ಹುಣಸೂರು ಮೂಲದ ಅಧಿಕಾರಿ
ಕೆ.ಆರ್.ಪುರಂ: ಇತ್ತೀಚೆಗೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಇನ್ಸ್ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ನಂದೀಶ್ ಮೂಲತಃ ಮೈಸೂರು ಜಿಲ್ಲೆ ಹುಣಸೂರು ಮೂಲದವರು. ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರ ಸಂಬಂಧಿ ಕೂಡ ಆಗಿದ್ದರು.
ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಎದೆ ನೋವು ಕಂಡುಬಂದಿದೆ. ನಂತರ ಕೆಆರ್ ಪುರಂನ ಲಕ್ಷ್ಮೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪರಪ್ಪನ ಅಗ್ರಹಾರ ಠಾಣೆಯಲ್ಲಿ 2019ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ನಂತರ ಆನೇಕಲ್ನಲ್ಲಿ ಇನ್ಸ್ಪೆಕ್ಟರ್ ಆಗಿದ್ದಾಗ ಅವಧಿ ಮೀರಿ ಪಬ್ ನಡೆಸಲು ಅವಕಾಶ ನೀಡಿದ ಆರೋಪದ ಮೇಲೆ ಅಮಾನತು ಆಗಿದ್ದರು.
ಇತ್ತೀಚೆಗೆ ಕೆ.ಆರ್.ಪುರಂನಲ್ಲಿ
ಪಬ್ ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ಅಮಾನತುಗೊಂಡಿದ್ದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…