ಜಿಲ್ಲೆಗಳು

ನಮ್ಮಲ್ಲಿ ಉನ್ನತ ಶಿಕ್ಷಣ ಭದ್ರವಾಗಿಲ್ಲ: ಪ್ರೊ.ಎಂ.ಕೃಷ್ಣೇಗೌಡ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ

ಮೈಸೂರು: ನಮ್ಮಲ್ಲಿ ಪ್ರಾಥಮಿಕ ಶಿಕ್ಷಣ ಚೆನ್ನಾಗಿದೆ. ಆದರೆ, ಉನ್ನತ ಶಿಕ್ಷಣ ಭದ್ರವಾಗಿಲ್ಲ. ಬೇರೆ ಬೇರೆ ದೇಶಗಳ ವಿಶ್ವವಿದ್ಯಾನಿಲಯಗಳನ್ನು ಕಾಪಿ ಮಾಡಲು ಹೋಗಿ ಈ ರೀತಿಯಾಗಿದೆ ಎಂದು ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ತಿಳಿಸಿದರು.

ಕನ್ನಡ ಜಾನಪದ ಪರಿಷತ್ ಶುಕ್ರವಾರ ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಇಂಗ್ಲಿಷ್ ಕಲಿತವರು ಶ್ರೇಷ್ಠ ಎಂಬ ಭಾವನೆ ಸರಿಯಲ್ಲ. ಕನ್ನಡವನ್ನು ನಾವು ಹೇಳಿದಂತೆ ಬರೆಯುತ್ತೇವೆ. ಕನ್ನಡ ಅತ್ಯಂತ ಶ್ರೀಮಂತ ಭಾಷೆ. ಹಾಗಾಗಿ, ರಚನಾತ್ಮಕವಾಗಿ ಇಂಗ್ಲಿಷ್‌ಗಿಂತ ಕನ್ನಡ ಭಾಷೆಯೇ ಉತ್ತಮವಾದುದು. ಇಂಗ್ಲಿಷ್ ಅನ್ನು ಫ್ರಾನ್ಸ್, ಜರ್ಮನಿಯವರು ಹತ್ತಿರ ಬಿಟ್ಟುಕೊಂಡಿಲ್ಲ. ಆದರೆ, ಭಾರತದಲ್ಲಿ ಯಾವ ಊಟ ಮಾಡಬೇಕು, ಯಾವ ಬಟ್ಟೆ ಧರಿಸಬೇಕು ಎಂಬುದನ್ನು ನಿರ್ಧರಿಸುವುದು ಅಮೆರಿಕ ಎಂದು ಜೀನ್ಸ್, ಡೋಮಿನೊಸ್, ಕೆಎಫ್‌ಸಿಯನ್ನು ನಿದರ್ಶನವಾಗಿ ನೀಡಿದರು.

ಚುನಾವಣೆ ಸಂದರ್ಭದಲ್ಲಿ ನಿಮ್ಮ ಸೇವೆ ಮಾಡಲು ಅವಕಾಶ ಕೊಡಿ ಎಂದು ಕೇಳುವ ರಾಜಕಾರಣಿಗಳು, ಗೆದ್ದ ನಂತರ ಅಧಿಕಾರದ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಇವತ್ತು ರಾಜಕಾರಣ ಗೌರವ ತರುವ ರೀತಿಯಲ್ಲಿ ಉಳಿದಿಲ್ಲ. ಅಧಿಕಾರ, ಹಣದಿಂದ ಬರುವ ಗೌರವ ಸರಿಯಲ್ಲ. ವ್ಯಕ್ತಿತ್ವದಿಂದ ಗೌರವ ಸಿಗುವಂತಿರಬೇಕು. ಈ ದಿಸೆಯಲ್ಲಿ ಸಿಐಟಿಬಿ ಅಧ್ಯಕ್ಷರಾಗಿ ಡಿ.ಮಾದೇಗೌಡರು ಮಾಡಿರುವ ಕಾರ್ಯ ಅನನ್ಯ ಮತ್ತು ಅದ್ಭುತ ಎಂದು ಶ್ಲಾಘಿಸಿದರು.
ಸನ್ಮಾನಿತರಾದ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಮಾತನಾಡಿ, ತಾವು ಸಿಐಟಿಬಿ ಅಧ್ಯಕ್ಷರಾಗಿದ್ದಾಗ ನಿರ್ಮಿಸಿದ್ದ ಕಟ್ಟಡದಲ್ಲಿ ಕುವೆಂಪುನಗರ ಪ್ರಥಮ ದರ್ಜೆ ಕಾಲೇಜು ನಡೆಯುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ರಾಗಿಣಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಕ್ಯಾತನಹಳ್ಳಿ ಎಚ್.ಪ್ರಕಾಶ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಹಾಜರಿದ್ದರು.

 

 

andolana

Recent Posts

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

1 hour ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

1 hour ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

5 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

5 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

6 hours ago