ಜಿಲ್ಲೆಗಳು

ಆರೋಗ್ಯ ಸಚಿವ ಡಾ.ಸುಧಾಕರ್ ರಾಜೀನಾಮೆಗೆ ವಾಟಾಳ್ ನಾಗರಾಜ್ ಆಗ್ರಹ

ಚಾಮರಾಜನಗರ : ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಮೇತ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ. ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್‌ನಾಗರಾಜ್ ಆಗ್ರಹಿಸಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಚಾಮರಾಜನಗರ ಸಮಗ್ರ ಅಭಿವೃದ್ದಿಗೆ ಒತ್ತಾಯಿಸಿ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಮೇತ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರು ರಾಜೀನಾಮೆ ಕೊಟ್ಟರೆ ಗೌರವ ಬರುತ್ತದೆ. ಗೌರವ ಹೆಚ್ಚಾಗುತ್ತದೆ. ಇದು ಬಹಳ ಅತ್ಯಂತ ಕಣ್ಣೀರಿನ ಕಥೆ ಇದು ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ವಾಟಾಳ್ ಒತ್ತಾಯಿಸಿದರು.
ಆಸ್ಪತ್ರೆಗಳು ಜನರ ಶತ್ರುಗಳಾಗಬಾರದು : ಕರ್ನಾಟಕ ರಾಜ್ಯದ ಆಸ್ಪತ್ರೆಗಳು ಜನರಸೇವೆ ಸದಾ ಸಿದ್ದವಿರಬೇಕು. ಆಸ್ಪತ್ರೆಗಳು ಜನರ ಶತ್ರುಗಳಾಗಬಾರದು. ಇಡೀ ರಾಜ್ಯದಲ್ಲಿ ಆಸ್ಪತ್ರೆಗಳು ಕ್ಷಿಣವಾಗುತ್ತವೆ. ಸರ್ಕಾರ ಆಸ್ಪತ್ರೆಗಳನ್ನು ಬಹಳ ಉನ್ನತಮಟ್ಟಕ್ಕೆ ತರಬೇಕು. ಸುಮಾರು ಈಗಾಗಲೇ ಅನೇಕ ಆಸ್ಪತ್ರೆಗಳಲ್ಲಿ ಬೇಜಾಬ್ದಾರಿಯಿಂದ ಅನೇಕರು ಸತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ೨೭ ಜನರು ಆಮ್ಲಜನಿಕ ಇಲ್ಲದ ಸತ್ತಿದ್ದಾರೆ. ಇಂದಿನವರೆಗೂ ಮೃತ ಕುಟುಂಬಗಳಿಗೆ ಪರಿಹಾರ ಸಿಕ್ಕಿಲ್ಲ. ಇಡೀ ಸಮಗ್ರವಾಗಿ ಸರ್ಕಾರ ಕಡೆಗಣಿಸಿದೆ. ಇದು ನಿಜಕ್ಕೂ ಅತ್ಯಂತ ಅಗೌರವ. ಆಸ್ಪತ್ರೆಗಳನ್ನು ಉನ್ನತ ಸ್ಥಿತಿಗೆ ತರಬೇಕಾದದ್ದು ಸರ್ಕಾರ ಕರ್ತವ್ಯವಾಗಿದೆ ಎಂದರು.
ಚಾಮರಾಜನಗರದ ಸಮಗ್ರ ಅಭಿವೃದ್ದಿ ಬಗ್ಗೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಜಿಲ್ಲೆಗೆ ಸರ್ಕಾರ ಆಂiÀiವ್ಯಯದಲ್ಲಿ ಅನುದಾನ ಕೊಟ್ಟಿಲ್ಲ. ಕಡೆಗಣಿಸಿದ್ದಾರೆ. ಚಾಮರಾಜನಗರದ ಅನೇಕ ಯೋಜನೆಗಳು ನೆನೆಗುದಿಗೆ ಬಿದ್ದಿದೆ. ಜಿಲ್ಲಾ ಕ್ರೀಡಾಂಗಣ ಕಾಮಗಾರಿ ಆರಂಭಗೊAಡು ೨೦ ವರ್ಷಗಳಾಯಿತು. ಮೈದಾನ ಕಾಮಗಾರಿ ಪೂರ್ಣವಾಗಿಲ್ಲ ಸರ್ಕಾರ ಅನುದಾನ ನೀಡಿಲ್ಲ. ತೀರ ಹದಗೆಟ್ಟಿದ್ದು, ಅಭಿವೃದ್ದಿಯಾಗಿರುವ ಕೆಲಸವೂ ಮೂಲೆಗುಂಪಾಗುತ್ತಿದೆ. ಜಿಲ್ಲಾ ಕ್ರೀಡಾಂಗಣ ರಾಜ್ಯಕ್ಕೊಂದು ದೊಡ್ಡದಾಗಬೇಕಾಗಿತ್ತು. ಆದರೆ ಸರ್ಕಾರ ಜಿಲ್ಲಾ ಕ್ರೀಡಾಂಗಣವನ್ನು ಕಡೆಗಣಿಸಿದ್ದಾರೆ. ಹಳ್ಳಿಗಳಿಗೆ ನಿವೇಶನ ಹಂಚಿಲ್ಲ. ಮನೆಗಳನ್ನು ಕೊಟ್ಟಿಲ್ಲ. ವೃದ್ದಾಪ್ಯವೇತನ ಹಂಚಿಲ್ಲ. ಸಾಗುವಳಿ ಚೀಟಿ ಹಂಚಿಲ್ಲ. ರಾಜ್ಯ ಸರ್ಕಾರ ಸಂಪೂರ್ಣವಾಗಿ ಚಾಮರಾಜನಗರವನ್ನು ಕಡೆಗಣಿಸಿದ್ದಾರೆ ಎಂದು ವಾಟಾಳ್ ನಾಗರಾಜ್ ಆರೋಪಿಸಿದರು.
ಪ್ರತಿಭಟನೆಯಲ್ಲಿ ಅಜಯ್, ಶಿವಲಿಂಗಮೂರ್ತಿ, ಹುಂಡಿ ಬಸವಣ್ಣ, ಪಾರ್ಥಸಾರಥಿ, ರೇವಣ್ಣಸ್ವಾಮಿ, ಚೆನ್ನಂಜಪ್ಪ ಇತರರು ಭಾಗವಹಿಸಿದ್ದರು

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

4 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

6 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

8 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

8 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

9 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

9 hours ago