ಹನೂರು: ತಾಲ್ಲೂಕು ವ್ಯಾಪ್ತಿಯ ಟಿಬೆಟಿಯನ್ ಕಾಲೋನಿಗೆ ಭೇಟಿ ನೀಡಿದ್ದ ಹಿಮಾಚಲ ಪ್ರದೇಶದ ಸಂಸದ ದಾವೂಸ್ ಸಿಂಗ್ ರವರು ಶಾಸಕ ಆರ್.ನರೇಂದ್ರ ರವರನ್ನು ಸನ್ಮಾನಿಸಿದರು.
ಒಡೆಯರ್ ಪಾಳ್ಯದ ಟಿಬೆಟಿಯನ್ ಕಾಲೋನಿಯ ಚಟುವಟಿಕೆಗಳನ್ನು ಹಾಗೂ ಅಲ್ಲಿನ ಪರಿಸ್ಥಿತಿಯ ಬಗ್ಗೆ ಅಧ್ಯಯನಕ್ಕೆ ಬಂದಿದ್ದ ಹಿಮಾಚಲ ಪ್ರದೇಶದ ಸಂಸದರಾದ ದಾವೂಸ್ ಸಿಂಗ್ ಹಾಗೂ ಇಷಾಡೋಲಮ್ ರವರು ಹನೂರು ಶಾಸಕ ಆರ್ ನರೇಂದ್ರರವರ ಕೊಳ್ಳೇಗಾಲದ ನಿವಾಸಕ್ಕೆ ಭೇಟಿ ನೀಡಿ ಟಿಬೆಟಿಯನ್ನರಿಗೆ ಯಾವುದೇ ಮೂಲಭೂತ ಸೌಲಭ್ಯ ಕೊರತೆಯಾಗದಂತೆ ನೋಡಿ ಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಆರ್ ನರೇಂದ್ರ ಈಗಾಗಲೇ ಟಿಬೇಟಿಯನ್ ಕಾಲೊನಿಗೆ ಅವಶ್ಯಕತೆ ಇರುವ ರಸ್ತೆ ಚರಂಡಿ ಬೀದಿ ದೀಪ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ .ಕಳೆದ ವಾರ ಸರ್ಕಾರದಿಂದ 6 ಕೋಟಿ ಅನುದಾನ ಬಿಡುಗಡೆ ಮಾಡಿಸಿ ಟಿಬೆಟಿಯನ್ ಕಾಲೋನಿಯ ರಸ್ತೆ ಅಭಿವೃದ್ಧಿ ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿ ಪಡಿಸಲು ಶ್ರಮಿಸುವುದಾಗಿ ತಿಳಿಸಿದರು.
ಈ ಸಂಧರ್ಭದಲ್ಲಿ ಸಟಲ್ಮೆಂಟ್ ಅಧಿಕಾರಿ ಗಿಲಕ್,
ಮುಖಂಡ ಸವಘ್ ಸೋನಮ್, ಲೋಬಸ್ಗ್, ಷೇಧರ್ ಸೇರಿದಂತೆ ಇತರರು ಇದ್ದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…