ಗುಂಡ್ಲುಪೇಟೆ: ಪ್ರಸಿದ್ದ ಯಾತ್ರಾಸ್ಥಳವಾದ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇ-ಹುಂಡಿ ಸೇವೆ ಆರಂಭವಾಗಿದೆ.
ದೇವಸ್ಥಾನದಲ್ಲಿ ಇ-ಹುಂಡಿ ಸೇವೆಗೆ ಚಾಲನೆ ನೀಡಿ ಮಾತನಾಡಿ ತಹಶೀಲ್ದಾರ್ ಸಿ.ಜಿ.ರವಿಶಂಕರ್ , ದೇಶವೇ ಡಿಜಿಟಲೀಕರಣ ವಾಗುತ್ತಿರುವ ಸಂದರ್ಭದಲ್ಲಿ ಭಕ್ತರು ಕಾಣಿಕೆ ಸಲ್ಲಿಸಲು ನೆರವಾಗಲಿ ಎಂಬ ಉದ್ದೇಶದಿಂದ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇ-ಹುಂಡಿ ಸೇವೆಯನ್ನು ಎಸ್ ಬಿಐ ಸಹಭಾಗಿತ್ವದಲ್ಲಿ ಆರಂಭಿಸಲಾಗಿದೆ ಎಂದರು.
ಭಕ್ತರು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಇ-ಹುಂಡಿಗೆ ಹಣ ಸಲ್ಲಿಸಬಹುದಾಗಿದೆ. ಭಕ್ತರು ತಾವು ಕುಳಿತ ಸ್ಥಳದಲ್ಲೇ ದೇವಸ್ಥಾನಕ್ಕೆ ಹಣ ಜಮಾ ಮಾಡಲು ನೆರವಾಗುವ ಉದ್ದೇಶದಿಂದ ಇ-ಹುಂಡಿ ಆರಂಭ ಮಾಡಲಾಗಿದ್ದು, ಇನ್ನು ಮುಂದೆ ಜನರು ದೇವಸ್ಥಾನದ ಗೋಲಕಕ್ಕೆ ಹಣ ನೀಡುವ ಬದಲು ಇ-ಹುಂಡಿಗೆ ಗೂಗಲ್ ಪೇ, ಫೋನ್ ಪೇ, ಭೀಮ್ ಆ್ಯಪ್, ಪೇಟಿಎಂ ಮೂಲಕ ಹಣ ಹಾಕಬಹುದು ಎಂದು ತಿಳಿಸಿದರು.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…