ಜಿಲ್ಲೆಗಳು

helping hands jain organizations ವತಿಯಿಂದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

ಮೈಸೂರು : ನಗರದ ಇಟ್ಟಿಗೆಗೂಡಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿಂದು helping hands jain organizations   ಸದಸ್ಯರುಗಳು ಇಂದು ಶಾಲೆಯ  ವಿದ್ಯಾರ್ಥಿಗಳಿಗೆ ಬಿಳಿಸಮವಸ್ತ್ರ, ನೋಡ್ ಬುಕ್, ಶೂ, ಪ್ಯಾಡ್ ಸೇರಿದಂತೆ ಹಲವು ಕಲಿಕಾ ಸಾಮಾಗ್ರಿಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರ ರಾಜೇ ಅರಸ್ ಅವರು ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು, ಸರ್ಕಾರಿ ಶಾಲೆಗಳ ಬಲವರ್ಧನೆ ಗೆ ಸರ್ಕಾರ ಹಲವು ರೀತಿಯ ಕ್ರಮ ವಹಿಸಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿಯೂ ಶಾಲೆಗಳ ಉನ್ನತಿಗೆ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತಿದೆ ಎಂದರು. ಮುಂದುವರಿದು ಸಂಘ-ಸಂಸ್ಥಗಳು ನೀಡುತ್ತಿರುವ ನೆರವಿನಿಂದಾಗಿ ರಾಜ್ಯದ ಹಲವೆಡೆ ಸರ್ಕಾರಿ ಶಾಲೆಗಳು ಉಳಿದು ಕೊಂಡಿವೆ. ಇಂತಹ ಕಾರ್ಯ ನಿರಂತರವಾಗಿ ಇರಬೇಕು ಎಂದು ಆಶಿಸಿದರು.

ಬಳಿಕ ಮಾತನಾಡಿದ ದಕ್ಷಿಣ ವಲಯ ಬಿಇಒ ರಾಮಾರಾಧ್ಯ  ಅವರು ಇಟ್ಟಿಗೆಗೂಡು ಸರ್ಕಾರಿ ಶಾಲೆ ಮಾದರಿಯಾಗಿದೆ. ಖಾಸಗಿ ಶಾಲೆಗಳಲ್ಲಿ ಸಿಗುತ್ತಿರುವ ಸೌಲಭ್ಯ ಈ ಶಾಲೆಯಲ್ಲೂ ದೊರಕುತ್ತಿದೆ. ಗುಣಮಟ್ಟ ಶಿಕ್ಷಣಕ್ಕೆ ಇಲ್ಲಿ ಒತ್ತು ನೀಡಲಾಗುತ್ತಿದ್ದು, ಒಳ್ಳೆಯ ಬೆಳವಣಿಗೆ ಎಂದರು. ಮುಖ್ಯ ಶಿಕ್ಷಕ ‌ಮಾಲಂಗಿ ಸುರೇಶ್ ಮಾತನಾಡಿ ಮಕ್ಕಳ ‌ಶೈಕ್ಷಣಿಕ ಅಭಿವೃದ್ಧಿಗೆ ಡಿಡಿಪಿಐ ಆದ್ಯತೆ ನೀಡುತ್ತಿದ್ದು, ಶಾಲೆ ಪ್ರಗತಿಗೆ ಶ್ರಮಿಸುತ್ತಿದ್ದಾರೆ. ಪ್ರತಿ ವರ್ಷ ಮಕ್ಕಳಿಗೆ ಅಗತ್ಯವಿರುವ ಕಲಿಕಾ ಸಾಮಗ್ರಿ ಮತ್ತು ಪರಿಕರಗಳನ್ನು ಹೆಲ್ಪಿಂಗ್ಸ್ ಹ್ಯಾಂಡ್ಸ್ ಸಂಸ್ಥೆ ನೀಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ಆರ್ಗನೈಸೇಷನ್ ಪದಾಧಿಕಾರಿಗಳಾದ ರಾಜನ್ ಬಾಗ್ಮಾರ್, ಮಹಾವೀರ್ ಕಬಿಯಾ, ಆನಂದ್ ಪಟ್ವಾರ್ , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸೋಮೇಗೌಡ, ಡಯೆಟ್ ಉಪನ್ಯಾಸಕಿ ಜಯಂತಿ, ಗ್ರಾಮ ಲೆಕ್ಕಿಗರ ಸಂಘದ ಜಿಲ್ಲಾಧ್ಯಕ್ಷ ನಾಗೇಶ್  ಇತರರು ಉಪಸ್ಥಿತರಿದ್ದರು.

andolanait

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

2 hours ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

3 hours ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

3 hours ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

3 hours ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

3 hours ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

4 hours ago