ಜಿಲ್ಲೆಗಳು

ಮಹಿಳೆಯ ಕೊಲೆ ಮಾಡಿ ತಾನೂ ಸಾವಿಗೆ ಶರಣು

ಹನೂರು : ಮಹಿಳೆಯೊಬ್ಬರನ್ನು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ದುರುಳ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ನಾಗಮಲೆ ಗ್ರಾಮದಲ್ಲಿ ನಡೆದಿದೆ.
ಹನೂರು ತಾಲ್ಲೂಕಿನ ನಾಗಮಲೆ ಗ್ರಾಮದ ಲಕ್ಷ್ಮಿ ( 35) ಕೊಲೆಯಾದವರು. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮುನಿರಾಜ್ ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.
ಮೂಲತಃ ತಮಿಳುನಾಡಿನ ಪೆನ್ನಾಗರಂ ನಿವಾಸಿ ಲಕ್ಷ್ಮಿಯನ್ನು ಕಳೆದ 7 ತಿಂಗಳ ಹಿಂದೆ ನಾಗಮಲೆ ಗ್ರಾಮದ ರಮೇಶ್ ಎಂಬಾತ ಕೂಡಾವಳಿ ವಿವಾಹ ಮಾಡಿಕೊಂಡು ನಾಗಮಲೆಗೆ ಕರೆತಂದಿದ್ದ. ಮಂಗಳವಾರ ರಮೇಶ್ ಬೇರೆ ಊರಿಗೆ ಹೋಗಿದ್ದ ವೇಳೆ ಬಂದ ಪ್ರಿಯಕರ ಮುನಿರಾಜು ಲಕ್ಷ್ಮಿಯನ್ನು ಕೊಂದು ತಾನೂ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಲಕ್ಷ್ಮಿಯನ್ನು ಕೊಲೆ ಮಾಡಿ ಫೇಸ್‌ಬುಕ್ ಲೈವ್ ಮಾಡಿರುವ ಪ್ರಿಯಕರ, ‘ನನ್ನನ್ನು ಕೊಲೆಗಾರನನ್ನಾಗಿಸಿದೆಯಲ್ಲಾ ಲಕ್ಷ್ಮಿ, ನಾನೇ ನಿನ್ನನ್ನು ಕೊಲೆ ಮಾಡಿದೆನಲ್ಲಾ, ನಿನ್ನ ರಕ್ತವನ್ನು ಕಾಣಲು ನನ್ನಲ್ಲಾಗುತ್ತಿಲ್ಲ’ ಎಂದು ಅಳುತ್ತಾ ವಿಡಿಯೋ ಮಾಡಿದ್ದಾನೆ. ಮೇಲ್ನೋಟಕ್ಕೆ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಮಲೆಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಮುಂದಿನ ಕ್ರಮ ಕೈಗೊಂಡಿದ್ದಾರೆ.

andolanait

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

8 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

9 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

10 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

11 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

11 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

11 hours ago