ಜಿಲ್ಲೆಗಳು

ಹೃದಯ ವೈಫಲ್ಯಕ್ಕೆ ತುತ್ತಾದ ನಾಲ್ವರಿಗೆ ಯಶಸ್ವಿ ಹೃದಯ ಕಸಿ

ನಾರಾಯಣ ಹೃದಯಾಲಯದ ತಜ್ಞ ವೈದ್ಯರಿಂದ ಚಿಕಿತ್ಸೆ

ಮೈಸೂರು: ಹೃದಯ ವೈಫಲ್ಯಕ್ಕೆ ತುತ್ತಾದ ನಾಲ್ವರಿಗೆ ನಗರದ ನಾರಾಯಣ ಹೃದಯಾಲಯದಲ್ಲಿ ಯಶಸ್ವಿ ಹೃದಯ ಕಸಿ ನೆರವೇರಿಸಲಾಗಿದ್ದು, ಎಲ್ಲರಂತೆ ಸಹಜವಾಗಿ ಆರೋಗ್ಯವಾಗಿದ್ದಾರೆ. ಆಸ್ಪತ್ರೆುಂಲ್ಲಿ ತೆರೆಯಲಾದ ಹೃದಯ ವೈಫಲ್ಯದ ಕ್ಲಿನಿಕ್ ಸಹಾಯದಿಂದ ಕೊನೆಯ ಹಂತದ ಹೃದ್ರೋಗದಿಂದ ಬಳಲುತ್ತಿರುವ ನಾಲ್ಕು ರೋಗಿಗಳನ್ನು ಉಳಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ರವಿ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಂದೀಶ್, ಕೇಶವ, ಕುಮಾರ ಮತ್ತು ಶಿವಕುಮಾರ್ ಎಂಬವರಿಗೆ ಹೃದ್ರೋಗ ಸಮಸ್ಯೆ ಎದುರಾಗಿತ್ತು. ಅವರು ಕೊನೆಯ ಹಂತದ ಹೃದಯ ವೈಫಲ್ಯದಿಂದ ಬಳಲುತ್ತಿದ್ದರು. ಇವರಿಗೆ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಹೃದಯ ವೈಫಲ್ಯ ಕ್ಲಿನಿಕ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು ಮತ್ತು ಅವರಿಗೆ ಹೃದಯ ಕಸಿ ಚಿಕಿತ್ಸೆ ಪಡೆಯಲು ಸಲಹೆ ನೀಡಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಎಂ.ಎಸ್.ರಾಮಯ್ಯ-ನಾರಾಯಣ ಹಾರ್ಟ್ ಸೆಂಟರ್‌ನಲ್ಲಿ ಕಸಿ ನಡೆಸಲಾಯಿತು ಎಂದು ಅವರು ತಿಳಿಸಿದರು.
ನಾರಾಉಣ ಹೆಲ್ತ್‌ನ ಹೆಸರಾಂತ ಹೃದಯ ಕಸಿ ತಜ್ಞ ಡಾ.ಯು.ಎಂ.ನಾಗಮಲ್ಲೇಶ್ ನೇತೃತ್ವದ ವೈದ್ಯಕೀಯ ತಜ್ಞರ ತಂಡದಿಂದ ಯಶಸ್ವಿ ಹೃದಉ ಕಸಿ ನಡೆಸಲಾಗಿದ್ದು, ಸಾಮಾನ್ಯರಂತೆ ಜೀವನ ನಡೆಸುತ್ತಿದ್ದಾರೆ ಎಂದು ಅವರು ವಿವರಿಸಿದರು.
ಹೃದಯ ಕಸಿ ತಜ್ಞ ಡಾ. ನಾಗಮಲ್ಲೇಶ್ ಮಾತನಾಡಿ, ಕರ್ನಾಟಕದಲ್ಲಿ ಸುಮಾರು ೧೫೦ರಿಂದ ೨೦೦ ಮಂದಿಗೆ ಹೃದಯ ಕಸಿ ಮಾಡಲಾಗುತ್ತಿದೆ. ಯೂರೋಪ್‌ನಲ್ಲಿ ಬ್ರೈನ್ ಡೆಡ್ ಆದವರಿಗೆ ಅಂಗಾಂಗ ದಾನ ಕಡ್ಡಾಯಗೊಳಿಸಲಾಗಿದೆ. ಆದರೆ, ಭಾರತದಲ್ಲಿ ಸ್ವಯಂಪ್ರೇರಿತರಾಗಿ ಅಂಗಾಂಗ ದಾನ ಮಾಡಬೇಕು ಎಂದರು.
ನಾರಾಉಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಕೇಶವಮೂರ್ತಿ ಮಾತನಾಡಿ, ಅನೇಕರಿಗೆ ಹೃದಯ ವೈಫಲ್ಯದ ಕುರಿತಾಗಲಿ ಅಥವಾ ಅಂಗಾಂಗ ದಾನದ ಬಗ್ಗೆ ಅರಿವು ಕಡಿಮೆ ಇದೆ. ಹೃದಯ ವೈಫಲ್ಯಕ್ಕೆ ಒಳಗಾದವರಿಗೆ ಸ್ವತಃ ಯಾವುದೇ ಕೆಲಸ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಸುಸ್ತು, ಎದೆನೋವು, ತಲೆಸುತ್ತು, ಆಯಾಸ ಕಾಣಿಸಿಕೊಳ್ಳುತ್ತದೆ ಎಂದರು.
ಹೃದಯ ವೈಫಲ್ಯ ಎಂಬುದು ಕೊನೆಯ ಹಂತವಾಗಿದ್ದು, ಈ ಅವಸ್ಥೆಯಲ್ಲಿ 6 ತಿಂಗಳಿಂದ ಒಂದು ವರ್ಷದ ಅವಧಿಯವರೆಗೆ ಬದುಕಬಹುದಷ್ಟೆ. ಇಂತಹ ರೋಗಿಗಳಿಗೆ ನಾವು ಹೃದಯ ಕಸಿ ಮಾಡುತ್ತೇವೆ ಎಂದು ಹೇಳಿದರು.
ಶಸ್ತ್ರಚಿಕಿತ್ಸೆಗೆ ಒಳಗಾದ ನಂದೀಶ್, ಕೇಶವ, ಕುಮಾರ ಮತ್ತು ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

7 mins ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

57 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

1 hour ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

1 hour ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

2 hours ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

2 hours ago