ಜಿಲ್ಲೆಗಳು

ಇತಿಹಾಸ ಸೇರಲಿದೆಯೇ ಮಹಾರಾಣಿ ಕಾಲೇಜು ಕಟ್ಟಡ?

ಸಂರಕ್ಷಣೆ ಕಾರ್ಯ ಕೈಗೆತ್ತಿಕೊಳ್ಳದಿದ್ದರೆ ಪಾಳು ಬಂಗಲೆಯಾಗಿ ಉಳಿಯುವ ಸಾಧ್ಯತೆ?; ಚುನಾವಣೆಗೂ ಮುನ್ನ ಎಚ್ಚೆತ್ತರೆ ಒಳಿತು

ಗಿರೀಶ್ ಹುಣಸೂರು

ಮೈಸೂರು: ಸ್ವಾತಂತ್ರ್ಯ ಪೂರ್ವದಲ್ಲಿಯೇ ಮಹಿಳೆಯರೂ ಶಿಕ್ಷಿತರಾಗಬೇಕೆಂಬ ಮಹದುದ್ದೇಶದಿಂದ ರಾಜಮಾತೆ ಕೆಂಪರಾಜಮ್ಮಣ್ಣಿ ವಾಣಿವಿಲಾಸ ಸನ್ನಿಧಾನ ಅವರು ಕಟ್ಟಿಸಿರುವ ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಇತಿಹಾಸದ ಕಾಲಗರ್ಭದಲ್ಲಿ ಸೇರಿ ಹೋಗಲಿದೆಯೇ? ಚುನಾವಣೆ ಘೋಷಣೆಯಾಗುವ ಮುನ್ನ ಸಂರಕ್ಷಣೆ ಕಾರ್ಯ ಕೈಗೆತ್ತಿಕೊಳ್ಳದಿದ್ದರೆ ಸುಂದರವಾದ ಕಾಲೇಜು ಕಟ್ಟಡ ನಗರದ ಹೃದಯ ಭಾಗದಲ್ಲಿ ಪಾಳು ಬಂಗಲೆಯಾಗಿ ಉಳಿಯಲಿದೆ.
ನಗರದ ಜೆಎಲ್‌ಬಿ ರಸ್ತೆಯಲ್ಲಿ ೧೮೮೧ರಲ್ಲಿ ಆರಂಭಿಸಲಾದ ಪ್ರಾಥಮಿಕ ಶಾಲೆ, ನಂತರದಲ್ಲಿ ಪ್ರಥಮ ದರ್ಜೆ ಕಾಲೇಜಾಗಿ ಮಾರ್ಪಟ್ಟು ಕಲಾ ಮತ್ತು ವಿಜ್ಞಾನ ವಿಭಾಗ ಒಟ್ಟಿಗೆ ನಡೆಯುತ್ತಿತ್ತು. ೧೯೭೯ರಲ್ಲಿ ಕಲಾ ಕಾ ಲೇಜಿನಿಂದ ಬೇರ್ಪಟ್ಟು, ವಿಜ್ಞಾನ ಕಾಲೇಜು ಆರಂಭವಾಯಿತು. ೫ ಎಕರೆ ಪ್ರದೇಶದ ವಿಶಾಲವಾದ ಜಾಗದಲ್ಲಿ ಸುಂದರವಾಗಿ ನಿರ್ಮಿಸಿರುವ ಈ ಕಲಾತ್ಮಕ ಕಟ್ಟಡಕ್ಕೆ ಇದೀಗ ಬರೋಬ್ಬರಿ ೧೦೫ ವರ್ಷಗಳಾಗಿವೆ.
ಕಟ್ಟಡದ ನಿರ್ವಹಣೆ ಇಲ್ಲದ ಕಾರಣಕ್ಕೆ ಸ್ಲ್ಯಾಬ್ ಮತ್ತು ಗೋಡೆಗಳಲ್ಲಿ ಬಿರುಕು ಬಿಟ್ಟು ಪಾಚಿ ಕಟ್ಟಿದೆ. ವಿಶಾಲವಾದ ಕಾಲೇಜು ಆವರಣದಲ್ಲಿ ನೆರಳಿಗಾಗಿ ಬೆಳೆಸಿರುವ ಮರಗಳು ಬೃಹದಾಕಾರವಾಗಿ ಬೆಳೆದು ನಿಂತಿ ದ್ದು, ಅದರ ಎಲೆಗಳು ಕಟ್ಟಡದ ಮೇಲೆ ಉದುರಿಬಿದ್ದು ಕಸ ಸಂಗ್ರಹಣೆಯಾಗುತ್ತಿದೆ. ಇದು ಮಳೆ ನೀರು ಹರಿದು ಹೋಗಲು ಅಳವಡಿಸಿರುವ ಪೈಪ್‌ಗಳಲ್ಲಿ ಶೇಖರಗೊಂಡು ನೀರು ಹೊರ ಹೋಗಲಾಗದೆ ಮಹಡಿಯ ಮೇಲೆ ನಿಂತು ಇಡೀ ಕಟ್ಟಡ ಶಿಥಿಲಗೊಳ್ಳುವಂತಾಗಿದೆ. ಜೊತೆಗೆ ಮಹಡಿಯ ನಾಲ್ಕು ದಿಕ್ಕುಗಳಲ್ಲೂ ಅರಳೀ ಮರಗಳು ಬೆಳೆದು ನಿಂತು ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಅಲ್ಲದೇ ಆಗಿನ ಕಾಲಕ್ಕೆ ಕಟ್ಟಡದ ಮೇಲೆ ಹಾಕಲಾಗಿರುವ ಮದ್ರಾಸ್ ಆರ್‌ಸಿಸಿಯ ಮೇಲೆ ಆಗಾಗ್ಗೆ ಟೈಲ್ಸ್‌ಗಳನ್ನು ಅಳವಡಿಸಿರುವುದರಿಂದ ಭಾರ ಹೆಚ್ಚಾಗಿದೆ. ಕಟ್ಟಡ ನಿರ್ಮಿಸುವ ಕಾಲಕ್ಕೆ ಬಳಸಲಾಗಿರುವ ಇಟ್ಟಿಗೆಯನ್ನು ಲೋಕೋಪಯೋಗಿ ಇಲಾಖೆ ಗುಣಮಟ್ಟದ ಪರೀಕ್ಷೆಗೆ ಕಳುಹಿಸಿ ವರದಿ ತರಿಸಿಕೊಂಡಿದ್ದು, ಆಗಿನ ಕಾಲದ ಸುಟ್ಟ ಇಟ್ಟಿಗೆ ಗಟ್ಟಿಯಾಗಿಯೇ ಇದೆ ಎಂದು ವರದಿ ಹೇಳಿದೆ. ಜತೆಗೆ ಕಟ್ಟಡ ನಿರ್ಮಾಣಕ್ಕೆ ಬಳಸಲಾಗಿರುವ ಸುಣ್ಣದ ಗಾರೆ ಗಟ್ಟಿಯಾಗಿದ್ದರೂ ಮಳೆ ನೀರು ಬಿದ್ದು ಕಟ್ಟಡದ ಗೋಡೆ ಮತ್ತು ಆರ್‌ಸಿಸಿ ಶಿಥಿಲವಾಗಿದ್ದರೆ, ಕಾಲೇಜು ಆವರಣದಲ್ಲಿ ಬೆಳೆದು ನಿಂತಿರುವ ಬೃಹತ್ ಮರಗಳ ಬೇರುಗಳು ತಳಪಾಯವನ್ನೇ ಸಡಿಲಗೊಳಿಸಿರುವುದರಿಂದ ಇಡೀ ಕಾಲೇಜು ಕಟ್ಟಡ ಅವಸಾನದ ಅಂಚಿಗೆ ಬಂದು ನಿಂತಿದೆ. ಶೀಘ್ರ ಸಂರಕ್ಷಣೆ ಕಾರ್ಯ ನಡೆಯದಿದ್ದರೆ ಭಾರೀ ದೊಡ್ಡ ಅನಾಹುತವಾಗಲಿದೆ ಎಂದು ತಜ್ಞರು ಮತ್ತು ಇಂಜಿನಿಯರುಗಳೇ ಹೇಳುತ್ತಾರೆ.
ಅ.೨೧ರಂದು ಇನ್ನೇನು ಕಾಲೇಜು ಆರಂಭವಾಗಬೇಕು ಆ ಸಂದರ್ಭದಲ್ಲಿಯೇ ಈ ಕಟ್ಟಡದಲ್ಲಿನ ಮೊದಲ ಮಹಡಿಯಲ್ಲಿದ್ದ ಪ್ರಯೋಗಾಲಯದ ಎರಡು ಕೊಠಡಿಗಳು ಕುಸಿದು ಬಿದ್ದು ಆತಂಕಕ್ಕೆ ಕಾರಣ ವಾಗಿತ್ತು. ವಿದ್ಯಾರ್ಥಿಗಳು ಮತ್ತು ಪೋಷಕರು ಸುರಕ್ಷತೆ ದೃಷ್ಟಿಯಿಂದ ಟೀಸಿ ಕೊಟ್ಟುಬಿಡಿ ಬೇರೆ ಕಾಲೇಜಿಗೆ ಸೇರಿಕೊಳ್ಳುತ್ತೇವೆ ಎಂದು ದುಗುಡ ತೋಡಿಕೊಂಡಿದ್ದರಿಂದ ಸ್ವತಃ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ರವಿ ಅವರ ಕೋರಿಕೆ ಮೇರೆಗೆ ಪುರಾತತ್ವ ಇಲಾಖೆ ಅಧಿಕಾರಿಗಳು, ಮಹಾ ನಗರಪಾಲಿಕೆ ಇಂಂಜಿನಿಯರುಗಳು ಹಾಗೂ ಪಾರಂಪರಿಕ ತಜ್ಞರು ಭೇಟಿ ನೀಡಿ ಪರಿಶೀಲಿಸಿ ಸಂರಕ್ಷಣೆ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು ಎಂದು ವರದಿ ನೀಡಿದೆ. ಸಂರಕ್ಷಣಾ ಕಾರ್ಯಕ್ಕೆ ಸಾಕಷ್ಟು ಹಣ ಮತ್ತು ಸಮಯ ಬೇಕಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಪಕ್ಕದ ಹೊಸ ಕಟ್ಟಡಕ್ಕೆ ಕಾಲೇಜಿನ ತರಗತಿಗಳನ್ನು ಸ್ಥಳಾಂತರಿಸಲಾಗಿದೆ.
ವಿಳಂಬ ನೀತಿ ಸರಿಯಲ್ಲ: ಕಟ್ಟಡ ಕುಸಿದು ತಿಂಗಳಾಗುತ್ತಾ ಬಂದರೂ ಪರಿಶೀಲನೆ, ವರದಿ ಇಷ್ಟರಲ್ಲೇ ಕಾಲಹರಣವಾಗುತ್ತಿದ್ದು, ಕಟ್ಟಡದ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಹೇಳಿ ಕೇಳಿ ೨೦೨೩ ಚುನಾವಣಾ ವರ್ಷ. ಈ ವರ್ಷಾಂತ್ಯದೊಳಗೆ ಕಟ್ಟಡದ ಸುರಕ್ಷತೆ ಕಾರ್ಯಕ್ಕೆ ಸರ್ಕಾರ ಹಣ ಬಿಡುಗಡೆ ಮಾಡಿ ಆದೇಶ ಹೊರಡಿಸಿ, ಏಜೆನ್ಸಿ ನಿಗದಿಪಡಿಸದಿದ್ದರೆ, ಚುನಾವಣೆ ಮುಗಿದು, ಹೊಸ ಸರ್ಕಾರ ರಚನೆಯಾಗಿ ಈ ಕಡೆ ಗಮನಹರಿಸುವವರೆಗೆ ಸುಂದರವಾದ ಈ ಕಟ್ಟಡ ಪಾಳು ಬೀಳಲಿದೆ ಎಂಬ ಆತಂಕವಿದೆ.


