ಜಿಲ್ಲೆಗಳು

ಆರೋಗ್ಯಯುವ ಬದುಕು ಬಹಳ ಮುಖ್ಯ: ಪ್ರತಾಪ್ ಸಿಂಹ

‘ನಮ್ಮ ಮೈಸೂರು-ಫಿಟ್ ಮೈಸೂರು’ ಕಾರ್ಯಕ್ರಮ ಉದ್ಘಾಟನೆ

ಮೈಸೂರು: ಜೀವನದಲ್ಲಿ ಆಸ್ತಿ, ಪಾಸ್ತಿ, ಹಣ ಸಂಪಾದನೆ ಮಾಡುವ ಭರದಲ್ಲಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಕಷ್ಟವಾಗಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳುವ ಜತೆಗೆ ಆರೋಗ್ಯವಂತ ಜೀವನ ಬಹಳ ಮುಖ್ಯವಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.


ನಗರದ ಸರಸ್ವತಿಪುರಂನಲ್ಲಿರುವ ವಿಜಯವಿಠಲ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಮೈಸೂರು ಜಿಮ್ ಅಂಡ್ ಫಿಟ್ನೆಸ್ ಮಾಲೀಕರ ಸಂಘ, ನಾರಾುಂಣ ಹೃದಯಾಲಯ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ‘ನಮ್ಮ ಮೈಸೂರು-ಫಿಟ್ ಮೈಸೂರು’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಕುಸ್ತಿ, ಯೋಗದ ಜತೆಗೆ ವ್ಯಾಯಾಮ ಮಾಡುವ ಹವ್ಯಾಸ ಮಾಡಿಕೊಳ್ಳಬೇಕು ಎಂದು ಹೇಳಿದರು.
ಮಹಾರಾಜರ ಕಾಲದಿಂದಲೂ ಮೈಸೂರು ಕುಸ್ತಿಗೆ ಹೆಸರು ವಾಸಿಯಾಗಿದೆ. ವಿಜಯನಗರ ಸಾಮ್ರಾಜ್ಯದ ನಂತರ ಮೈಸೂರು ಮಹಾರಾಜರು ಮೈಸೂರು ಸಾಂಸ್ಕೃತಿಕ ನಗರವಾಗಿ ರೂಪುಗೊಳ್ಳುವಂತೆ ಮಾಡಲು ಕಾರಣಕರ್ತರು. ಇಂದು ಮೈಸೂರಿನ ಯಾವುದೇ ಮೊಹಲ್ಲಾಗಳಿಗೆ ಹೋದರೂ ಗರಡಿ ಮನೆಗಳು, ಪೈಲ್ವಾನರು ಅಭ್ಯಾಸ ಮಾಡುತ್ತಿರುವುದನ್ನು ನೋಡಬಹುದು. ಮೈಸೂರು ಯೋಗ ಸಿಟಿಯಾಗಿದೆ. ಮಹಾರಾಜರ ಕಾಲದಿಂದಲೂ ಯೋಗ ಮುಂದುವರಿದಿದ್ದರಿಂದ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಮೈಸೂರಿಗೆ ಬಂದು ಯೋಗಾಭ್ಯಾಸ ಮಾಡಲು ಕಾರಣವಾಯಿತು ಎಂದು ಸ್ಮರಿಸಿದರು.
ಶಾಸಕ ಎಲ್.ನಾಗೇಂದ್ರ, ಮೈಸೂರು ಸಂಘ-ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್.ಪ್ರಶಾಂತ್, ಮೈಸೂರು ೋಂಗ ಫೆಡರೇಶನ್ ಅಧ್ಯಕ್ಷ ಶ್ರೀಹರಿ, ನಾರಾಯಣ ಹೃದಯಾಲಯ ಮುಖ್ಯ ಹೃದ್ರೋಗ ತಜ್ಞ ಡಾ.ಕೇಶವಮೂರ್ತಿ, ಮೈಸೂರು ಜಿಮ್ ಮತ್ತು ಫಿಟ್ನೆಸ್ ಮಾಲೀಕರ ಸಂಘದ ಅಧ್ಯಕ್ಷ ಎಂ.ಎಸ್.ಹರ್ಷ ಮತ್ತಿತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳ ನೃತ್ಯ ಸ್ಪರ್ಧೆ, ಜಿಂಬಾ ಡ್ಯಾನ್ಸ್, ಮಕ್ಕಳ ವಿಶೇಷ ನೃತ್ಯ, ಮ್ಯೂಸಿಕ್ ಯೋಗ, ಮಾರ್ಷಲ್ ಆರ್ಟ್ಸ್, ಡ್ಯಾನ್ಸ್ ಫ್ಯೂಷನ್, ದೇಹದಾರ್ಢ್ಯ ಪ್ರದರ್ಶನ ನಡೆದು ನೆರೆದಿದ್ದವರ ಗಮನ ಸೆಳೆಯಿತು.


ಇತ್ತೀಚಿನ ದಿನಗಳಲ್ಲಿ ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಗಮನಿಸದಿರುವ ಕಾರಣ ಅಕಾಲಿಕ ಮರಣಕ್ಕೀಡಾಗುತ್ತಿರುವುದನ್ನು ನೋಡಿದ್ದೇವೆ. ಹಾಗಾಗಿ, ಆರೋಗ್ಯದ ವಿಚಾರದಲ್ಲಿ ಎಚ್ಚರ ವಹಿಸಬೇಕು.

-ಪ್ರತಾಪ್ ಸಿಂಹ, ಸಂಸದರು

andolanait

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

3 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

7 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

7 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

7 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

7 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

7 hours ago