ಜಿಲ್ಲೆಗಳು

ಎಚ್ ಡಿ ಕೆ ಮತ್ತು ಸಿ. ಪಿ. ಯೋಗೇಶ್ವರ್ ನಡುವೆ ‘ನಾನಾ’ ‘ನೀನಾ’ ಗುದ್ದಾಟ !

ಚನ್ನಪಟ್ಟಣ; ಗುದ್ದಾಟ ಗಮನಿಸಿದರೆ, ಸಿಪಿವೈ ವರ್ಚಸ್ಸು ಹೆಚ್ಚಳ ಆಗುವ ಸಾಧ್ಯತೆಗಳೇ ನಿಚ್ಚಳವಾಗಿ ಕಂಡು ಬರ್ತಿದೆ. 2023 ರ ಚುನಾವಣೆಗೆ ಈ ಗುದ್ದಾಟ ಎಚ್ಚರಿಕೆ ಗಂಟೆಯಾಗಿ ಪರಿಣಮಿಸಿದೆ. ಸಿಪಿವೈಗೆ ಪಕ್ಷದಲ್ಲಿ ಮತ್ತಷ್ಟು ಗುರುತಿಸಿಕೊಳ್ಳಲು ಅವಕಾಶ ಸಿಗಬಹುದು. ಜೊತೆಗೆ ಈ ಪ್ರಕರಣ ರಾಷ್ಟ್ರಿಯ ಬಿಜೆಪಿ ನಾಯಕರ ಗಮನ ಸೆಳೆದಿರುವ ಹಿನ್ನೆಲೆಯಲ್ಲಿ, ಇದೇ ಘಟನೆ ಆಧರಿಸಿ ಸಿಪಿವೈಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತರೂ ಇಲ್ಲ ಅಚ್ಚರಿ ಎಂದೇ ವಿಶ್ಲೇಷಿಸಲಾಗುತ್ತಿದೆ. ಬಿಜೆಪಿ ತಂಡ ಸಿಪಿವೈ ಬೆಂಬಲಕ್ಕೆ‌ ನಿಲ್ಲುವ ಸಾಧ್ಯತೆಗಳು ಗೋಚರಿಸುತ್ತಿವೆ

ಚನ್ನಪಟ್ಟಣದಲ್ಲಿ ನಡೆದ ಅಭಿವೃದ್ಧಿ ಗಲಾಟೆ ವಿಚಾರ 2023 ರ ಚುನಾವಣೆ ಗುದ್ದಾಟಕ್ಕೆ ಮುನ್ನುಡಿ ಬರೆದಿದೆ! ಶನಿವಾರ ನಡೆದ ಗಲಾಟೆಯನ್ನು ಗಮನಿಸಿದರೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ಹೇಗಿರಲಿದೆ ಎಂಬುದರ ಮುನ್ಸೂಚನೆಯಾಗಿದೆ. ಈ ಗುದ್ದಾಟವು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ ನಡುವೆ ‘ನಾನಾ’ ‘ನೀನಾ’ ಕಾದಾಟದ ಆರಂಭ ಎಂದೇ ವಿಶ್ಲೇಷಿಸಲಾಗುತ್ತಿದೆ.

ಯಾರಿಗೆ ಪ್ಲಸ್? ಯಾರಿಗೆ ಮೈನಸ್ ?
ಈ ಗುದ್ದಾಟದ ತೀವ್ರತೆ ಗಮನಿಸಿದರೆ, ಸಿ. ಪಿ. ಯೋಗೇಶ್ವರ್ ವರ್ಚಸ್ಸು ಹೆಚ್ಚಳ ಆಗುವ ಸಾಧ್ಯತೆಗಳೇ ನಿಚ್ಚಳವಾಗಿ ಕಂಡು ಬರ್ತಿದೆ. 2023 ರ ಚುನಾವಣೆಗೆ ಈ ಗುದ್ದಾಟ ಎಚ್ಚರಿಕೆ ಗಂಟೆಯಾಗಿ ಪರಿಣಮಿಸಿದೆ. ಸಿಪಿವೈಗೆ ಪಕ್ಷದಲ್ಲಿ ಮತ್ತಷ್ಟು ಗುರುತಿಸಿಕೊಳ್ಳಲು ಅವಕಾಶ ಸಿಗಬಹುದು. ಜೊತೆಗೆ ಈ ಪ್ರಕರಣ ರಾಷ್ಟ್ರಿಯ ಬಿಜೆಪಿ ನಾಯಕರ ಗಮನ ಸೆಳೆದಿರುವ ಹಿನ್ನೆಲೆಯಲ್ಲಿ, ಇದೇ ಘಟನೆ ಆಧರಿಸಿ ಸಿಪಿವೈಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತರೂ ಇಲ್ಲ ಅಚ್ಚರಿ ಎಂದೇ ವಿಶ್ಲೇಷಿಸಲಾಗುತ್ತಿದೆ. ಈಗಾಗಲೇ ಇಡೀ ಬಿಜೆಪಿ ತಂಡ ಸಿಪಿವೈ ಬೆಂಬಲಕ್ಕೆ‌ ನಿಲ್ಲುವ ಸಾಧ್ಯತೆಗಳು ಗೋಚರಿಸುತ್ತಿವೆ. ಜೊತೆಯಲ್ಲೇ ಒಂದಷ್ಟು ಋಣಾತ್ಮಕ ಪರಿಣಾಮಗಳನ್ನೂ ಸಿ. ಪಿ. ಯೋಗೇಶ್ವರ್ ಎದುರಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಚುನಾವಣೆ ಸಮಯದಲ್ಲಿ ತಮ್ಮದೇ ಪಕ್ಷದ ನಾಯಕರಿಂದ ಸಿಪಿವೈ ಚೀಮಾರಿಗೆ ಒಳಗಾಗುವ ಸಾಧ್ಯತೆಯೂ ಇಲ್ಲದಿಲ್ಲ. ಎಲ್ಲಕ್ಕಿಂತಾ ಹೆಚ್ಚಾಗಿ ಸಚಿವ ಸಂಪುಟದ ವಿಸ್ತರಣೆ ಸಮಯದಲ್ಲಿ ಸಿಪಿವೈ ವಿರೋಧಿಗಳು ಇದೇ ಗಲಾಟೆಯನ್ನು ಅಸ್ತ್ರ ಮಾಡಿಕೊಂಡು ಸಿಪಿವೈಗೆ ಸ್ಥಾನ ತಪ್ಪಿಸಲು ಯತ್ನಿಸುವ ಸಾಧ್ಯತೆಗಳೂ ಇಲ್ಲದಿಲ್ಲ. ಹೀಗಾಗಿ, ಶನಿವಾರ ನಡೆದ ಹೈಡ್ರಾಮಾ, ಸಿಪಿವೈಗೆ ವರವೂ ಆಗಬಹುದು, ಶಾಪವೂ ಆಗಬಹುದು..!

andolana

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

7 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

7 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

7 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

7 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

11 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

12 hours ago