ಜಿಲ್ಲೆಗಳು

ಎಲೆತೋಟದ ಮೊಸಳೆ ಸೆರೆಗೆ ಜೆಸಿಬಿ ಕಾರ್ಯಾಚರಣೆ

ಮೈಸೂರಿನ ಕರು ಭಕ್ಷಕ ಮೊಸಳೆಯ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ

ಮೈಸೂರು: ನಗರದ ಜೆಎಸ್‌ಎಸ್‌ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿರುವ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಗುರುವಾರ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದೆ.

ನಗರದ ರಾಮಾನುಜ ರಸ್ತೆ ಒಂಬತ್ತನೇ ಕ್ರಾಸ್‌ ರಸ್ತೆಯಲ್ಲಿ ಭಾನುವಾರ ಮೊಸಳೆ ಕರುವೊಂದನ್ನು ಬಲಿ ತೆಗೆದುಕೊಂಡಿತ್ತು. ಅಂದು ಕರು ಭಕ್ಷಣೆ ಬಳಿಕ ಕೆರೆ ಸೇರಿಕೊಂಡಿದ್ದ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವಿಫಲವಾಗಿತ್ತು. ಇದೀಗ ಮತ್ತೆ ಹೊಸದಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಆರ್‌ಎಫ್‌ಓ ಸುರೇಂದ್ರ, ಡಿ ಆರ್‌ಎಫ್‌ಓ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 6 ಜನ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಇವರಿಗೆ ಸ್ಥಳೀಯರಾದ ಮಧುಕರ್‌ ಮತ್ತುಸ್ನೇಹಿತರು ನೆರವು ನೀಡುತ್ತಿದ್ದಾರೆ.

ಭಾನುವಾರ ಕರುವನ್ನು ಬಲಿ ತೆಗೆದುಕೊಂಡ ಮೊಸಳೆ ಪಕ್ಕದ ಕೆರೆಯಲ್ಲಿ ಅವಿತುಕೊಂಡಿತ್ತು. ಮೋಟಾರ್‌ ಬಳಸಿ ಕೆರೆಯ ನೀರನ್ನು ಹೊರಚೆಲ್ಲಿ ಮೊಸಳೆಯನ್ನು ಹಿಡಿಯುವ ಪ್ರಯತ್ನ ಮಾಡಲಾಗಿತ್ತು. ಆದರೆ ನೀರನ್ನು ಖಾಲಿ ಮಾಡುವಷ್ಟರಲ್ಲಿ ಸಂಜೆಯಾಗಿ ಕತ್ತಲಾವರಿಸಿತ್ತು. ಕಾರ್ಯಾಚರಣೆ ಕೈ ಬಿಟ್ಟ ಅಧಿಕಾರಿಗಳು ಬರಿಗೈಯಲ್ಲಿ ತೆರಳಿದ್ದರು.

ಸೋಮವಾರ ರಾಜ ಕಾಲುವೆಯ ಕೊಳಚೆ ನೀರಿನಲ್ಲಿ ಕಾಣಿಸಿಕೊಂಡ ಮೊಸಳೆ ಇದೇ ಜಾಗದಲ್ಲಿ ಪದೇಪದೇ ಕಾಣಿಸಿಕೊಂಡಿದೆ. ಆದರೆ ಕೊಳಚೆ ನೀರಿನಲ್ಲಿ ಮೊಸಳೆಯ ಇರುವು ಪತ್ತೆ ಮಾಡಲೂ ಕಷ್ಟವಾಗುತ್ತಿತ್ತು. ಎಲೆತೋಟದ ಬಳಿ ಅಡಿಕೆ ತೋಟದ ಮಧ್ಯೆಯೇ ಕೊಳಚೆ ನೀರು ಹಾದುಹೋಗುತ್ತಿದ್ದು ಅಕ್ಕಪಕ್ಕ ಪೊದೆಗಳು ಬೆಳೆದು ನಿಂತಿರುವುದರಿಂದ ಮೊಸಳೆಯ ಪಾಲಿಗೆ ಇದು ಸುರಕ್ಷಿತ ತಾಣವಾಗಿದೆ. ಈ ಕಾರಣದಿಂದ ಈಗ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಎಲೆತೋಟ, ಸೀವೇಜ್‌ ಫಾರಂ ಸಮೀಪ ಕಳೆದ ಮೂರು ವರ್ಷಗಳಿಂದ ಕಾಣಿಸಿಕೊಳ್ಳುತ್ತಿರುವ ಮೊಸಳೆ ಇದೀಗ ನಾಗರಿಕರು ವಾಸ ಮಾಡುವ ಮನೆ ಸಮೀಪಕ್ಕೆ ಬಂದಿರುವುದರಿಂದ ಹೇಗಾದರೂ ಮಾಡಿ ಸೆರೆ ಹಿಡಿಯಲೇಬೇಕೆಂದು ಅರಣ್ಯ ಇಲಾಖೆ ಪಣ ತೊಟ್ಟಿದೆ. ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಕಾರ್ಯಾಚರಣೆ ಬಳಿಕ ನೈಜ ಸಂಗತಿ ಬೆಳಕಿಗೆ ಬರಲಿದೆ. ಇದೀಗ ಪತ್ತೆಯಾಗಿರುವ ಮೊಸಳೆ ಸುಮಾರು ಆರು ಅಡಿಗಳಷ್ಟು ಉದ್ದವಿದೆ.

ಸೈಂಟ್‌ ಮೇರಿಸ್‌ ಶಾಲೆ ಸಮೀಪದ ರಾಜಕಾಲುವೆಯಲ್ಲಿ ಅಕ್ಟೋಬರ್‌ 15ರಂದು ಕಾಣಿಸಿಕೊಂಡ ಮೊಸಳೆ ಬಳಿಕ ಎಲೆತೋಟದ ತೆರೆದ ಕಾಲುವೆಯಲ್ಲಿಯೇ ಪದೇ ಪದೇ ಕಾಣಿಸಿಕೊಂಡಿದೆ. –

andolanait

Recent Posts

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

2 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

3 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

3 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

3 hours ago

ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿ ಆರೋಪ: ಕನ್ನಡ ಒಕ್ಕೂಟದಿಂದ ಧರಣಿಗೆ ಕರೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…

3 hours ago

ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ

ಟೆಹರಾನ್:‌ ಇರಾನ್‌ ಮತ್ತು ಇಸ್ರೇಲ್‌ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…

4 hours ago