ಮೈಸೂರಿನ ಕರು ಭಕ್ಷಕ ಮೊಸಳೆಯ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ
ಮೈಸೂರು: ನಗರದ ಜೆಎಸ್ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿರುವ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಗುರುವಾರ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದೆ.
ನಗರದ ರಾಮಾನುಜ ರಸ್ತೆ ಒಂಬತ್ತನೇ ಕ್ರಾಸ್ ರಸ್ತೆಯಲ್ಲಿ ಭಾನುವಾರ ಮೊಸಳೆ ಕರುವೊಂದನ್ನು ಬಲಿ ತೆಗೆದುಕೊಂಡಿತ್ತು. ಅಂದು ಕರು ಭಕ್ಷಣೆ ಬಳಿಕ ಕೆರೆ ಸೇರಿಕೊಂಡಿದ್ದ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವಿಫಲವಾಗಿತ್ತು. ಇದೀಗ ಮತ್ತೆ ಹೊಸದಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ.
ಆರ್ಎಫ್ಓ ಸುರೇಂದ್ರ, ಡಿ ಆರ್ಎಫ್ಓ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 6 ಜನ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಇವರಿಗೆ ಸ್ಥಳೀಯರಾದ ಮಧುಕರ್ ಮತ್ತುಸ್ನೇಹಿತರು ನೆರವು ನೀಡುತ್ತಿದ್ದಾರೆ.
ಭಾನುವಾರ ಕರುವನ್ನು ಬಲಿ ತೆಗೆದುಕೊಂಡ ಮೊಸಳೆ ಪಕ್ಕದ ಕೆರೆಯಲ್ಲಿ ಅವಿತುಕೊಂಡಿತ್ತು. ಮೋಟಾರ್ ಬಳಸಿ ಕೆರೆಯ ನೀರನ್ನು ಹೊರಚೆಲ್ಲಿ ಮೊಸಳೆಯನ್ನು ಹಿಡಿಯುವ ಪ್ರಯತ್ನ ಮಾಡಲಾಗಿತ್ತು. ಆದರೆ ನೀರನ್ನು ಖಾಲಿ ಮಾಡುವಷ್ಟರಲ್ಲಿ ಸಂಜೆಯಾಗಿ ಕತ್ತಲಾವರಿಸಿತ್ತು. ಕಾರ್ಯಾಚರಣೆ ಕೈ ಬಿಟ್ಟ ಅಧಿಕಾರಿಗಳು ಬರಿಗೈಯಲ್ಲಿ ತೆರಳಿದ್ದರು.
ಸೋಮವಾರ ರಾಜ ಕಾಲುವೆಯ ಕೊಳಚೆ ನೀರಿನಲ್ಲಿ ಕಾಣಿಸಿಕೊಂಡ ಮೊಸಳೆ ಇದೇ ಜಾಗದಲ್ಲಿ ಪದೇಪದೇ ಕಾಣಿಸಿಕೊಂಡಿದೆ. ಆದರೆ ಕೊಳಚೆ ನೀರಿನಲ್ಲಿ ಮೊಸಳೆಯ ಇರುವು ಪತ್ತೆ ಮಾಡಲೂ ಕಷ್ಟವಾಗುತ್ತಿತ್ತು. ಎಲೆತೋಟದ ಬಳಿ ಅಡಿಕೆ ತೋಟದ ಮಧ್ಯೆಯೇ ಕೊಳಚೆ ನೀರು ಹಾದುಹೋಗುತ್ತಿದ್ದು ಅಕ್ಕಪಕ್ಕ ಪೊದೆಗಳು ಬೆಳೆದು ನಿಂತಿರುವುದರಿಂದ ಮೊಸಳೆಯ ಪಾಲಿಗೆ ಇದು ಸುರಕ್ಷಿತ ತಾಣವಾಗಿದೆ. ಈ ಕಾರಣದಿಂದ ಈಗ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಲಾಗಿದೆ.
ಎಲೆತೋಟ, ಸೀವೇಜ್ ಫಾರಂ ಸಮೀಪ ಕಳೆದ ಮೂರು ವರ್ಷಗಳಿಂದ ಕಾಣಿಸಿಕೊಳ್ಳುತ್ತಿರುವ ಮೊಸಳೆ ಇದೀಗ ನಾಗರಿಕರು ವಾಸ ಮಾಡುವ ಮನೆ ಸಮೀಪಕ್ಕೆ ಬಂದಿರುವುದರಿಂದ ಹೇಗಾದರೂ ಮಾಡಿ ಸೆರೆ ಹಿಡಿಯಲೇಬೇಕೆಂದು ಅರಣ್ಯ ಇಲಾಖೆ ಪಣ ತೊಟ್ಟಿದೆ. ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಕಾರ್ಯಾಚರಣೆ ಬಳಿಕ ನೈಜ ಸಂಗತಿ ಬೆಳಕಿಗೆ ಬರಲಿದೆ. ಇದೀಗ ಪತ್ತೆಯಾಗಿರುವ ಮೊಸಳೆ ಸುಮಾರು ಆರು ಅಡಿಗಳಷ್ಟು ಉದ್ದವಿದೆ.
ಸೈಂಟ್ ಮೇರಿಸ್ ಶಾಲೆ ಸಮೀಪದ ರಾಜಕಾಲುವೆಯಲ್ಲಿ ಅಕ್ಟೋಬರ್ 15ರಂದು ಕಾಣಿಸಿಕೊಂಡ ಮೊಸಳೆ ಬಳಿಕ ಎಲೆತೋಟದ ತೆರೆದ ಕಾಲುವೆಯಲ್ಲಿಯೇ ಪದೇ ಪದೇ ಕಾಣಿಸಿಕೊಂಡಿದೆ. –
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…