ ಸ್ಥಾನ ತಪ್ಪಿಸಲು ಯತ್ನಿಸುವ ಸಾಧ್ಯತೆಗಳೂ ಇಲ್ಲದಿಲ್ಲ. ಹೀಗಾಗಿ, ಶನಿವಾರ ನಡೆದ ಹೈಡ್ರಾಮಾ, ಸಿಪಿವೈಗೆ ವರವೂ ಆಗಬಹುದು, ಶಾಪವೂ ಆಗಬಹುದು..!

andolana

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

8 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

11 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

13 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

13 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

13 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

13 hours ago