ಮೈಸೂರಿನ ಕರು ಭಕ್ಷಕ ಮೊಸಳೆಯ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ
ಮೈಸೂರು: ನಗರದ ಜೆಎಸ್ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿರುವ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಗುರುವಾರ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದೆ.
ನಗರದ ರಾಮಾನುಜ ರಸ್ತೆ ಒಂಬತ್ತನೇ ಕ್ರಾಸ್ ರಸ್ತೆಯಲ್ಲಿ ಭಾನುವಾರ ಮೊಸಳೆ ಕರುವೊಂದನ್ನು ಬಲಿ ತೆಗೆದುಕೊಂಡಿತ್ತು. ಅಂದು ಕರು ಭಕ್ಷಣೆ ಬಳಿಕ ಕೆರೆ ಸೇರಿಕೊಂಡಿದ್ದ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವಿಫಲವಾಗಿತ್ತು. ಇದೀಗ ಮತ್ತೆ ಹೊಸದಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ.
ಆರ್ಎಫ್ಓ ಸುರೇಂದ್ರ, ಡಿ ಆರ್ಎಫ್ಓ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 6 ಜನ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಇವರಿಗೆ ಸ್ಥಳೀಯರಾದ ಮಧುಕರ್ ಮತ್ತುಸ್ನೇಹಿತರು ನೆರವು ನೀಡುತ್ತಿದ್ದಾರೆ.
ಭಾನುವಾರ ಕರುವನ್ನು ಬಲಿ ತೆಗೆದುಕೊಂಡ ಮೊಸಳೆ ಪಕ್ಕದ ಕೆರೆಯಲ್ಲಿ ಅವಿತುಕೊಂಡಿತ್ತು. ಮೋಟಾರ್ ಬಳಸಿ ಕೆರೆಯ ನೀರನ್ನು ಹೊರಚೆಲ್ಲಿ ಮೊಸಳೆಯನ್ನು ಹಿಡಿಯುವ ಪ್ರಯತ್ನ ಮಾಡಲಾಗಿತ್ತು. ಆದರೆ ನೀರನ್ನು ಖಾಲಿ ಮಾಡುವಷ್ಟರಲ್ಲಿ ಸಂಜೆಯಾಗಿ ಕತ್ತಲಾವರಿಸಿತ್ತು. ಕಾರ್ಯಾಚರಣೆ ಕೈ ಬಿಟ್ಟ ಅಧಿಕಾರಿಗಳು ಬರಿಗೈಯಲ್ಲಿ ತೆರಳಿದ್ದರು.
ಸೋಮವಾರ ರಾಜ ಕಾಲುವೆಯ ಕೊಳಚೆ ನೀರಿನಲ್ಲಿ ಕಾಣಿಸಿಕೊಂಡ ಮೊಸಳೆ ಇದೇ ಜಾಗದಲ್ಲಿ ಪದೇಪದೇ ಕಾಣಿಸಿಕೊಂಡಿದೆ. ಆದರೆ ಕೊಳಚೆ ನೀರಿನಲ್ಲಿ ಮೊಸಳೆಯ ಇರುವು ಪತ್ತೆ ಮಾಡಲೂ ಕಷ್ಟವಾಗುತ್ತಿತ್ತು. ಎಲೆತೋಟದ ಬಳಿ ಅಡಿಕೆ ತೋಟದ ಮಧ್ಯೆಯೇ ಕೊಳಚೆ ನೀರು ಹಾದುಹೋಗುತ್ತಿದ್ದು ಅಕ್ಕಪಕ್ಕ ಪೊದೆಗಳು ಬೆಳೆದು ನಿಂತಿರುವುದರಿಂದ ಮೊಸಳೆಯ ಪಾಲಿಗೆ ಇದು ಸುರಕ್ಷಿತ ತಾಣವಾಗಿದೆ. ಈ ಕಾರಣದಿಂದ ಈಗ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಲಾಗಿದೆ.
ಎಲೆತೋಟ, ಸೀವೇಜ್ ಫಾರಂ ಸಮೀಪ ಕಳೆದ ಮೂರು ವರ್ಷಗಳಿಂದ ಕಾಣಿಸಿಕೊಳ್ಳುತ್ತಿರುವ ಮೊಸಳೆ ಇದೀಗ ನಾಗರಿಕರು ವಾಸ ಮಾಡುವ ಮನೆ ಸಮೀಪಕ್ಕೆ ಬಂದಿರುವುದರಿಂದ ಹೇಗಾದರೂ ಮಾಡಿ ಸೆರೆ ಹಿಡಿಯಲೇಬೇಕೆಂದು ಅರಣ್ಯ ಇಲಾಖೆ ಪಣ ತೊಟ್ಟಿದೆ. ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಕಾರ್ಯಾಚರಣೆ ಬಳಿಕ ನೈಜ ಸಂಗತಿ ಬೆಳಕಿಗೆ ಬರಲಿದೆ. ಇದೀಗ ಪತ್ತೆಯಾಗಿರುವ ಮೊಸಳೆ ಸುಮಾರು ಆರು ಅಡಿಗಳಷ್ಟು ಉದ್ದವಿದೆ.
ಸೈಂಟ್ ಮೇರಿಸ್ ಶಾಲೆ ಸಮೀಪದ ರಾಜಕಾಲುವೆಯಲ್ಲಿ ಅಕ್ಟೋಬರ್ 15ರಂದು ಕಾಣಿಸಿಕೊಂಡ ಮೊಸಳೆ ಬಳಿಕ ಎಲೆತೋಟದ ತೆರೆದ ಕಾಲುವೆಯಲ್ಲಿಯೇ ಪದೇ ಪದೇ ಕಾಣಿಸಿಕೊಂಡಿದೆ. –
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…