ಜಿಲ್ಲೆಗಳು

ಕನಕದಾಸ ಜಯಂತಿಯಲ್ಲಿ ಗಮನಸೆಳೆದ ಮೆರವಣಿಗೆ

ಮೈಸೂರು: ಸಂತ ಶ್ರೇಷ್ಠ, ದಾರ್ಶನಿಕ ಶ್ರೀ ಭಕ್ತ ಕನಕದಾಸರ 535ನೇ ಜಯಂತ್ಯುತ್ಸವದ ಅಂಗವಾಗಿ ಮೈಸೂರಿನಲ್ಲಿ ಕನಕದಾಸರ ಉತ್ಸವ ಮೂರ್ತಿಯನ್ನು ಅದ್ಧೂರಿ ಮೆರವಣಿಗೆ ನಡೆಸಲಾಯಿತು.

ನಂಜರಾಜ ಬಹದ್ದೂರ್ ಛತ್ರದ ಬುಧವಾರದ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಎಚ್.ಎಚ್.ವಿಶ್ವನಾಥ್, ಕಾಗಿನೆಲೆ ಮಠದ ಶ್ರೀ ಶಿವಾನಂದಪುರಿ ಸ್ವಾಮೀಜಿ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. 

ನಂತರ ಇನ್ನೂರಕ್ಕೂ ಹೆಚ್ಚು ಮಹಿಳೆಯರು ಪೂರ್ಣಕುಂಭ ಕಳಸ ಹೊತ್ತು ಸಾಗಿದರು. ಬೀರದೇವರ ಕುಣಿತ, ಕಂಸಾಳೆ, ಗೊರವನ ಕುಣಿತ, ಸತ್ತಿಗೆ ಸೂರಪಾನಿ, ಡೊಳ್ಳು ಕುಣಿತ, ನಗಾರಿ, ವೀರಭದ್ರನ ಕುಣಿತ, ಕರಡಿ ಮಜಲು ಕಲಾವಿದರು ದಾರಿಯ ನೃತ್ಯ ಪ್ರದರ್ಶಿಸಿದರು. ತೆರೆದ ವಾಹನದಲ್ಲಿ ಅಲಂಕೃತ ಕನಕದಾಸರ ಮೂರ್ತಿಗಳು ಸಾಗಿದವು. 

ಕನಕದಾಸ ಯುವ ಬಳಗದವರು ಕುರುಬನ ರಾಣಿ, ಕವಿರತ್ನ ಕಾಳಿದಾಸ ಚಿತ್ರದ ಮೊದಲಾದ ಚಿತ್ರಗಳಿಗೆ ನೃತ್ಯ ಪ್ರದರ್ಶಿಸಿ ಮತ್ತಷ್ಟು ರಂಗು ತುಂಬಿದರು. ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ನಗರಪಾಲಿಕೆ ಸದಸ್ಯ ಜೆ.ಗೋಪಿ, ವಾಜಿ ಮಹಾಪೌರರಾದ ಪುಷ್ಪಲತಾ ಟಿ.ಬಿ.ಚಿಕ್ಕಣ್ಣ, ಟಿ.ಬಿ.ಚಿಕ್ಕಣ್ಣ, ನಗರಪಾಲಿಕೆ ಮಾಜಿ ಸದಸ್ಯ ಎಂ.ಸಿ.ಚಿಕ್ಕಣ್ಣ, ಹಿನಕಲ್ ಪ್ರಕಾಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಶಿವರಾಮು ಮತ್ತಿತರರು ಪಾಲ್ಗೊಂಡಿದ್ದರು.

andolana

Recent Posts

ಬಿಡದಿ ಟೌನ್‌ಶಿಪ್‌ : ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಏಟು ; ವಾಹನ ಜಖಂ

ಬಿಡದಿ : ಬಿಡದಿ ಟೌನ್​ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…

2 hours ago

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

7 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

7 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

14 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

14 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

14 hours ago