ಹುಣಸೂರು ಮೂಲದ ಅಧಿಕಾರಿ
ಕೆ.ಆರ್.ಪುರಂ: ಇತ್ತೀಚೆಗೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಇನ್ಸ್ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ನಂದೀಶ್ ಮೂಲತಃ ಮೈಸೂರು ಜಿಲ್ಲೆ ಹುಣಸೂರು ಮೂಲದವರು. ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರ ಸಂಬಂಧಿ ಕೂಡ ಆಗಿದ್ದರು.
ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಎದೆ ನೋವು ಕಂಡುಬಂದಿದೆ. ನಂತರ ಕೆಆರ್ ಪುರಂನ ಲಕ್ಷ್ಮೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪರಪ್ಪನ ಅಗ್ರಹಾರ ಠಾಣೆಯಲ್ಲಿ 2019ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ನಂತರ ಆನೇಕಲ್ನಲ್ಲಿ ಇನ್ಸ್ಪೆಕ್ಟರ್ ಆಗಿದ್ದಾಗ ಅವಧಿ ಮೀರಿ ಪಬ್ ನಡೆಸಲು ಅವಕಾಶ ನೀಡಿದ ಆರೋಪದ ಮೇಲೆ ಅಮಾನತು ಆಗಿದ್ದರು.
ಇತ್ತೀಚೆಗೆ ಕೆ.ಆರ್.ಪುರಂನಲ್ಲಿ
ಪಬ್ ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ಅಮಾನತುಗೊಂಡಿದ್ದರು.
ಸಾಲಿಗ್ರಾಮ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಚಂದ್ರು ಆರೋಪ ಸಾಲಿಗ್ರಾಮ: ದಲಿತ ಮತ್ತು ಹಿಂದುಳಿದ…
ಕೃಷ್ಣ ಸಿದ್ದಾಪುರ ಸಂತೆಮಾಳದಲ್ಲಿ ತರಕಾರಿ ಜೊತೆ ಸಾಂಕ್ರಾಮಿಕ ರೋಗವೂ ಉಚಿತ ಕ್ರಮಕೈಗೊಳ್ಳದ ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಅಸಮಾಧಾನ ಸಿದ್ದಾಪುರ: ಸಾರ್ವಜನಿಕ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಘನತೆಯ ಬದುಕು ಬಯಸುವ ಮನುಷ್ಯನ ಹಕ್ಕನ್ನು ಎತ್ತಿ ಹಿಡಿದಿರುವ ಸಿಎಂ ಸಿದ್ದರಾಮಯ್ಯ ಬ್ರಿಟಿಷರ ಗುಲಾಮಗಿರಿಯಲ್ಲಿದ್ದ ಭಾರತಕ್ಕೆ…
ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಘರ್ಷಣೆ ಸಂದರ್ಭದಲ್ಲಿ ಗುಂಡೇಟಿನಿಂದ ಕಾಂಗ್ರೆಸ್ ಕಾರ್ಯಕರ್ತ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿವಿ ಅಶೋಕಪುರಂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ೨,೦೦೦ ಇದ್ದ…