ನಂಜನಗೂಡು: ತಾಲ್ಲೂಕಿನ ಹೆಡಿಯಾಲದ ಅಂಗನವಾಡಿಗೆ ಹುಳು ಹಿಡಿದ ಆಹಾರಗಳು ಮತ್ತೆ ಸರಬರಾಜಾಗುತ್ತಿರುವ ಆತಂಕಕಾರಿ ಘಟನೆ ನಡೆದಿದೆ.
ಅಂಗನವಾಡಿಗೆ ಪೂರೈಕೆಯಾಗುತ್ತಿರುವ ಆಹಾರ ಪುಟ್ಟಗಳಲ್ಲಿರುವ ಪದಾರ್ಥಗಳು ಹುಳು ಹಿಡಿದಿರುವುದು ಕಂಡುಬಂದಿದೆ. ಕಳೆದ ವರ್ಷವೂ ಇದೇ ರೀತಿ ಹುಳುಹಿಡಿದ ಆಹಾರ ಪದಾರ್ಥಗಳು ಸರಬರಾಜಾಗಿದ್ದ
ಹಿನ್ನಲೆಯಲ್ಲಿ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುತ್ತಿದ್ದ ಎಂಎಸ್ಪಿಸಿ ಏಜೆನ್ಸಿಯನ್ನು ರದ್ದು ಮಾಡಿ
ಬೇರೆ ಕಡೆಯಿಂದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಲಾಗುತ್ತಿತ್ತು.
ಇಂತಹ ಹುಳು ಹಿಡಿದ ಅಹಾರ ಪದಾರ್ಥಗಳನ್ನು ಅಂಗನವಾಡಿಯ ಮಕ್ಕಳಿಗೆ ಪೂರೈಕೆ ಮಾಡುತ್ತಿದ್ದ ಈ ಸಂಸ್ಥೆಯ ವಿರುದ್ಧ ಕೇಂದ್ರ ಅಹಾರ ಸಂಶೋಧನಾಯದ ಅಧಿಕಾರಿಗಳು ದಾಳಿ ನಡೆಸಿ, ನೀಡಿದ ವರದಿಯ ಮೇಲೆ ಈ ಸಂಸ್ಥೆಯ ಆಹಾರ ಪೂರೈಕೆಯ ಪರವಾನಗಿಯನ್ನು ಆಗ ರದ್ದು ಮಾಡಲಾಗಿತ್ತು
ಆದರೆ, ಈ ವರದಿಗೆ ಮೂರೇ ತಿಂಗಳಲ್ಲಿ ಧೂಳು ಹಿಡಿಸಿ ತಾಲ್ಲೂಕಿನ ಅಂಗನವಾಡಿಗಳಿಗೆ ಅಹಾರ ಪೂರೈಸುವ ಪರವಾನಗಿಯನ್ನು ಎಂಎಸ್ಪಿಸಿ ಪಡೆಯಲು ಯಶಸ್ವಿಯಾಗಿತ್ತು.
ಈಗ ಮತ್ತೆ ತಾಲೂಕಿನ ಅಂಗನವಾಡಿಗಳಿಗೆ ಹುಳು ಹಿಡಿದ ಅಹಾರ ಪದಾರ್ಥಗಳು ಸರಬರಾಜಾಗುತ್ತಿರುವುದು ಬಹಿರಂಗವಾಗಿದ್ದು, ಸರ್ಕಾರ ಹಾಗೂ ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟವರ ವಿರುದ್ಧ ಈಗಲಾದರೂ ಕ್ರಮ ಜರುಗಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…
ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…
ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…
ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…
ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…