ನಂಜನಗೂಡು: ತಾಲ್ಲೂಕಿನ ಹೆಡಿಯಾಲದ ಅಂಗನವಾಡಿಗೆ ಹುಳು ಹಿಡಿದ ಆಹಾರಗಳು ಮತ್ತೆ ಸರಬರಾಜಾಗುತ್ತಿರುವ ಆತಂಕಕಾರಿ ಘಟನೆ ನಡೆದಿದೆ.
ಅಂಗನವಾಡಿಗೆ ಪೂರೈಕೆಯಾಗುತ್ತಿರುವ ಆಹಾರ ಪುಟ್ಟಗಳಲ್ಲಿರುವ ಪದಾರ್ಥಗಳು ಹುಳು ಹಿಡಿದಿರುವುದು ಕಂಡುಬಂದಿದೆ. ಕಳೆದ ವರ್ಷವೂ ಇದೇ ರೀತಿ ಹುಳುಹಿಡಿದ ಆಹಾರ ಪದಾರ್ಥಗಳು ಸರಬರಾಜಾಗಿದ್ದ
ಹಿನ್ನಲೆಯಲ್ಲಿ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುತ್ತಿದ್ದ ಎಂಎಸ್ಪಿಸಿ ಏಜೆನ್ಸಿಯನ್ನು ರದ್ದು ಮಾಡಿ
ಬೇರೆ ಕಡೆಯಿಂದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಲಾಗುತ್ತಿತ್ತು.
ಇಂತಹ ಹುಳು ಹಿಡಿದ ಅಹಾರ ಪದಾರ್ಥಗಳನ್ನು ಅಂಗನವಾಡಿಯ ಮಕ್ಕಳಿಗೆ ಪೂರೈಕೆ ಮಾಡುತ್ತಿದ್ದ ಈ ಸಂಸ್ಥೆಯ ವಿರುದ್ಧ ಕೇಂದ್ರ ಅಹಾರ ಸಂಶೋಧನಾಯದ ಅಧಿಕಾರಿಗಳು ದಾಳಿ ನಡೆಸಿ, ನೀಡಿದ ವರದಿಯ ಮೇಲೆ ಈ ಸಂಸ್ಥೆಯ ಆಹಾರ ಪೂರೈಕೆಯ ಪರವಾನಗಿಯನ್ನು ಆಗ ರದ್ದು ಮಾಡಲಾಗಿತ್ತು
ಆದರೆ, ಈ ವರದಿಗೆ ಮೂರೇ ತಿಂಗಳಲ್ಲಿ ಧೂಳು ಹಿಡಿಸಿ ತಾಲ್ಲೂಕಿನ ಅಂಗನವಾಡಿಗಳಿಗೆ ಅಹಾರ ಪೂರೈಸುವ ಪರವಾನಗಿಯನ್ನು ಎಂಎಸ್ಪಿಸಿ ಪಡೆಯಲು ಯಶಸ್ವಿಯಾಗಿತ್ತು.
ಈಗ ಮತ್ತೆ ತಾಲೂಕಿನ ಅಂಗನವಾಡಿಗಳಿಗೆ ಹುಳು ಹಿಡಿದ ಅಹಾರ ಪದಾರ್ಥಗಳು ಸರಬರಾಜಾಗುತ್ತಿರುವುದು ಬಹಿರಂಗವಾಗಿದ್ದು, ಸರ್ಕಾರ ಹಾಗೂ ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟವರ ವಿರುದ್ಧ ಈಗಲಾದರೂ ಕ್ರಮ ಜರುಗಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…