ನಾರಾಯಣ ಹೃದಯಾಲಯದ ತಜ್ಞ ವೈದ್ಯರಿಂದ ಚಿಕಿತ್ಸೆ
ಮೈಸೂರು: ಹೃದಯ ವೈಫಲ್ಯಕ್ಕೆ ತುತ್ತಾದ ನಾಲ್ವರಿಗೆ ನಗರದ ನಾರಾಯಣ ಹೃದಯಾಲಯದಲ್ಲಿ ಯಶಸ್ವಿ ಹೃದಯ ಕಸಿ ನೆರವೇರಿಸಲಾಗಿದ್ದು, ಎಲ್ಲರಂತೆ ಸಹಜವಾಗಿ ಆರೋಗ್ಯವಾಗಿದ್ದಾರೆ. ಆಸ್ಪತ್ರೆುಂಲ್ಲಿ ತೆರೆಯಲಾದ ಹೃದಯ ವೈಫಲ್ಯದ ಕ್ಲಿನಿಕ್ ಸಹಾಯದಿಂದ ಕೊನೆಯ ಹಂತದ ಹೃದ್ರೋಗದಿಂದ ಬಳಲುತ್ತಿರುವ ನಾಲ್ಕು ರೋಗಿಗಳನ್ನು ಉಳಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ರವಿ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಂದೀಶ್, ಕೇಶವ, ಕುಮಾರ ಮತ್ತು ಶಿವಕುಮಾರ್ ಎಂಬವರಿಗೆ ಹೃದ್ರೋಗ ಸಮಸ್ಯೆ ಎದುರಾಗಿತ್ತು. ಅವರು ಕೊನೆಯ ಹಂತದ ಹೃದಯ ವೈಫಲ್ಯದಿಂದ ಬಳಲುತ್ತಿದ್ದರು. ಇವರಿಗೆ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಹೃದಯ ವೈಫಲ್ಯ ಕ್ಲಿನಿಕ್ನಲ್ಲಿ ಚಿಕಿತ್ಸೆ ನೀಡಲಾಗಿತ್ತು ಮತ್ತು ಅವರಿಗೆ ಹೃದಯ ಕಸಿ ಚಿಕಿತ್ಸೆ ಪಡೆಯಲು ಸಲಹೆ ನೀಡಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಎಂ.ಎಸ್.ರಾಮಯ್ಯ-ನಾರಾಯಣ ಹಾರ್ಟ್ ಸೆಂಟರ್ನಲ್ಲಿ ಕಸಿ ನಡೆಸಲಾಯಿತು ಎಂದು ಅವರು ತಿಳಿಸಿದರು.
ನಾರಾಉಣ ಹೆಲ್ತ್ನ ಹೆಸರಾಂತ ಹೃದಯ ಕಸಿ ತಜ್ಞ ಡಾ.ಯು.ಎಂ.ನಾಗಮಲ್ಲೇಶ್ ನೇತೃತ್ವದ ವೈದ್ಯಕೀಯ ತಜ್ಞರ ತಂಡದಿಂದ ಯಶಸ್ವಿ ಹೃದಉ ಕಸಿ ನಡೆಸಲಾಗಿದ್ದು, ಸಾಮಾನ್ಯರಂತೆ ಜೀವನ ನಡೆಸುತ್ತಿದ್ದಾರೆ ಎಂದು ಅವರು ವಿವರಿಸಿದರು.
ಹೃದಯ ಕಸಿ ತಜ್ಞ ಡಾ. ನಾಗಮಲ್ಲೇಶ್ ಮಾತನಾಡಿ, ಕರ್ನಾಟಕದಲ್ಲಿ ಸುಮಾರು ೧೫೦ರಿಂದ ೨೦೦ ಮಂದಿಗೆ ಹೃದಯ ಕಸಿ ಮಾಡಲಾಗುತ್ತಿದೆ. ಯೂರೋಪ್ನಲ್ಲಿ ಬ್ರೈನ್ ಡೆಡ್ ಆದವರಿಗೆ ಅಂಗಾಂಗ ದಾನ ಕಡ್ಡಾಯಗೊಳಿಸಲಾಗಿದೆ. ಆದರೆ, ಭಾರತದಲ್ಲಿ ಸ್ವಯಂಪ್ರೇರಿತರಾಗಿ ಅಂಗಾಂಗ ದಾನ ಮಾಡಬೇಕು ಎಂದರು.
ನಾರಾಉಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಕೇಶವಮೂರ್ತಿ ಮಾತನಾಡಿ, ಅನೇಕರಿಗೆ ಹೃದಯ ವೈಫಲ್ಯದ ಕುರಿತಾಗಲಿ ಅಥವಾ ಅಂಗಾಂಗ ದಾನದ ಬಗ್ಗೆ ಅರಿವು ಕಡಿಮೆ ಇದೆ. ಹೃದಯ ವೈಫಲ್ಯಕ್ಕೆ ಒಳಗಾದವರಿಗೆ ಸ್ವತಃ ಯಾವುದೇ ಕೆಲಸ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಸುಸ್ತು, ಎದೆನೋವು, ತಲೆಸುತ್ತು, ಆಯಾಸ ಕಾಣಿಸಿಕೊಳ್ಳುತ್ತದೆ ಎಂದರು.
ಹೃದಯ ವೈಫಲ್ಯ ಎಂಬುದು ಕೊನೆಯ ಹಂತವಾಗಿದ್ದು, ಈ ಅವಸ್ಥೆಯಲ್ಲಿ 6 ತಿಂಗಳಿಂದ ಒಂದು ವರ್ಷದ ಅವಧಿಯವರೆಗೆ ಬದುಕಬಹುದಷ್ಟೆ. ಇಂತಹ ರೋಗಿಗಳಿಗೆ ನಾವು ಹೃದಯ ಕಸಿ ಮಾಡುತ್ತೇವೆ ಎಂದು ಹೇಳಿದರು.
ಶಸ್ತ್ರಚಿಕಿತ್ಸೆಗೆ ಒಳಗಾದ ನಂದೀಶ್, ಕೇಶವ, ಕುಮಾರ ಮತ್ತು ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…