ಮಂಡ್ಯ: ಹೆದ್ದಾರಿಯಲ್ಲಿ ಎಮ್ಮೆಗೆ ಗುದ್ದಿದ ಕಾರು ಭಸ್ಮವಾದ ಘಟನೆ ಮಂಡ್ಯದ ನಾಗಮಂಗಲದ ಬೆಳ್ಳೂರು ಕ್ರಾಸ್ ಬಳಿಯ ಬಿಜಿಎಸ್ ಆಸ್ಪತ್ರೆ ಮುಂಭಾಗ ನಡೆದಿದೆ. ಹಾಸನದ ಕಡೆಯಿಂದ ಬೆಂಗಳೂರು ಕಡೆ ಹೊರಟಿದ್ದ ಕ್ವಿಡ್ ಕಾರು ಏಕಾ ಏಕಿ ಬಂದು ಎಮ್ಮೆಗೆ ಗುದ್ದಿದೆ. ಈ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಕಾರಿನಿಂದ ಹೊರ ಬಂದು ಕಾರಿನಲ್ಲಿದ್ದವರು ಪ್ರಾಣ ಉಳಿಸಿಕೊಂಡಿದ್ದಾರೆ.
ಸಿಎಂ ಕಾನ್ವೆ ತಾಲೀಮು ವೇಳೆ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್
ಇನ್ನು ಮತ್ತೊಂದು ಕಡೆ ಸಿಎಂ ಕಾನ್ವೆ ತಾಲೀಮು ವೇಳೆ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಹಳ್ಳಕ್ಕೆ ಇಳಿದ ಘಟನೆ ಮಂಡ್ಯದ ಮಳವಳ್ಳಿ ತಾತ್ಕಾಲಿಕ ಹೆಲಿಪ್ಯಾಡ್ ಬಳಿ ನಡೆದಿದೆ. ಸಿಎಂ ಜಲಮಂಡಳಿ ಯಂತ್ರಗಾರ ವೀಕ್ಷಣೆಗೆ ಆಗಮಿಸುವ ಹಿನ್ನೆಲೆ ಸಿಎಂ ಕರೆದುಕೊಂಡು ಹೋಗಲು ಪೊಲೀಸ್ ಇಲಾಖೆಯಿಂದ ತಾಲೀಮು ನಡೆಸಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ನಿಯಂತ್ರಣ ತಪ್ಪಿ ಹಳ್ಳಕೆ ಇಳಿದಿದೆ. ಅಗ್ನಿಶಾಮಕ ದಳದ ವಾಹನದ ಸಹಾಯದಿಂದ ಆ್ಯಂಬುಲೆನ್ಸ್ ಮೇಲೆಳೆಯಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…