ಮೈಸೂರು: ಸಂತ ಶ್ರೇಷ್ಠ, ದಾರ್ಶನಿಕ ಶ್ರೀ ಭಕ್ತ ಕನಕದಾಸರ 535ನೇ ಜಯಂತ್ಯುತ್ಸವದ ಅಂಗವಾಗಿ ಮೈಸೂರಿನಲ್ಲಿ ಕನಕದಾಸರ ಉತ್ಸವ ಮೂರ್ತಿಯನ್ನು ಅದ್ಧೂರಿ ಮೆರವಣಿಗೆ ನಡೆಸಲಾಯಿತು.
ನಂಜರಾಜ ಬಹದ್ದೂರ್ ಛತ್ರದ ಬುಧವಾರದ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಎಚ್.ಎಚ್.ವಿಶ್ವನಾಥ್, ಕಾಗಿನೆಲೆ ಮಠದ ಶ್ರೀ ಶಿವಾನಂದಪುರಿ ಸ್ವಾಮೀಜಿ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ನಂತರ ಇನ್ನೂರಕ್ಕೂ ಹೆಚ್ಚು ಮಹಿಳೆಯರು ಪೂರ್ಣಕುಂಭ ಕಳಸ ಹೊತ್ತು ಸಾಗಿದರು. ಬೀರದೇವರ ಕುಣಿತ, ಕಂಸಾಳೆ, ಗೊರವನ ಕುಣಿತ, ಸತ್ತಿಗೆ ಸೂರಪಾನಿ, ಡೊಳ್ಳು ಕುಣಿತ, ನಗಾರಿ, ವೀರಭದ್ರನ ಕುಣಿತ, ಕರಡಿ ಮಜಲು ಕಲಾವಿದರು ದಾರಿಯ ನೃತ್ಯ ಪ್ರದರ್ಶಿಸಿದರು. ತೆರೆದ ವಾಹನದಲ್ಲಿ ಅಲಂಕೃತ ಕನಕದಾಸರ ಮೂರ್ತಿಗಳು ಸಾಗಿದವು.
ಕನಕದಾಸ ಯುವ ಬಳಗದವರು ಕುರುಬನ ರಾಣಿ, ಕವಿರತ್ನ ಕಾಳಿದಾಸ ಚಿತ್ರದ ಮೊದಲಾದ ಚಿತ್ರಗಳಿಗೆ ನೃತ್ಯ ಪ್ರದರ್ಶಿಸಿ ಮತ್ತಷ್ಟು ರಂಗು ತುಂಬಿದರು. ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ನಗರಪಾಲಿಕೆ ಸದಸ್ಯ ಜೆ.ಗೋಪಿ, ವಾಜಿ ಮಹಾಪೌರರಾದ ಪುಷ್ಪಲತಾ ಟಿ.ಬಿ.ಚಿಕ್ಕಣ್ಣ, ಟಿ.ಬಿ.ಚಿಕ್ಕಣ್ಣ, ನಗರಪಾಲಿಕೆ ಮಾಜಿ ಸದಸ್ಯ ಎಂ.ಸಿ.ಚಿಕ್ಕಣ್ಣ, ಹಿನಕಲ್ ಪ್ರಕಾಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಶಿವರಾಮು ಮತ್ತಿತರರು ಪಾಲ್ಗೊಂಡಿದ್ದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…