ಹನೂರು: ತಾಲ್ಲೂಕು ವ್ಯಾಪ್ತಿಯ ಟಿಬೆಟಿಯನ್ ಕಾಲೋನಿಗೆ ಭೇಟಿ ನೀಡಿದ್ದ ಹಿಮಾಚಲ ಪ್ರದೇಶದ ಸಂಸದ ದಾವೂಸ್ ಸಿಂಗ್ ರವರು ಶಾಸಕ ಆರ್.ನರೇಂದ್ರ ರವರನ್ನು ಸನ್ಮಾನಿಸಿದರು.
ಒಡೆಯರ್ ಪಾಳ್ಯದ ಟಿಬೆಟಿಯನ್ ಕಾಲೋನಿಯ ಚಟುವಟಿಕೆಗಳನ್ನು ಹಾಗೂ ಅಲ್ಲಿನ ಪರಿಸ್ಥಿತಿಯ ಬಗ್ಗೆ ಅಧ್ಯಯನಕ್ಕೆ ಬಂದಿದ್ದ ಹಿಮಾಚಲ ಪ್ರದೇಶದ ಸಂಸದರಾದ ದಾವೂಸ್ ಸಿಂಗ್ ಹಾಗೂ ಇಷಾಡೋಲಮ್ ರವರು ಹನೂರು ಶಾಸಕ ಆರ್ ನರೇಂದ್ರರವರ ಕೊಳ್ಳೇಗಾಲದ ನಿವಾಸಕ್ಕೆ ಭೇಟಿ ನೀಡಿ ಟಿಬೆಟಿಯನ್ನರಿಗೆ ಯಾವುದೇ ಮೂಲಭೂತ ಸೌಲಭ್ಯ ಕೊರತೆಯಾಗದಂತೆ ನೋಡಿ ಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಆರ್ ನರೇಂದ್ರ ಈಗಾಗಲೇ ಟಿಬೇಟಿಯನ್ ಕಾಲೊನಿಗೆ ಅವಶ್ಯಕತೆ ಇರುವ ರಸ್ತೆ ಚರಂಡಿ ಬೀದಿ ದೀಪ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ .ಕಳೆದ ವಾರ ಸರ್ಕಾರದಿಂದ 6 ಕೋಟಿ ಅನುದಾನ ಬಿಡುಗಡೆ ಮಾಡಿಸಿ ಟಿಬೆಟಿಯನ್ ಕಾಲೋನಿಯ ರಸ್ತೆ ಅಭಿವೃದ್ಧಿ ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿ ಪಡಿಸಲು ಶ್ರಮಿಸುವುದಾಗಿ ತಿಳಿಸಿದರು.
ಈ ಸಂಧರ್ಭದಲ್ಲಿ ಸಟಲ್ಮೆಂಟ್ ಅಧಿಕಾರಿ ಗಿಲಕ್,
ಮುಖಂಡ ಸವಘ್ ಸೋನಮ್, ಲೋಬಸ್ಗ್, ಷೇಧರ್ ಸೇರಿದಂತೆ ಇತರರು ಇದ್ದರು.
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…