ಜಿಲ್ಲೆಗಳು

ಆರೋಗ್ಯಯುವ ಬದುಕು ಬಹಳ ಮುಖ್ಯ: ಪ್ರತಾಪ್ ಸಿಂಹ

‘ನಮ್ಮ ಮೈಸೂರು-ಫಿಟ್ ಮೈಸೂರು’ ಕಾರ್ಯಕ್ರಮ ಉದ್ಘಾಟನೆ

ಮೈಸೂರು: ಜೀವನದಲ್ಲಿ ಆಸ್ತಿ, ಪಾಸ್ತಿ, ಹಣ ಸಂಪಾದನೆ ಮಾಡುವ ಭರದಲ್ಲಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಕಷ್ಟವಾಗಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳುವ ಜತೆಗೆ ಆರೋಗ್ಯವಂತ ಜೀವನ ಬಹಳ ಮುಖ್ಯವಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.


ನಗರದ ಸರಸ್ವತಿಪುರಂನಲ್ಲಿರುವ ವಿಜಯವಿಠಲ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಮೈಸೂರು ಜಿಮ್ ಅಂಡ್ ಫಿಟ್ನೆಸ್ ಮಾಲೀಕರ ಸಂಘ, ನಾರಾುಂಣ ಹೃದಯಾಲಯ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ‘ನಮ್ಮ ಮೈಸೂರು-ಫಿಟ್ ಮೈಸೂರು’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಕುಸ್ತಿ, ಯೋಗದ ಜತೆಗೆ ವ್ಯಾಯಾಮ ಮಾಡುವ ಹವ್ಯಾಸ ಮಾಡಿಕೊಳ್ಳಬೇಕು ಎಂದು ಹೇಳಿದರು.
ಮಹಾರಾಜರ ಕಾಲದಿಂದಲೂ ಮೈಸೂರು ಕುಸ್ತಿಗೆ ಹೆಸರು ವಾಸಿಯಾಗಿದೆ. ವಿಜಯನಗರ ಸಾಮ್ರಾಜ್ಯದ ನಂತರ ಮೈಸೂರು ಮಹಾರಾಜರು ಮೈಸೂರು ಸಾಂಸ್ಕೃತಿಕ ನಗರವಾಗಿ ರೂಪುಗೊಳ್ಳುವಂತೆ ಮಾಡಲು ಕಾರಣಕರ್ತರು. ಇಂದು ಮೈಸೂರಿನ ಯಾವುದೇ ಮೊಹಲ್ಲಾಗಳಿಗೆ ಹೋದರೂ ಗರಡಿ ಮನೆಗಳು, ಪೈಲ್ವಾನರು ಅಭ್ಯಾಸ ಮಾಡುತ್ತಿರುವುದನ್ನು ನೋಡಬಹುದು. ಮೈಸೂರು ಯೋಗ ಸಿಟಿಯಾಗಿದೆ. ಮಹಾರಾಜರ ಕಾಲದಿಂದಲೂ ಯೋಗ ಮುಂದುವರಿದಿದ್ದರಿಂದ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಮೈಸೂರಿಗೆ ಬಂದು ಯೋಗಾಭ್ಯಾಸ ಮಾಡಲು ಕಾರಣವಾಯಿತು ಎಂದು ಸ್ಮರಿಸಿದರು.
ಶಾಸಕ ಎಲ್.ನಾಗೇಂದ್ರ, ಮೈಸೂರು ಸಂಘ-ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್.ಪ್ರಶಾಂತ್, ಮೈಸೂರು ೋಂಗ ಫೆಡರೇಶನ್ ಅಧ್ಯಕ್ಷ ಶ್ರೀಹರಿ, ನಾರಾಯಣ ಹೃದಯಾಲಯ ಮುಖ್ಯ ಹೃದ್ರೋಗ ತಜ್ಞ ಡಾ.ಕೇಶವಮೂರ್ತಿ, ಮೈಸೂರು ಜಿಮ್ ಮತ್ತು ಫಿಟ್ನೆಸ್ ಮಾಲೀಕರ ಸಂಘದ ಅಧ್ಯಕ್ಷ ಎಂ.ಎಸ್.ಹರ್ಷ ಮತ್ತಿತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳ ನೃತ್ಯ ಸ್ಪರ್ಧೆ, ಜಿಂಬಾ ಡ್ಯಾನ್ಸ್, ಮಕ್ಕಳ ವಿಶೇಷ ನೃತ್ಯ, ಮ್ಯೂಸಿಕ್ ಯೋಗ, ಮಾರ್ಷಲ್ ಆರ್ಟ್ಸ್, ಡ್ಯಾನ್ಸ್ ಫ್ಯೂಷನ್, ದೇಹದಾರ್ಢ್ಯ ಪ್ರದರ್ಶನ ನಡೆದು ನೆರೆದಿದ್ದವರ ಗಮನ ಸೆಳೆಯಿತು.


ಇತ್ತೀಚಿನ ದಿನಗಳಲ್ಲಿ ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಗಮನಿಸದಿರುವ ಕಾರಣ ಅಕಾಲಿಕ ಮರಣಕ್ಕೀಡಾಗುತ್ತಿರುವುದನ್ನು ನೋಡಿದ್ದೇವೆ. ಹಾಗಾಗಿ, ಆರೋಗ್ಯದ ವಿಚಾರದಲ್ಲಿ ಎಚ್ಚರ ವಹಿಸಬೇಕು.

-ಪ್ರತಾಪ್ ಸಿಂಹ, ಸಂಸದರು

andolanait

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

1 hour ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

2 hours ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

2 hours ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

2 hours ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

2 hours ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

2 hours ago