ಜಿಲ್ಲೆಗಳು

ಎಚ್ ಡಿ ಕೆ ಮತ್ತು ಸಿ. ಪಿ. ಯೋಗೇಶ್ವರ್ ನಡುವೆ ‘ನಾನಾ’ ‘ನೀನಾ’ ಗುದ್ದಾಟ !

ಚನ್ನಪಟ್ಟಣ; ಗುದ್ದಾಟ ಗಮನಿಸಿದರೆ, ಸಿಪಿವೈ ವರ್ಚಸ್ಸು ಹೆಚ್ಚಳ ಆಗುವ ಸಾಧ್ಯತೆಗಳೇ ನಿಚ್ಚಳವಾಗಿ ಕಂಡು ಬರ್ತಿದೆ. 2023 ರ ಚುನಾವಣೆಗೆ ಈ ಗುದ್ದಾಟ ಎಚ್ಚರಿಕೆ ಗಂಟೆಯಾಗಿ ಪರಿಣಮಿಸಿದೆ. ಸಿಪಿವೈಗೆ ಪಕ್ಷದಲ್ಲಿ ಮತ್ತಷ್ಟು ಗುರುತಿಸಿಕೊಳ್ಳಲು ಅವಕಾಶ ಸಿಗಬಹುದು. ಜೊತೆಗೆ ಈ ಪ್ರಕರಣ ರಾಷ್ಟ್ರಿಯ ಬಿಜೆಪಿ ನಾಯಕರ ಗಮನ ಸೆಳೆದಿರುವ ಹಿನ್ನೆಲೆಯಲ್ಲಿ, ಇದೇ ಘಟನೆ ಆಧರಿಸಿ ಸಿಪಿವೈಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತರೂ ಇಲ್ಲ ಅಚ್ಚರಿ ಎಂದೇ ವಿಶ್ಲೇಷಿಸಲಾಗುತ್ತಿದೆ. ಬಿಜೆಪಿ ತಂಡ ಸಿಪಿವೈ ಬೆಂಬಲಕ್ಕೆ‌ ನಿಲ್ಲುವ ಸಾಧ್ಯತೆಗಳು ಗೋಚರಿಸುತ್ತಿವೆ

ಚನ್ನಪಟ್ಟಣದಲ್ಲಿ ನಡೆದ ಅಭಿವೃದ್ಧಿ ಗಲಾಟೆ ವಿಚಾರ 2023 ರ ಚುನಾವಣೆ ಗುದ್ದಾಟಕ್ಕೆ ಮುನ್ನುಡಿ ಬರೆದಿದೆ! ಶನಿವಾರ ನಡೆದ ಗಲಾಟೆಯನ್ನು ಗಮನಿಸಿದರೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ಹೇಗಿರಲಿದೆ ಎಂಬುದರ ಮುನ್ಸೂಚನೆಯಾಗಿದೆ. ಈ ಗುದ್ದಾಟವು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ ನಡುವೆ ‘ನಾನಾ’ ‘ನೀನಾ’ ಕಾದಾಟದ ಆರಂಭ ಎಂದೇ ವಿಶ್ಲೇಷಿಸಲಾಗುತ್ತಿದೆ.

ಯಾರಿಗೆ ಪ್ಲಸ್? ಯಾರಿಗೆ ಮೈನಸ್ ?
ಈ ಗುದ್ದಾಟದ ತೀವ್ರತೆ ಗಮನಿಸಿದರೆ, ಸಿ. ಪಿ. ಯೋಗೇಶ್ವರ್ ವರ್ಚಸ್ಸು ಹೆಚ್ಚಳ ಆಗುವ ಸಾಧ್ಯತೆಗಳೇ ನಿಚ್ಚಳವಾಗಿ ಕಂಡು ಬರ್ತಿದೆ. 2023 ರ ಚುನಾವಣೆಗೆ ಈ ಗುದ್ದಾಟ ಎಚ್ಚರಿಕೆ ಗಂಟೆಯಾಗಿ ಪರಿಣಮಿಸಿದೆ. ಸಿಪಿವೈಗೆ ಪಕ್ಷದಲ್ಲಿ ಮತ್ತಷ್ಟು ಗುರುತಿಸಿಕೊಳ್ಳಲು ಅವಕಾಶ ಸಿಗಬಹುದು. ಜೊತೆಗೆ ಈ ಪ್ರಕರಣ ರಾಷ್ಟ್ರಿಯ ಬಿಜೆಪಿ ನಾಯಕರ ಗಮನ ಸೆಳೆದಿರುವ ಹಿನ್ನೆಲೆಯಲ್ಲಿ, ಇದೇ ಘಟನೆ ಆಧರಿಸಿ ಸಿಪಿವೈಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತರೂ ಇಲ್ಲ ಅಚ್ಚರಿ ಎಂದೇ ವಿಶ್ಲೇಷಿಸಲಾಗುತ್ತಿದೆ. ಈಗಾಗಲೇ ಇಡೀ ಬಿಜೆಪಿ ತಂಡ ಸಿಪಿವೈ ಬೆಂಬಲಕ್ಕೆ‌ ನಿಲ್ಲುವ ಸಾಧ್ಯತೆಗಳು ಗೋಚರಿಸುತ್ತಿವೆ. ಜೊತೆಯಲ್ಲೇ ಒಂದಷ್ಟು ಋಣಾತ್ಮಕ ಪರಿಣಾಮಗಳನ್ನೂ ಸಿ. ಪಿ. ಯೋಗೇಶ್ವರ್ ಎದುರಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಚುನಾವಣೆ ಸಮಯದಲ್ಲಿ ತಮ್ಮದೇ ಪಕ್ಷದ ನಾಯಕರಿಂದ ಸಿಪಿವೈ ಚೀಮಾರಿಗೆ ಒಳಗಾಗುವ ಸಾಧ್ಯತೆಯೂ ಇಲ್ಲದಿಲ್ಲ. ಎಲ್ಲಕ್ಕಿಂತಾ ಹೆಚ್ಚಾಗಿ ಸಚಿವ ಸಂಪುಟದ ವಿಸ್ತರಣೆ ಸಮಯದಲ್ಲಿ ಸಿಪಿವೈ ವಿರೋಧಿಗಳು ಇದೇ ಗಲಾಟೆಯನ್ನು ಅಸ್ತ್ರ ಮಾಡಿಕೊಂಡು ಸಿಪಿವೈಗೆ ಸ್ಥಾನ ತಪ್ಪಿಸಲು ಯತ್ನಿಸುವ ಸಾಧ್ಯತೆಗಳೂ ಇಲ್ಲದಿಲ್ಲ. ಹೀಗಾಗಿ, ಶನಿವಾರ ನಡೆದ ಹೈಡ್ರಾಮಾ, ಸಿಪಿವೈಗೆ ವರವೂ ಆಗಬಹುದು, ಶಾಪವೂ ಆಗಬಹುದು..!

andolana

Recent Posts

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

2 mins ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

9 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

9 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

10 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

10 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

10 hours ago