ಕಳೆದ ಎರಡು ವಾರಗಳ ಹಿಂದೆ ಮಂಡ್ಯ ಜಿಲ್ಲೆಯ ಆಲೆಮನೆಯೊಂದರಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದ ವಿವಿಧ ನಗರಗಳಲ್ಲಿನ ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಸರಿಯಾದ ದಾಖಲೆ ಇಲ್ಲದ ಸ್ಕ್ಯಾನಿಂಗ್ ಸೆಂಟರ್ಗಳಿಗೆ ನೋಟಿಸ್ ನೀಡಿ ಬಂದ್ ಮಾಡಲಾಗುತ್ತಿದೆ.
ಇದೀಗ ಮಂಡ್ಯ ಜಿಲ್ಲೆಯ ನಾಗಮಂಗಲದ ಎರಡು ಸ್ಕ್ಯಾನಿಂಗ್ ಸೆಂಟರ್ನಲ್ಲಿ ಅಕ್ರಮ ಕಂಡುಬಂದಿದ್ದು ಆರೋಗ್ಯ ಅಧಿಕಾರಿಗಳು ಆ ಎರಡೂ ಸ್ಕ್ಯಾನಿಂಗ್ ಸೆಂಟರ್ಗಳನ್ನೂ ಸೀಜ್ ಮಾಡಿದ್ದಾರೆ. ಹೌದು, ನಾಗಮಂಗಲದ ಕಾವೇರಿ ಹಾಗೂ ಲಕ್ಷ್ಮಿ ಡಯಾಗ್ನೋಸ್ಟಿಕ್ ಸೆಂಟರ್ಗಳಿಗೆ ಆರೋಗ್ಯ ಅಧಿಕಾರಿಗಳು ಪರಿಶೀಲನೆಗೆಂದು ತೆರಳಿದ್ದು ಈ ಎರಡೂ ಸೆಂಟರ್ಗಳಲ್ಲಿ ಸಿಬ್ಬಂದಿ ಡೇಟಾವನ್ನೇ ಅಳಿಸಿಹಾಕಿರುವುದು ಬೆಳಕಿಗೆ ಬಂದಿದೆ.
ಲಕ್ಷ್ಮಿ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ 2 ವರ್ಷದ ದಾಖಲೆಗಳನ್ನು ನಾಶ ಮಾಡಲಾಗಿದ್ದು, ಕಾವೇರಿ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ 3 ತಿಂಗಳ ಮಾಹಿತಿಯನ್ನು ಡಿಲೀಟ್ ಮಾಡಲಾಗಿದೆ. ನಾಗಮಂಗಲ ಸರ್ಕಾರಿ ಆಸ್ಪತ್ರೆಯ ಸಮೀಪವೇ ಈ ಸ್ಕ್ಯಾನಿಂಗ್ ಸೆಂಟರ್ಗಳಿವೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…