ಮಂಡ್ಯ: ಹೆದ್ದಾರಿಯಲ್ಲಿ ಎಮ್ಮೆಗೆ ಗುದ್ದಿದ ಕಾರು ಭಸ್ಮವಾದ ಘಟನೆ ಮಂಡ್ಯದ ನಾಗಮಂಗಲದ ಬೆಳ್ಳೂರು ಕ್ರಾಸ್ ಬಳಿಯ ಬಿಜಿಎಸ್ ಆಸ್ಪತ್ರೆ ಮುಂಭಾಗ ನಡೆದಿದೆ. ಹಾಸನದ ಕಡೆಯಿಂದ ಬೆಂಗಳೂರು ಕಡೆ ಹೊರಟಿದ್ದ ಕ್ವಿಡ್ ಕಾರು ಏಕಾ ಏಕಿ ಬಂದು ಎಮ್ಮೆಗೆ ಗುದ್ದಿದೆ. ಈ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಕಾರಿನಿಂದ ಹೊರ ಬಂದು ಕಾರಿನಲ್ಲಿದ್ದವರು ಪ್ರಾಣ ಉಳಿಸಿಕೊಂಡಿದ್ದಾರೆ.
ಸಿಎಂ ಕಾನ್ವೆ ತಾಲೀಮು ವೇಳೆ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್
ಇನ್ನು ಮತ್ತೊಂದು ಕಡೆ ಸಿಎಂ ಕಾನ್ವೆ ತಾಲೀಮು ವೇಳೆ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಹಳ್ಳಕ್ಕೆ ಇಳಿದ ಘಟನೆ ಮಂಡ್ಯದ ಮಳವಳ್ಳಿ ತಾತ್ಕಾಲಿಕ ಹೆಲಿಪ್ಯಾಡ್ ಬಳಿ ನಡೆದಿದೆ. ಸಿಎಂ ಜಲಮಂಡಳಿ ಯಂತ್ರಗಾರ ವೀಕ್ಷಣೆಗೆ ಆಗಮಿಸುವ ಹಿನ್ನೆಲೆ ಸಿಎಂ ಕರೆದುಕೊಂಡು ಹೋಗಲು ಪೊಲೀಸ್ ಇಲಾಖೆಯಿಂದ ತಾಲೀಮು ನಡೆಸಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ನಿಯಂತ್ರಣ ತಪ್ಪಿ ಹಳ್ಳಕೆ ಇಳಿದಿದೆ. ಅಗ್ನಿಶಾಮಕ ದಳದ ವಾಹನದ ಸಹಾಯದಿಂದ ಆ್ಯಂಬುಲೆನ್ಸ್ ಮೇಲೆಳೆಯಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…