ಜಿಲ್ಲೆಗಳು

ಹೃದಯ ವೈಫಲ್ಯಕ್ಕೆ ತುತ್ತಾದ ನಾಲ್ವರಿಗೆ ಯಶಸ್ವಿ ಹೃದಯ ಕಸಿ

ನಾರಾಯಣ ಹೃದಯಾಲಯದ ತಜ್ಞ ವೈದ್ಯರಿಂದ ಚಿಕಿತ್ಸೆ

ಮೈಸೂರು: ಹೃದಯ ವೈಫಲ್ಯಕ್ಕೆ ತುತ್ತಾದ ನಾಲ್ವರಿಗೆ ನಗರದ ನಾರಾಯಣ ಹೃದಯಾಲಯದಲ್ಲಿ ಯಶಸ್ವಿ ಹೃದಯ ಕಸಿ ನೆರವೇರಿಸಲಾಗಿದ್ದು, ಎಲ್ಲರಂತೆ ಸಹಜವಾಗಿ ಆರೋಗ್ಯವಾಗಿದ್ದಾರೆ. ಆಸ್ಪತ್ರೆುಂಲ್ಲಿ ತೆರೆಯಲಾದ ಹೃದಯ ವೈಫಲ್ಯದ ಕ್ಲಿನಿಕ್ ಸಹಾಯದಿಂದ ಕೊನೆಯ ಹಂತದ ಹೃದ್ರೋಗದಿಂದ ಬಳಲುತ್ತಿರುವ ನಾಲ್ಕು ರೋಗಿಗಳನ್ನು ಉಳಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ರವಿ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಂದೀಶ್, ಕೇಶವ, ಕುಮಾರ ಮತ್ತು ಶಿವಕುಮಾರ್ ಎಂಬವರಿಗೆ ಹೃದ್ರೋಗ ಸಮಸ್ಯೆ ಎದುರಾಗಿತ್ತು. ಅವರು ಕೊನೆಯ ಹಂತದ ಹೃದಯ ವೈಫಲ್ಯದಿಂದ ಬಳಲುತ್ತಿದ್ದರು. ಇವರಿಗೆ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಹೃದಯ ವೈಫಲ್ಯ ಕ್ಲಿನಿಕ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು ಮತ್ತು ಅವರಿಗೆ ಹೃದಯ ಕಸಿ ಚಿಕಿತ್ಸೆ ಪಡೆಯಲು ಸಲಹೆ ನೀಡಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಎಂ.ಎಸ್.ರಾಮಯ್ಯ-ನಾರಾಯಣ ಹಾರ್ಟ್ ಸೆಂಟರ್‌ನಲ್ಲಿ ಕಸಿ ನಡೆಸಲಾಯಿತು ಎಂದು ಅವರು ತಿಳಿಸಿದರು.
ನಾರಾಉಣ ಹೆಲ್ತ್‌ನ ಹೆಸರಾಂತ ಹೃದಯ ಕಸಿ ತಜ್ಞ ಡಾ.ಯು.ಎಂ.ನಾಗಮಲ್ಲೇಶ್ ನೇತೃತ್ವದ ವೈದ್ಯಕೀಯ ತಜ್ಞರ ತಂಡದಿಂದ ಯಶಸ್ವಿ ಹೃದಉ ಕಸಿ ನಡೆಸಲಾಗಿದ್ದು, ಸಾಮಾನ್ಯರಂತೆ ಜೀವನ ನಡೆಸುತ್ತಿದ್ದಾರೆ ಎಂದು ಅವರು ವಿವರಿಸಿದರು.
ಹೃದಯ ಕಸಿ ತಜ್ಞ ಡಾ. ನಾಗಮಲ್ಲೇಶ್ ಮಾತನಾಡಿ, ಕರ್ನಾಟಕದಲ್ಲಿ ಸುಮಾರು ೧೫೦ರಿಂದ ೨೦೦ ಮಂದಿಗೆ ಹೃದಯ ಕಸಿ ಮಾಡಲಾಗುತ್ತಿದೆ. ಯೂರೋಪ್‌ನಲ್ಲಿ ಬ್ರೈನ್ ಡೆಡ್ ಆದವರಿಗೆ ಅಂಗಾಂಗ ದಾನ ಕಡ್ಡಾಯಗೊಳಿಸಲಾಗಿದೆ. ಆದರೆ, ಭಾರತದಲ್ಲಿ ಸ್ವಯಂಪ್ರೇರಿತರಾಗಿ ಅಂಗಾಂಗ ದಾನ ಮಾಡಬೇಕು ಎಂದರು.
ನಾರಾಉಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಕೇಶವಮೂರ್ತಿ ಮಾತನಾಡಿ, ಅನೇಕರಿಗೆ ಹೃದಯ ವೈಫಲ್ಯದ ಕುರಿತಾಗಲಿ ಅಥವಾ ಅಂಗಾಂಗ ದಾನದ ಬಗ್ಗೆ ಅರಿವು ಕಡಿಮೆ ಇದೆ. ಹೃದಯ ವೈಫಲ್ಯಕ್ಕೆ ಒಳಗಾದವರಿಗೆ ಸ್ವತಃ ಯಾವುದೇ ಕೆಲಸ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಸುಸ್ತು, ಎದೆನೋವು, ತಲೆಸುತ್ತು, ಆಯಾಸ ಕಾಣಿಸಿಕೊಳ್ಳುತ್ತದೆ ಎಂದರು.
ಹೃದಯ ವೈಫಲ್ಯ ಎಂಬುದು ಕೊನೆಯ ಹಂತವಾಗಿದ್ದು, ಈ ಅವಸ್ಥೆಯಲ್ಲಿ 6 ತಿಂಗಳಿಂದ ಒಂದು ವರ್ಷದ ಅವಧಿಯವರೆಗೆ ಬದುಕಬಹುದಷ್ಟೆ. ಇಂತಹ ರೋಗಿಗಳಿಗೆ ನಾವು ಹೃದಯ ಕಸಿ ಮಾಡುತ್ತೇವೆ ಎಂದು ಹೇಳಿದರು.
ಶಸ್ತ್ರಚಿಕಿತ್ಸೆಗೆ ಒಳಗಾದ ನಂದೀಶ್, ಕೇಶವ, ಕುಮಾರ ಮತ್ತು ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

20 hours ago