ಹನೂರು : ಮಹಿಳೆಯೊಬ್ಬರನ್ನು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ದುರುಳ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ನಾಗಮಲೆ ಗ್ರಾಮದಲ್ಲಿ ನಡೆದಿದೆ.
ಹನೂರು ತಾಲ್ಲೂಕಿನ ನಾಗಮಲೆ ಗ್ರಾಮದ ಲಕ್ಷ್ಮಿ ( 35) ಕೊಲೆಯಾದವರು. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮುನಿರಾಜ್ ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.
ಮೂಲತಃ ತಮಿಳುನಾಡಿನ ಪೆನ್ನಾಗರಂ ನಿವಾಸಿ ಲಕ್ಷ್ಮಿಯನ್ನು ಕಳೆದ 7 ತಿಂಗಳ ಹಿಂದೆ ನಾಗಮಲೆ ಗ್ರಾಮದ ರಮೇಶ್ ಎಂಬಾತ ಕೂಡಾವಳಿ ವಿವಾಹ ಮಾಡಿಕೊಂಡು ನಾಗಮಲೆಗೆ ಕರೆತಂದಿದ್ದ. ಮಂಗಳವಾರ ರಮೇಶ್ ಬೇರೆ ಊರಿಗೆ ಹೋಗಿದ್ದ ವೇಳೆ ಬಂದ ಪ್ರಿಯಕರ ಮುನಿರಾಜು ಲಕ್ಷ್ಮಿಯನ್ನು ಕೊಂದು ತಾನೂ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಲಕ್ಷ್ಮಿಯನ್ನು ಕೊಲೆ ಮಾಡಿ ಫೇಸ್ಬುಕ್ ಲೈವ್ ಮಾಡಿರುವ ಪ್ರಿಯಕರ, ‘ನನ್ನನ್ನು ಕೊಲೆಗಾರನನ್ನಾಗಿಸಿದೆಯಲ್ಲಾ ಲಕ್ಷ್ಮಿ, ನಾನೇ ನಿನ್ನನ್ನು ಕೊಲೆ ಮಾಡಿದೆನಲ್ಲಾ, ನಿನ್ನ ರಕ್ತವನ್ನು ಕಾಣಲು ನನ್ನಲ್ಲಾಗುತ್ತಿಲ್ಲ’ ಎಂದು ಅಳುತ್ತಾ ವಿಡಿಯೋ ಮಾಡಿದ್ದಾನೆ. ಮೇಲ್ನೋಟಕ್ಕೆ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಮಲೆಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…