ಜಿಲ್ಲೆಗಳು

ಹೆಡಿಯಾಲ ಅಂಗನವಾಡಿ : ಆಹಾರದಲ್ಲಿ ಹುಳು

ನಂಜನಗೂಡು: ತಾಲ್ಲೂಕಿನ ಹೆಡಿಯಾಲದ ಅಂಗನವಾಡಿಗೆ ಹುಳು ಹಿಡಿದ ಆಹಾರಗಳು ಮತ್ತೆ ಸರಬರಾಜಾಗುತ್ತಿರುವ ಆತಂಕಕಾರಿ ಘಟನೆ ನಡೆದಿದೆ.

ಅಂಗನವಾಡಿಗೆ ಪೂರೈಕೆಯಾಗುತ್ತಿರುವ ಆಹಾರ ಪುಟ್ಟಗಳಲ್ಲಿರುವ ಪದಾರ್ಥಗಳು ಹುಳು ಹಿಡಿದಿರುವುದು ಕಂಡುಬಂದಿದೆ. ಕಳೆದ ವರ್ಷವೂ ಇದೇ ರೀತಿ ಹುಳುಹಿಡಿದ ಆಹಾರ ಪದಾರ್ಥಗಳು ಸರಬರಾಜಾಗಿದ್ದ
ಹಿನ್ನಲೆಯಲ್ಲಿ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುತ್ತಿದ್ದ ಎಂಎಸ್‌ಪಿಸಿ ಏಜೆನ್ಸಿಯನ್ನು ರದ್ದು ಮಾಡಿ
ಬೇರೆ ಕಡೆಯಿಂದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಲಾಗುತ್ತಿತ್ತು.
ಇಂತಹ ಹುಳು ಹಿಡಿದ ಅಹಾರ ಪದಾರ್ಥಗಳನ್ನು ಅಂಗನವಾಡಿಯ ಮಕ್ಕಳಿಗೆ ಪೂರೈಕೆ ಮಾಡುತ್ತಿದ್ದ ಈ ಸಂಸ್ಥೆಯ ವಿರುದ್ಧ ಕೇಂದ್ರ ಅಹಾರ ಸಂಶೋಧನಾಯದ ಅಧಿಕಾರಿಗಳು ದಾಳಿ ನಡೆಸಿ, ನೀಡಿದ ವರದಿಯ ಮೇಲೆ ಈ ಸಂಸ್ಥೆಯ ಆಹಾರ ಪೂರೈಕೆಯ ಪರವಾನಗಿಯನ್ನು ಆಗ ರದ್ದು ಮಾಡಲಾಗಿತ್ತು
ಆದರೆ, ಈ ವರದಿಗೆ ಮೂರೇ ತಿಂಗಳಲ್ಲಿ ಧೂಳು ಹಿಡಿಸಿ ತಾಲ್ಲೂಕಿನ ಅಂಗನವಾಡಿಗಳಿಗೆ ಅಹಾರ ಪೂರೈಸುವ ಪರವಾನಗಿಯನ್ನು ಎಂಎಸ್‌ಪಿಸಿ ಪಡೆಯಲು ಯಶಸ್ವಿಯಾಗಿತ್ತು.
ಈಗ ಮತ್ತೆ ತಾಲೂಕಿನ ಅಂಗನವಾಡಿಗಳಿಗೆ ಹುಳು ಹಿಡಿದ ಅಹಾರ ಪದಾರ್ಥಗಳು ಸರಬರಾಜಾಗುತ್ತಿರುವುದು ಬಹಿರಂಗವಾಗಿದ್ದು, ಸರ್ಕಾರ ಹಾಗೂ ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟವರ ವಿರುದ್ಧ ಈಗಲಾದರೂ ಕ್ರಮ ಜರುಗಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

 

andolanait

Recent Posts

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

51 mins ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

2 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

2 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

2 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

3 hours ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

3 hours ago