ಜಿಲ್ಲೆಗಳು

ಆರೋಗ್ಯ ವ್ಯವಸ್ಥೆ ಸುಧಾರಿಸಿ ಎಂದಿದ್ದಕ್ಕೆ ಆರೋಗ್ಯ ಸಚಿವರ ಉಪದೇಶವೆನು ?

ಕಾರವಾರ : ಜಿಲ್ಲೆಯಲ್ಲಿ ಆರೋಗ್ಯ ಮೂಲಸೌಕರ್ಯಗಳ ಸುಧಾರಣೆ ಮಾಡಿಕೊಡಿ ಎಂದು ಕೇಳಿದ ಪತ್ರಕರ್ತರಿಗೆ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರು, ಜಿಲ್ಲೆಯಲ್ಲಾಗಿರುವ ಆರೋಗ್ಯ ಸೌಕರ್ಯಗಳ ಕುರಿತು ಪ್ರವಚನ ನೀಡಿರುವ ಘಟನೆ ಮಂಗಳವಾರ ನಡೆದಿದೆ.

‘’ಭೌಗೋಳಿಕವಾಗಿ ವಿಸ್ತಾರವಾದ ಹಾಗೂ ಸೂಕ್ತ ವೈದ್ಯಕೀಯ ವ್ಯವಸ್ಥೆ ಇಲ್ಲದ ಉತ್ತರಕನ್ನಡ ಜಿಲ್ಲೆಯ ಜನತೆಗೆ ತುರ್ತು ಸಂದರ್ಭದಲ್ಲಿ ಹೊರ ಜಿಲ್ಲೆಗಳನ್ನು ಚಿಕಿತ್ಸೆಗಾಗಿ ಆಶ್ರಯಿಸಬೇಕಿದೆ. ಈ ವೇಳೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನ ರೆಫರಲ್ ಗಾಗಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡುವಷ್ಟು ಸಮಯ ಅಥವಾ ವ್ಯವಧಾನ ಇಲ್ಲದವರು ಪಕ್ಕದ ಜಿಲ್ಲೆಯ ಆಸ್ಪತ್ರೆಗಳಿಗೆ ಹೋಗಿ ದಾಖಲಾಗುತ್ತಾರೆ. ದಾಖಲಾದ ಬಳಿಕ ಆರೋಗ್ಯ ಕಾರ್ಡ್ ಪ್ರಯೋಜನ ಸಿಗುತ್ತಿಲ್ಲ. ಹೀಗಾಗಿ ಕಾರ್ಡ್ ನಿಯಮಗಳಲ್ಲಿ ಕೊಂಚ ಸಡಿಲಿಕೆ ನೀಡಬೇಕಿದೆ’’ ಎಂದು ಪತ್ರಕರ್ತರು ಸಚಿವರನ್ನು ಕೇಳಿದ್ದರು.

ಅದಕ್ಕೆ ಉತ್ತರಿಸಿದ ಸಚಿವರು, ‘’ಬೇರೆ ರಾಜ್ಯಗಳ ಚಿತ್ರಣ‌ ನಿಮಗೆ ಗೊತ್ತಿಲ್ಲ. ಹೀಗಾಗಿ ಬಹಳ ಚೆನ್ನಾಗಿ ಪ್ರಶ್ನೆ ಕೇಳುತ್ತೀರಿ ಎಂದಿದ್ದಾರೆ. ಅಲ್ಲದೆ, ಬೇರೆ ರಾಜ್ಯಗಳಿಗೆ ಭೇಟಿ ನೀಡಿದರೆ ಕರ್ನಾಟಕ ಸ್ವರ್ಗ ಎನ್ನುತ್ತೀರಿ. ನಾನು ತಮಾಷೆ ಮಾಡುತ್ತಿಲ್ಲ. ನಾನು ಸತ್ಯ ಹೇಳುತ್ತಿದ್ದೇನೆ. ನೀವು ಈ ದೇಶದ ಕೆಲವು ರಾಜ್ಯಗಳಿಗೆ ಭೇಟಿ ಕೊಟ್ಟು ಆರೋಗ್ಯ ವ್ಯವಸ್ಥೆಗಳನ್ನ ನೋಡಿ ಕರ್ನಾಟಕದ ಬಗ್ಗೆ ಮಾತನಾಡಿ. ಒಂದೇ ಒಂದು ಕಿದ್ವಾಯಿ ಇತ್ತು, ಈಗ ಎಷ್ಟು ಕಡೆ ಮಾಡಿದ್ದೇವೆ? ಎಷ್ಟು ಕಡೆಗಳಲ್ಲಿ ರೇಡಿಯೋ ಥೆರಪಿ, ಕಿಮೋ ಥೆರಪಿ ಮಾಡಿದ್ದೇವೆ. ಈ ಬಾರಿಯ ಬಜೆಟ್ ನಲ್ಲಿ 16 ಕಡೆ ಈ ಬಾರಿ ಕಿಮೋ ಥೆರಪಿ ಮಾಡಿದ್ದೇವೆ. ಎಲ್ಲವನ್ನೂ ಎಲ್ಲಾ ಕಡೆ ಮಾಡಲಾಗುವುದಿಲ್ಲ’’ ಎಂದಿದ್ದಾರೆ.

andolana

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

7 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

11 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

11 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

12 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

13 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

13 hours ago