ಚಾಮರಾಜನಗರ : ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಮೇತ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ. ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ನಾಗರಾಜ್ ಆಗ್ರಹಿಸಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಚಾಮರಾಜನಗರ ಸಮಗ್ರ ಅಭಿವೃದ್ದಿಗೆ ಒತ್ತಾಯಿಸಿ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಮೇತ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರು ರಾಜೀನಾಮೆ ಕೊಟ್ಟರೆ ಗೌರವ ಬರುತ್ತದೆ. ಗೌರವ ಹೆಚ್ಚಾಗುತ್ತದೆ. ಇದು ಬಹಳ ಅತ್ಯಂತ ಕಣ್ಣೀರಿನ ಕಥೆ ಇದು ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ವಾಟಾಳ್ ಒತ್ತಾಯಿಸಿದರು.
ಆಸ್ಪತ್ರೆಗಳು ಜನರ ಶತ್ರುಗಳಾಗಬಾರದು : ಕರ್ನಾಟಕ ರಾಜ್ಯದ ಆಸ್ಪತ್ರೆಗಳು ಜನರಸೇವೆ ಸದಾ ಸಿದ್ದವಿರಬೇಕು. ಆಸ್ಪತ್ರೆಗಳು ಜನರ ಶತ್ರುಗಳಾಗಬಾರದು. ಇಡೀ ರಾಜ್ಯದಲ್ಲಿ ಆಸ್ಪತ್ರೆಗಳು ಕ್ಷಿಣವಾಗುತ್ತವೆ. ಸರ್ಕಾರ ಆಸ್ಪತ್ರೆಗಳನ್ನು ಬಹಳ ಉನ್ನತಮಟ್ಟಕ್ಕೆ ತರಬೇಕು. ಸುಮಾರು ಈಗಾಗಲೇ ಅನೇಕ ಆಸ್ಪತ್ರೆಗಳಲ್ಲಿ ಬೇಜಾಬ್ದಾರಿಯಿಂದ ಅನೇಕರು ಸತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ೨೭ ಜನರು ಆಮ್ಲಜನಿಕ ಇಲ್ಲದ ಸತ್ತಿದ್ದಾರೆ. ಇಂದಿನವರೆಗೂ ಮೃತ ಕುಟುಂಬಗಳಿಗೆ ಪರಿಹಾರ ಸಿಕ್ಕಿಲ್ಲ. ಇಡೀ ಸಮಗ್ರವಾಗಿ ಸರ್ಕಾರ ಕಡೆಗಣಿಸಿದೆ. ಇದು ನಿಜಕ್ಕೂ ಅತ್ಯಂತ ಅಗೌರವ. ಆಸ್ಪತ್ರೆಗಳನ್ನು ಉನ್ನತ ಸ್ಥಿತಿಗೆ ತರಬೇಕಾದದ್ದು ಸರ್ಕಾರ ಕರ್ತವ್ಯವಾಗಿದೆ ಎಂದರು.
ಚಾಮರಾಜನಗರದ ಸಮಗ್ರ ಅಭಿವೃದ್ದಿ ಬಗ್ಗೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಜಿಲ್ಲೆಗೆ ಸರ್ಕಾರ ಆಂiÀiವ್ಯಯದಲ್ಲಿ ಅನುದಾನ ಕೊಟ್ಟಿಲ್ಲ. ಕಡೆಗಣಿಸಿದ್ದಾರೆ. ಚಾಮರಾಜನಗರದ ಅನೇಕ ಯೋಜನೆಗಳು ನೆನೆಗುದಿಗೆ ಬಿದ್ದಿದೆ. ಜಿಲ್ಲಾ ಕ್ರೀಡಾಂಗಣ ಕಾಮಗಾರಿ ಆರಂಭಗೊAಡು ೨೦ ವರ್ಷಗಳಾಯಿತು. ಮೈದಾನ ಕಾಮಗಾರಿ ಪೂರ್ಣವಾಗಿಲ್ಲ ಸರ್ಕಾರ ಅನುದಾನ ನೀಡಿಲ್ಲ. ತೀರ ಹದಗೆಟ್ಟಿದ್ದು, ಅಭಿವೃದ್ದಿಯಾಗಿರುವ ಕೆಲಸವೂ ಮೂಲೆಗುಂಪಾಗುತ್ತಿದೆ. ಜಿಲ್ಲಾ ಕ್ರೀಡಾಂಗಣ ರಾಜ್ಯಕ್ಕೊಂದು ದೊಡ್ಡದಾಗಬೇಕಾಗಿತ್ತು. ಆದರೆ ಸರ್ಕಾರ ಜಿಲ್ಲಾ ಕ್ರೀಡಾಂಗಣವನ್ನು ಕಡೆಗಣಿಸಿದ್ದಾರೆ. ಹಳ್ಳಿಗಳಿಗೆ ನಿವೇಶನ ಹಂಚಿಲ್ಲ. ಮನೆಗಳನ್ನು ಕೊಟ್ಟಿಲ್ಲ. ವೃದ್ದಾಪ್ಯವೇತನ ಹಂಚಿಲ್ಲ. ಸಾಗುವಳಿ ಚೀಟಿ ಹಂಚಿಲ್ಲ. ರಾಜ್ಯ ಸರ್ಕಾರ ಸಂಪೂರ್ಣವಾಗಿ ಚಾಮರಾಜನಗರವನ್ನು ಕಡೆಗಣಿಸಿದ್ದಾರೆ ಎಂದು ವಾಟಾಳ್ ನಾಗರಾಜ್ ಆರೋಪಿಸಿದರು.
ಪ್ರತಿಭಟನೆಯಲ್ಲಿ ಅಜಯ್, ಶಿವಲಿಂಗಮೂರ್ತಿ, ಹುಂಡಿ ಬಸವಣ್ಣ, ಪಾರ್ಥಸಾರಥಿ, ರೇವಣ್ಣಸ್ವಾಮಿ, ಚೆನ್ನಂಜಪ್ಪ ಇತರರು ಭಾಗವಹಿಸಿದ್ದರು
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…