ಜಿಲ್ಲೆಗಳು

ಆರೋಗ್ಯ ಸಚಿವ ಡಾ.ಸುಧಾಕರ್ ರಾಜೀನಾಮೆಗೆ ವಾಟಾಳ್ ನಾಗರಾಜ್ ಆಗ್ರಹ

ಚಾಮರಾಜನಗರ : ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಮೇತ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ. ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್‌ನಾಗರಾಜ್ ಆಗ್ರಹಿಸಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಚಾಮರಾಜನಗರ ಸಮಗ್ರ ಅಭಿವೃದ್ದಿಗೆ ಒತ್ತಾಯಿಸಿ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಮೇತ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರು ರಾಜೀನಾಮೆ ಕೊಟ್ಟರೆ ಗೌರವ ಬರುತ್ತದೆ. ಗೌರವ ಹೆಚ್ಚಾಗುತ್ತದೆ. ಇದು ಬಹಳ ಅತ್ಯಂತ ಕಣ್ಣೀರಿನ ಕಥೆ ಇದು ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ವಾಟಾಳ್ ಒತ್ತಾಯಿಸಿದರು.
ಆಸ್ಪತ್ರೆಗಳು ಜನರ ಶತ್ರುಗಳಾಗಬಾರದು : ಕರ್ನಾಟಕ ರಾಜ್ಯದ ಆಸ್ಪತ್ರೆಗಳು ಜನರಸೇವೆ ಸದಾ ಸಿದ್ದವಿರಬೇಕು. ಆಸ್ಪತ್ರೆಗಳು ಜನರ ಶತ್ರುಗಳಾಗಬಾರದು. ಇಡೀ ರಾಜ್ಯದಲ್ಲಿ ಆಸ್ಪತ್ರೆಗಳು ಕ್ಷಿಣವಾಗುತ್ತವೆ. ಸರ್ಕಾರ ಆಸ್ಪತ್ರೆಗಳನ್ನು ಬಹಳ ಉನ್ನತಮಟ್ಟಕ್ಕೆ ತರಬೇಕು. ಸುಮಾರು ಈಗಾಗಲೇ ಅನೇಕ ಆಸ್ಪತ್ರೆಗಳಲ್ಲಿ ಬೇಜಾಬ್ದಾರಿಯಿಂದ ಅನೇಕರು ಸತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ೨೭ ಜನರು ಆಮ್ಲಜನಿಕ ಇಲ್ಲದ ಸತ್ತಿದ್ದಾರೆ. ಇಂದಿನವರೆಗೂ ಮೃತ ಕುಟುಂಬಗಳಿಗೆ ಪರಿಹಾರ ಸಿಕ್ಕಿಲ್ಲ. ಇಡೀ ಸಮಗ್ರವಾಗಿ ಸರ್ಕಾರ ಕಡೆಗಣಿಸಿದೆ. ಇದು ನಿಜಕ್ಕೂ ಅತ್ಯಂತ ಅಗೌರವ. ಆಸ್ಪತ್ರೆಗಳನ್ನು ಉನ್ನತ ಸ್ಥಿತಿಗೆ ತರಬೇಕಾದದ್ದು ಸರ್ಕಾರ ಕರ್ತವ್ಯವಾಗಿದೆ ಎಂದರು.
ಚಾಮರಾಜನಗರದ ಸಮಗ್ರ ಅಭಿವೃದ್ದಿ ಬಗ್ಗೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಜಿಲ್ಲೆಗೆ ಸರ್ಕಾರ ಆಂiÀiವ್ಯಯದಲ್ಲಿ ಅನುದಾನ ಕೊಟ್ಟಿಲ್ಲ. ಕಡೆಗಣಿಸಿದ್ದಾರೆ. ಚಾಮರಾಜನಗರದ ಅನೇಕ ಯೋಜನೆಗಳು ನೆನೆಗುದಿಗೆ ಬಿದ್ದಿದೆ. ಜಿಲ್ಲಾ ಕ್ರೀಡಾಂಗಣ ಕಾಮಗಾರಿ ಆರಂಭಗೊAಡು ೨೦ ವರ್ಷಗಳಾಯಿತು. ಮೈದಾನ ಕಾಮಗಾರಿ ಪೂರ್ಣವಾಗಿಲ್ಲ ಸರ್ಕಾರ ಅನುದಾನ ನೀಡಿಲ್ಲ. ತೀರ ಹದಗೆಟ್ಟಿದ್ದು, ಅಭಿವೃದ್ದಿಯಾಗಿರುವ ಕೆಲಸವೂ ಮೂಲೆಗುಂಪಾಗುತ್ತಿದೆ. ಜಿಲ್ಲಾ ಕ್ರೀಡಾಂಗಣ ರಾಜ್ಯಕ್ಕೊಂದು ದೊಡ್ಡದಾಗಬೇಕಾಗಿತ್ತು. ಆದರೆ ಸರ್ಕಾರ ಜಿಲ್ಲಾ ಕ್ರೀಡಾಂಗಣವನ್ನು ಕಡೆಗಣಿಸಿದ್ದಾರೆ. ಹಳ್ಳಿಗಳಿಗೆ ನಿವೇಶನ ಹಂಚಿಲ್ಲ. ಮನೆಗಳನ್ನು ಕೊಟ್ಟಿಲ್ಲ. ವೃದ್ದಾಪ್ಯವೇತನ ಹಂಚಿಲ್ಲ. ಸಾಗುವಳಿ ಚೀಟಿ ಹಂಚಿಲ್ಲ. ರಾಜ್ಯ ಸರ್ಕಾರ ಸಂಪೂರ್ಣವಾಗಿ ಚಾಮರಾಜನಗರವನ್ನು ಕಡೆಗಣಿಸಿದ್ದಾರೆ ಎಂದು ವಾಟಾಳ್ ನಾಗರಾಜ್ ಆರೋಪಿಸಿದರು.
ಪ್ರತಿಭಟನೆಯಲ್ಲಿ ಅಜಯ್, ಶಿವಲಿಂಗಮೂರ್ತಿ, ಹುಂಡಿ ಬಸವಣ್ಣ, ಪಾರ್ಥಸಾರಥಿ, ರೇವಣ್ಣಸ್ವಾಮಿ, ಚೆನ್ನಂಜಪ್ಪ ಇತರರು ಭಾಗವಹಿಸಿದ್ದರು

andolanait

Recent Posts

ಮೈಸೂರು ಪಾಲಿಕೆಯಲ್ಲಿ ಅಕ್ರಮಗಳ ಸಂಖ್ಯೆ ಏರಿಕೆ: ಸಂಸದ ಯದುವೀರ್‌ ಆರೋಪ

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ…

8 mins ago

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…

46 mins ago

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…

1 hour ago

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…

1 hour ago

ಸರ್ಕಾರಿ ಕಾರ್ಯಕ್ರಮಗಳಲ್ಲಿ ಜನರ ಸುರಕ್ಷತೆ: ಹೊಸ ಸುತ್ತೋಲೆ

ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…

3 hours ago

ಲಕ್ಕುಂಡಿ ಬೆನ್ನಲ್ಲೇ ಯಾದಗಿರಿಯಲ್ಲೂ ಉತ್ಖನನ ನಡೆಸಲು ಸಿದ್ಧತೆ

ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…

3 hours ago