ಜಿಲ್ಲೆಗಳು

helping hands jain organizations ವತಿಯಿಂದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

ಮೈಸೂರು : ನಗರದ ಇಟ್ಟಿಗೆಗೂಡಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿಂದು helping hands jain organizations   ಸದಸ್ಯರುಗಳು ಇಂದು ಶಾಲೆಯ  ವಿದ್ಯಾರ್ಥಿಗಳಿಗೆ ಬಿಳಿಸಮವಸ್ತ್ರ, ನೋಡ್ ಬುಕ್, ಶೂ, ಪ್ಯಾಡ್ ಸೇರಿದಂತೆ ಹಲವು ಕಲಿಕಾ ಸಾಮಾಗ್ರಿಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರ ರಾಜೇ ಅರಸ್ ಅವರು ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು, ಸರ್ಕಾರಿ ಶಾಲೆಗಳ ಬಲವರ್ಧನೆ ಗೆ ಸರ್ಕಾರ ಹಲವು ರೀತಿಯ ಕ್ರಮ ವಹಿಸಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿಯೂ ಶಾಲೆಗಳ ಉನ್ನತಿಗೆ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತಿದೆ ಎಂದರು. ಮುಂದುವರಿದು ಸಂಘ-ಸಂಸ್ಥಗಳು ನೀಡುತ್ತಿರುವ ನೆರವಿನಿಂದಾಗಿ ರಾಜ್ಯದ ಹಲವೆಡೆ ಸರ್ಕಾರಿ ಶಾಲೆಗಳು ಉಳಿದು ಕೊಂಡಿವೆ. ಇಂತಹ ಕಾರ್ಯ ನಿರಂತರವಾಗಿ ಇರಬೇಕು ಎಂದು ಆಶಿಸಿದರು.

ಬಳಿಕ ಮಾತನಾಡಿದ ದಕ್ಷಿಣ ವಲಯ ಬಿಇಒ ರಾಮಾರಾಧ್ಯ  ಅವರು ಇಟ್ಟಿಗೆಗೂಡು ಸರ್ಕಾರಿ ಶಾಲೆ ಮಾದರಿಯಾಗಿದೆ. ಖಾಸಗಿ ಶಾಲೆಗಳಲ್ಲಿ ಸಿಗುತ್ತಿರುವ ಸೌಲಭ್ಯ ಈ ಶಾಲೆಯಲ್ಲೂ ದೊರಕುತ್ತಿದೆ. ಗುಣಮಟ್ಟ ಶಿಕ್ಷಣಕ್ಕೆ ಇಲ್ಲಿ ಒತ್ತು ನೀಡಲಾಗುತ್ತಿದ್ದು, ಒಳ್ಳೆಯ ಬೆಳವಣಿಗೆ ಎಂದರು. ಮುಖ್ಯ ಶಿಕ್ಷಕ ‌ಮಾಲಂಗಿ ಸುರೇಶ್ ಮಾತನಾಡಿ ಮಕ್ಕಳ ‌ಶೈಕ್ಷಣಿಕ ಅಭಿವೃದ್ಧಿಗೆ ಡಿಡಿಪಿಐ ಆದ್ಯತೆ ನೀಡುತ್ತಿದ್ದು, ಶಾಲೆ ಪ್ರಗತಿಗೆ ಶ್ರಮಿಸುತ್ತಿದ್ದಾರೆ. ಪ್ರತಿ ವರ್ಷ ಮಕ್ಕಳಿಗೆ ಅಗತ್ಯವಿರುವ ಕಲಿಕಾ ಸಾಮಗ್ರಿ ಮತ್ತು ಪರಿಕರಗಳನ್ನು ಹೆಲ್ಪಿಂಗ್ಸ್ ಹ್ಯಾಂಡ್ಸ್ ಸಂಸ್ಥೆ ನೀಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ಆರ್ಗನೈಸೇಷನ್ ಪದಾಧಿಕಾರಿಗಳಾದ ರಾಜನ್ ಬಾಗ್ಮಾರ್, ಮಹಾವೀರ್ ಕಬಿಯಾ, ಆನಂದ್ ಪಟ್ವಾರ್ , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸೋಮೇಗೌಡ, ಡಯೆಟ್ ಉಪನ್ಯಾಸಕಿ ಜಯಂತಿ, ಗ್ರಾಮ ಲೆಕ್ಕಿಗರ ಸಂಘದ ಜಿಲ್ಲಾಧ್ಯಕ್ಷ ನಾಗೇಶ್  ಇತರರು ಉಪಸ್ಥಿತರಿದ್ದರು.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

4 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

5 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

6 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

6 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

8 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

9 hours ago