ಜಿಲ್ಲೆಗಳು

ಆರೋಗ್ಯ ಸಚಿವ ಡಾ.ಸುಧಾಕರ್ ರಾಜೀನಾಮೆಗೆ ವಾಟಾಳ್ ನಾಗರಾಜ್ ಆಗ್ರಹ

ಚಾಮರಾಜನಗರ : ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಮೇತ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ. ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್‌ನಾಗರಾಜ್ ಆಗ್ರಹಿಸಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಚಾಮರಾಜನಗರ ಸಮಗ್ರ ಅಭಿವೃದ್ದಿಗೆ ಒತ್ತಾಯಿಸಿ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಮೇತ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರು ರಾಜೀನಾಮೆ ಕೊಟ್ಟರೆ ಗೌರವ ಬರುತ್ತದೆ. ಗೌರವ ಹೆಚ್ಚಾಗುತ್ತದೆ. ಇದು ಬಹಳ ಅತ್ಯಂತ ಕಣ್ಣೀರಿನ ಕಥೆ ಇದು ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ವಾಟಾಳ್ ಒತ್ತಾಯಿಸಿದರು.
ಆಸ್ಪತ್ರೆಗಳು ಜನರ ಶತ್ರುಗಳಾಗಬಾರದು : ಕರ್ನಾಟಕ ರಾಜ್ಯದ ಆಸ್ಪತ್ರೆಗಳು ಜನರಸೇವೆ ಸದಾ ಸಿದ್ದವಿರಬೇಕು. ಆಸ್ಪತ್ರೆಗಳು ಜನರ ಶತ್ರುಗಳಾಗಬಾರದು. ಇಡೀ ರಾಜ್ಯದಲ್ಲಿ ಆಸ್ಪತ್ರೆಗಳು ಕ್ಷಿಣವಾಗುತ್ತವೆ. ಸರ್ಕಾರ ಆಸ್ಪತ್ರೆಗಳನ್ನು ಬಹಳ ಉನ್ನತಮಟ್ಟಕ್ಕೆ ತರಬೇಕು. ಸುಮಾರು ಈಗಾಗಲೇ ಅನೇಕ ಆಸ್ಪತ್ರೆಗಳಲ್ಲಿ ಬೇಜಾಬ್ದಾರಿಯಿಂದ ಅನೇಕರು ಸತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ೨೭ ಜನರು ಆಮ್ಲಜನಿಕ ಇಲ್ಲದ ಸತ್ತಿದ್ದಾರೆ. ಇಂದಿನವರೆಗೂ ಮೃತ ಕುಟುಂಬಗಳಿಗೆ ಪರಿಹಾರ ಸಿಕ್ಕಿಲ್ಲ. ಇಡೀ ಸಮಗ್ರವಾಗಿ ಸರ್ಕಾರ ಕಡೆಗಣಿಸಿದೆ. ಇದು ನಿಜಕ್ಕೂ ಅತ್ಯಂತ ಅಗೌರವ. ಆಸ್ಪತ್ರೆಗಳನ್ನು ಉನ್ನತ ಸ್ಥಿತಿಗೆ ತರಬೇಕಾದದ್ದು ಸರ್ಕಾರ ಕರ್ತವ್ಯವಾಗಿದೆ ಎಂದರು.
ಚಾಮರಾಜನಗರದ ಸಮಗ್ರ ಅಭಿವೃದ್ದಿ ಬಗ್ಗೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಜಿಲ್ಲೆಗೆ ಸರ್ಕಾರ ಆಂiÀiವ್ಯಯದಲ್ಲಿ ಅನುದಾನ ಕೊಟ್ಟಿಲ್ಲ. ಕಡೆಗಣಿಸಿದ್ದಾರೆ. ಚಾಮರಾಜನಗರದ ಅನೇಕ ಯೋಜನೆಗಳು ನೆನೆಗುದಿಗೆ ಬಿದ್ದಿದೆ. ಜಿಲ್ಲಾ ಕ್ರೀಡಾಂಗಣ ಕಾಮಗಾರಿ ಆರಂಭಗೊAಡು ೨೦ ವರ್ಷಗಳಾಯಿತು. ಮೈದಾನ ಕಾಮಗಾರಿ ಪೂರ್ಣವಾಗಿಲ್ಲ ಸರ್ಕಾರ ಅನುದಾನ ನೀಡಿಲ್ಲ. ತೀರ ಹದಗೆಟ್ಟಿದ್ದು, ಅಭಿವೃದ್ದಿಯಾಗಿರುವ ಕೆಲಸವೂ ಮೂಲೆಗುಂಪಾಗುತ್ತಿದೆ. ಜಿಲ್ಲಾ ಕ್ರೀಡಾಂಗಣ ರಾಜ್ಯಕ್ಕೊಂದು ದೊಡ್ಡದಾಗಬೇಕಾಗಿತ್ತು. ಆದರೆ ಸರ್ಕಾರ ಜಿಲ್ಲಾ ಕ್ರೀಡಾಂಗಣವನ್ನು ಕಡೆಗಣಿಸಿದ್ದಾರೆ. ಹಳ್ಳಿಗಳಿಗೆ ನಿವೇಶನ ಹಂಚಿಲ್ಲ. ಮನೆಗಳನ್ನು ಕೊಟ್ಟಿಲ್ಲ. ವೃದ್ದಾಪ್ಯವೇತನ ಹಂಚಿಲ್ಲ. ಸಾಗುವಳಿ ಚೀಟಿ ಹಂಚಿಲ್ಲ. ರಾಜ್ಯ ಸರ್ಕಾರ ಸಂಪೂರ್ಣವಾಗಿ ಚಾಮರಾಜನಗರವನ್ನು ಕಡೆಗಣಿಸಿದ್ದಾರೆ ಎಂದು ವಾಟಾಳ್ ನಾಗರಾಜ್ ಆರೋಪಿಸಿದರು.
ಪ್ರತಿಭಟನೆಯಲ್ಲಿ ಅಜಯ್, ಶಿವಲಿಂಗಮೂರ್ತಿ, ಹುಂಡಿ ಬಸವಣ್ಣ, ಪಾರ್ಥಸಾರಥಿ, ರೇವಣ್ಣಸ್ವಾಮಿ, ಚೆನ್ನಂಜಪ್ಪ ಇತರರು ಭಾಗವಹಿಸಿದ್ದರು

andolanait

Recent Posts

ಸಿದ್ದರಾಮಯ್ಯ ಪೂರ್ಣವಧಿ ಸಿಎಂ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆ ಪರ ಯಂತ್ರೀಂದ್ರ ಬ್ಯಾಟಿಂಗ್‌

ಬೆಳಗಾವಿ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್‌ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…

15 mins ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ಡಿಕೆಶಿ ಆಪ್ತ ಇನಾಯತ್‌ ಅಲಿಗೆ ದಿಲ್ಲಿ ಪೊಲೀಸರಿಂದ ನೋಟಿಸ್‌

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…

35 mins ago

ಇಂಡಿಗೋ ಬಿಕ್ಕಟ್ಟು : ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…

42 mins ago

ಜನವರಿಯಿಂದ ಇಂದಿರಾ ಕಿಟ್‌ ವಿತರಣೆ

ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…

1 hour ago

ಲ್ಯಾಂಡ್‌ ಲಾರ್ಡ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ ಲಾರ್ಡ್‌ ಚಿತ್ರದಲ್ಲಿ ನಟ ರಾಜ್‌ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…

1 hour ago

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು.!

ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…

2 hours ago