ಜಿಲ್ಲೆಗಳು

ಆರೋಗ್ಯ ಸಚಿವ ಡಾ.ಸುಧಾಕರ್ ರಾಜೀನಾಮೆಗೆ ವಾಟಾಳ್ ನಾಗರಾಜ್ ಆಗ್ರಹ

ಚಾಮರಾಜನಗರ : ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಮೇತ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ. ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್‌ನಾಗರಾಜ್ ಆಗ್ರಹಿಸಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಚಾಮರಾಜನಗರ ಸಮಗ್ರ ಅಭಿವೃದ್ದಿಗೆ ಒತ್ತಾಯಿಸಿ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಮೇತ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರು ರಾಜೀನಾಮೆ ಕೊಟ್ಟರೆ ಗೌರವ ಬರುತ್ತದೆ. ಗೌರವ ಹೆಚ್ಚಾಗುತ್ತದೆ. ಇದು ಬಹಳ ಅತ್ಯಂತ ಕಣ್ಣೀರಿನ ಕಥೆ ಇದು ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ವಾಟಾಳ್ ಒತ್ತಾಯಿಸಿದರು.
ಆಸ್ಪತ್ರೆಗಳು ಜನರ ಶತ್ರುಗಳಾಗಬಾರದು : ಕರ್ನಾಟಕ ರಾಜ್ಯದ ಆಸ್ಪತ್ರೆಗಳು ಜನರಸೇವೆ ಸದಾ ಸಿದ್ದವಿರಬೇಕು. ಆಸ್ಪತ್ರೆಗಳು ಜನರ ಶತ್ರುಗಳಾಗಬಾರದು. ಇಡೀ ರಾಜ್ಯದಲ್ಲಿ ಆಸ್ಪತ್ರೆಗಳು ಕ್ಷಿಣವಾಗುತ್ತವೆ. ಸರ್ಕಾರ ಆಸ್ಪತ್ರೆಗಳನ್ನು ಬಹಳ ಉನ್ನತಮಟ್ಟಕ್ಕೆ ತರಬೇಕು. ಸುಮಾರು ಈಗಾಗಲೇ ಅನೇಕ ಆಸ್ಪತ್ರೆಗಳಲ್ಲಿ ಬೇಜಾಬ್ದಾರಿಯಿಂದ ಅನೇಕರು ಸತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ೨೭ ಜನರು ಆಮ್ಲಜನಿಕ ಇಲ್ಲದ ಸತ್ತಿದ್ದಾರೆ. ಇಂದಿನವರೆಗೂ ಮೃತ ಕುಟುಂಬಗಳಿಗೆ ಪರಿಹಾರ ಸಿಕ್ಕಿಲ್ಲ. ಇಡೀ ಸಮಗ್ರವಾಗಿ ಸರ್ಕಾರ ಕಡೆಗಣಿಸಿದೆ. ಇದು ನಿಜಕ್ಕೂ ಅತ್ಯಂತ ಅಗೌರವ. ಆಸ್ಪತ್ರೆಗಳನ್ನು ಉನ್ನತ ಸ್ಥಿತಿಗೆ ತರಬೇಕಾದದ್ದು ಸರ್ಕಾರ ಕರ್ತವ್ಯವಾಗಿದೆ ಎಂದರು.
ಚಾಮರಾಜನಗರದ ಸಮಗ್ರ ಅಭಿವೃದ್ದಿ ಬಗ್ಗೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಜಿಲ್ಲೆಗೆ ಸರ್ಕಾರ ಆಂiÀiವ್ಯಯದಲ್ಲಿ ಅನುದಾನ ಕೊಟ್ಟಿಲ್ಲ. ಕಡೆಗಣಿಸಿದ್ದಾರೆ. ಚಾಮರಾಜನಗರದ ಅನೇಕ ಯೋಜನೆಗಳು ನೆನೆಗುದಿಗೆ ಬಿದ್ದಿದೆ. ಜಿಲ್ಲಾ ಕ್ರೀಡಾಂಗಣ ಕಾಮಗಾರಿ ಆರಂಭಗೊAಡು ೨೦ ವರ್ಷಗಳಾಯಿತು. ಮೈದಾನ ಕಾಮಗಾರಿ ಪೂರ್ಣವಾಗಿಲ್ಲ ಸರ್ಕಾರ ಅನುದಾನ ನೀಡಿಲ್ಲ. ತೀರ ಹದಗೆಟ್ಟಿದ್ದು, ಅಭಿವೃದ್ದಿಯಾಗಿರುವ ಕೆಲಸವೂ ಮೂಲೆಗುಂಪಾಗುತ್ತಿದೆ. ಜಿಲ್ಲಾ ಕ್ರೀಡಾಂಗಣ ರಾಜ್ಯಕ್ಕೊಂದು ದೊಡ್ಡದಾಗಬೇಕಾಗಿತ್ತು. ಆದರೆ ಸರ್ಕಾರ ಜಿಲ್ಲಾ ಕ್ರೀಡಾಂಗಣವನ್ನು ಕಡೆಗಣಿಸಿದ್ದಾರೆ. ಹಳ್ಳಿಗಳಿಗೆ ನಿವೇಶನ ಹಂಚಿಲ್ಲ. ಮನೆಗಳನ್ನು ಕೊಟ್ಟಿಲ್ಲ. ವೃದ್ದಾಪ್ಯವೇತನ ಹಂಚಿಲ್ಲ. ಸಾಗುವಳಿ ಚೀಟಿ ಹಂಚಿಲ್ಲ. ರಾಜ್ಯ ಸರ್ಕಾರ ಸಂಪೂರ್ಣವಾಗಿ ಚಾಮರಾಜನಗರವನ್ನು ಕಡೆಗಣಿಸಿದ್ದಾರೆ ಎಂದು ವಾಟಾಳ್ ನಾಗರಾಜ್ ಆರೋಪಿಸಿದರು.
ಪ್ರತಿಭಟನೆಯಲ್ಲಿ ಅಜಯ್, ಶಿವಲಿಂಗಮೂರ್ತಿ, ಹುಂಡಿ ಬಸವಣ್ಣ, ಪಾರ್ಥಸಾರಥಿ, ರೇವಣ್ಣಸ್ವಾಮಿ, ಚೆನ್ನಂಜಪ್ಪ ಇತರರು ಭಾಗವಹಿಸಿದ್ದರು

andolanait

Recent Posts

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

8 mins ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

30 mins ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

41 mins ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

1 hour ago

ಮಡಿಕೇರಿ | ಕಾರಿನ ಮೇಲೆ ಉರುಳಿ ಬಿದ್ದ ಪ್ರವಾಸಿಗರ ಬಸ್

ಮಡಿಕೇರಿ : ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…

2 hours ago

ಎಲ್‌ಪಿಜಿ ಹೊತ್ತ ಮತ್ತೊಂದು ಹಡಗು ಭಾರತದತ್ತ

ಅನುಮತಿಗಾಗಿ ಕಾಯುತ್ತಿರುವ ಮತ್ತೆರಡು ಹಡಗುಗಳು ಹೊಸದಿಲ್ಲಿ : ಸುಮಾರು 46,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಇಂಧನ ಹೊತ್ತ ದೊಡ್ಡ ದ್ರವೀಕೃತ…

2 hours ago