ಮೈಸೂರಿನ ಕರು ಭಕ್ಷಕ ಮೊಸಳೆಯ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ
ಮೈಸೂರು: ನಗರದ ಜೆಎಸ್ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿರುವ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಗುರುವಾರ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದೆ.
ನಗರದ ರಾಮಾನುಜ ರಸ್ತೆ ಒಂಬತ್ತನೇ ಕ್ರಾಸ್ ರಸ್ತೆಯಲ್ಲಿ ಭಾನುವಾರ ಮೊಸಳೆ ಕರುವೊಂದನ್ನು ಬಲಿ ತೆಗೆದುಕೊಂಡಿತ್ತು. ಅಂದು ಕರು ಭಕ್ಷಣೆ ಬಳಿಕ ಕೆರೆ ಸೇರಿಕೊಂಡಿದ್ದ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವಿಫಲವಾಗಿತ್ತು. ಇದೀಗ ಮತ್ತೆ ಹೊಸದಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ.
ಆರ್ಎಫ್ಓ ಸುರೇಂದ್ರ, ಡಿ ಆರ್ಎಫ್ಓ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 6 ಜನ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಇವರಿಗೆ ಸ್ಥಳೀಯರಾದ ಮಧುಕರ್ ಮತ್ತುಸ್ನೇಹಿತರು ನೆರವು ನೀಡುತ್ತಿದ್ದಾರೆ.
ಭಾನುವಾರ ಕರುವನ್ನು ಬಲಿ ತೆಗೆದುಕೊಂಡ ಮೊಸಳೆ ಪಕ್ಕದ ಕೆರೆಯಲ್ಲಿ ಅವಿತುಕೊಂಡಿತ್ತು. ಮೋಟಾರ್ ಬಳಸಿ ಕೆರೆಯ ನೀರನ್ನು ಹೊರಚೆಲ್ಲಿ ಮೊಸಳೆಯನ್ನು ಹಿಡಿಯುವ ಪ್ರಯತ್ನ ಮಾಡಲಾಗಿತ್ತು. ಆದರೆ ನೀರನ್ನು ಖಾಲಿ ಮಾಡುವಷ್ಟರಲ್ಲಿ ಸಂಜೆಯಾಗಿ ಕತ್ತಲಾವರಿಸಿತ್ತು. ಕಾರ್ಯಾಚರಣೆ ಕೈ ಬಿಟ್ಟ ಅಧಿಕಾರಿಗಳು ಬರಿಗೈಯಲ್ಲಿ ತೆರಳಿದ್ದರು.
ಸೋಮವಾರ ರಾಜ ಕಾಲುವೆಯ ಕೊಳಚೆ ನೀರಿನಲ್ಲಿ ಕಾಣಿಸಿಕೊಂಡ ಮೊಸಳೆ ಇದೇ ಜಾಗದಲ್ಲಿ ಪದೇಪದೇ ಕಾಣಿಸಿಕೊಂಡಿದೆ. ಆದರೆ ಕೊಳಚೆ ನೀರಿನಲ್ಲಿ ಮೊಸಳೆಯ ಇರುವು ಪತ್ತೆ ಮಾಡಲೂ ಕಷ್ಟವಾಗುತ್ತಿತ್ತು. ಎಲೆತೋಟದ ಬಳಿ ಅಡಿಕೆ ತೋಟದ ಮಧ್ಯೆಯೇ ಕೊಳಚೆ ನೀರು ಹಾದುಹೋಗುತ್ತಿದ್ದು ಅಕ್ಕಪಕ್ಕ ಪೊದೆಗಳು ಬೆಳೆದು ನಿಂತಿರುವುದರಿಂದ ಮೊಸಳೆಯ ಪಾಲಿಗೆ ಇದು ಸುರಕ್ಷಿತ ತಾಣವಾಗಿದೆ. ಈ ಕಾರಣದಿಂದ ಈಗ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಲಾಗಿದೆ.
ಎಲೆತೋಟ, ಸೀವೇಜ್ ಫಾರಂ ಸಮೀಪ ಕಳೆದ ಮೂರು ವರ್ಷಗಳಿಂದ ಕಾಣಿಸಿಕೊಳ್ಳುತ್ತಿರುವ ಮೊಸಳೆ ಇದೀಗ ನಾಗರಿಕರು ವಾಸ ಮಾಡುವ ಮನೆ ಸಮೀಪಕ್ಕೆ ಬಂದಿರುವುದರಿಂದ ಹೇಗಾದರೂ ಮಾಡಿ ಸೆರೆ ಹಿಡಿಯಲೇಬೇಕೆಂದು ಅರಣ್ಯ ಇಲಾಖೆ ಪಣ ತೊಟ್ಟಿದೆ. ಸ್ಥಳೀಯರ ಪ್ರಕಾರ ಇಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿದ್ದು ಕಾರ್ಯಾಚರಣೆ ಬಳಿಕ ನೈಜ ಸಂಗತಿ ಬೆಳಕಿಗೆ ಬರಲಿದೆ. ಇದೀಗ ಪತ್ತೆಯಾಗಿರುವ ಮೊಸಳೆ ಸುಮಾರು ಆರು ಅಡಿಗಳಷ್ಟು ಉದ್ದವಿದೆ.
ಸೈಂಟ್ ಮೇರಿಸ್ ಶಾಲೆ ಸಮೀಪದ ರಾಜಕಾಲುವೆಯಲ್ಲಿ ಅಕ್ಟೋಬರ್ 15ರಂದು ಕಾಣಿಸಿಕೊಂಡ ಮೊಸಳೆ ಬಳಿಕ ಎಲೆತೋಟದ ತೆರೆದ ಕಾಲುವೆಯಲ್ಲಿಯೇ ಪದೇ ಪದೇ ಕಾಣಿಸಿಕೊಂಡಿದೆ. –
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…