ಜಿಲ್ಲೆಗಳು

ಎಲೆತೋಟದ ಮೊಸಳೆ ಸೆರೆಗೆ ಜೆಸಿಬಿ ಕಾರ್ಯಾಚರಣೆ

ಮೈಸೂರಿನ ಕರು ಭಕ್ಷಕ ಮೊಸಳೆಯ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ

ಮೈಸೂರು: ನಗರದ ಜೆಎಸ್‌ಎಸ್‌ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿರುವ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಗುರುವಾರ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದೆ.

ನಗರದ ರಾಮಾನುಜ ರಸ್ತೆ ಒಂಬತ್ತನೇ ಕ್ರಾಸ್‌ ರಸ್ತೆಯಲ್ಲಿ ಭಾನುವಾರ ಮೊಸಳೆ ಕರುವೊಂದನ್ನು ಬಲಿ ತೆಗೆದುಕೊಂಡಿತ್ತು. ಅಂದು ಕರು ಭಕ್ಷಣೆ ಬಳಿಕ ಕೆರೆ ಸೇರಿಕೊಂಡಿದ್ದ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವಿಫಲವಾಗಿತ್ತು. ಇದೀಗ ಮತ್ತೆ ಹೊಸದಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಆರ್‌ಎಫ್‌ಓ ಸುರೇಂದ್ರ, ಡಿ ಆರ್‌ಎಫ್‌ಓ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 6 ಜನ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಇವರಿಗೆ ಸ್ಥಳೀಯರಾದ ಮಧುಕರ್‌ ಮತ್ತುಸ್ನೇಹಿತರು ನೆರವು ನೀಡುತ್ತಿದ್ದಾರೆ.

ಭಾನುವಾರ ಕರುವನ್ನು ಬಲಿ ತೆಗೆದುಕೊಂಡ ಮೊಸಳೆ ಪಕ್ಕದ ಕೆರೆಯಲ್ಲಿ ಅವಿತುಕೊಂಡಿತ್ತು. ಮೋಟಾರ್‌ ಬಳಸಿ ಕೆರೆಯ ನೀರನ್ನು ಹೊರಚೆಲ್ಲಿ ಮೊಸಳೆಯನ್ನು ಹಿಡಿಯುವ ಪ್ರಯತ್ನ ಮಾಡಲಾಗಿತ್ತು. ಆದರೆ ನೀರನ್ನು ಖಾಲಿ ಮಾಡುವಷ್ಟರಲ್ಲಿ ಸಂಜೆಯಾಗಿ ಕತ್ತಲಾವರಿಸಿತ್ತು. ಕಾರ್ಯಾಚರಣೆ ಕೈ ಬಿಟ್ಟ ಅಧಿಕಾರಿಗಳು ಬರಿಗೈಯಲ್ಲಿ ತೆರಳಿದ್ದರು.

ಸೋಮವಾರ ರಾಜ ಕಾಲುವೆಯ ಕೊಳಚೆ ನೀರಿನಲ್ಲಿ ಕಾಣಿಸಿಕೊಂಡ ಮೊಸಳೆ ಇದೇ ಜಾಗದಲ್ಲಿ ಪದೇಪದೇ ಕಾಣಿಸಿಕೊಂಡಿದೆ. ಆದರೆ ಕೊಳಚೆ ನೀರಿನಲ್ಲಿ ಮೊಸಳೆಯ ಇರುವು ಪತ್ತೆ ಮಾಡಲೂ ಕಷ್ಟವಾಗುತ್ತಿತ್ತು. ಎಲೆತೋಟದ ಬಳಿ ಅಡಿಕೆ ತೋಟದ ಮಧ್ಯೆಯೇ ಕೊಳಚೆ ನೀರು ಹಾದುಹೋಗುತ್ತಿದ್ದು ಅಕ್ಕಪಕ್ಕ ಪೊದೆಗಳು ಬೆಳೆದು ನಿಂತಿರುವುದರಿಂದ ಮೊಸಳೆಯ ಪಾಲಿಗೆ ಇದು ಸುರಕ್ಷಿತ ತಾಣವಾಗಿದೆ. ಈ ಕಾರಣದಿಂದ ಈಗ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಎಲೆತೋಟ, ಸೀವೇಜ್‌ ಫಾರಂ ಸಮೀಪ ಕಳೆದ ಮೂರು ವರ್ಷಗಳಿಂದ ಕಾಣಿಸಿಕೊಳ್ಳುತ್ತಿರುವ ಮೊಸಳೆ ಇದೀಗ ನಾಗರಿಕರು ವಾಸ ಮಾಡುವ ಮನೆ ಸಮೀಪಕ್ಕೆ ಬಂದಿರುವುದರಿಂದ ಹೇಗಾದರೂ ಮಾಡಿ ಸೆರೆ ಹಿಡಿಯಲೇಬೇಕೆಂದು ಅರಣ್ಯ ಇಲಾಖೆ ಪಣ ತೊಟ್ಟಿದೆ. ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಕಾರ್ಯಾಚರಣೆ ಬಳಿಕ ನೈಜ ಸಂಗತಿ ಬೆಳಕಿಗೆ ಬರಲಿದೆ. ಇದೀಗ ಪತ್ತೆಯಾಗಿರುವ ಮೊಸಳೆ ಸುಮಾರು ಆರು ಅಡಿಗಳಷ್ಟು ಉದ್ದವಿದೆ.

ಸೈಂಟ್‌ ಮೇರಿಸ್‌ ಶಾಲೆ ಸಮೀಪದ ರಾಜಕಾಲುವೆಯಲ್ಲಿ ಅಕ್ಟೋಬರ್‌ 15ರಂದು ಕಾಣಿಸಿಕೊಂಡ ಮೊಸಳೆ ಬಳಿಕ ಎಲೆತೋಟದ ತೆರೆದ ಕಾಲುವೆಯಲ್ಲಿಯೇ ಪದೇ ಪದೇ ಕಾಣಿಸಿಕೊಂಡಿದೆ. –

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

22 hours ago