ಕಾಲೇಜು ಕಟ್ಟಡ ಕುಸಿದು ಬಿದ್ದ ನಂತರ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕಾಲೇಜಿನ ಶೇ.೯೦ರಷ್ಟು ತರಗತಿಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಿದ್ದೇವೆ. ಕಾಲೇಜು ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಪಾರಂಪರಿಕ ಇಲಾಖೆ ಅಧಿಕಾರಿಗಳನ್ನೊಳಗೊಂಡ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿಯವರು ಭೇಟಿ ನೀಡಿ ಪರಿಶೀಲಿಸಿ ಹೋಗಿದ್ದಾರೆ. ಇನ್ನುಳಿದ ಕೆಲಸ ಸರ್ಕಾರದ ಮಟ್ಟದಲ್ಲಿ ಆಗಬೇಕಿದೆ.
-ಡಾ.ಡಿ.ರವಿ, ಪ್ರಾಂಶುಪಾಲರು.


ಈ ಹಿಂದೆ ಮಹಾರಾಜ ಕಾಲೇಜು ಹಾಗೂ ಜಲದರ್ಶಿನಿ ಅತಿಥಿ ಗೃಹದ ಒಂದು ಭಾಗ ಸಂರಕ್ಷಣೆ ಮಾಡಿದಂತೆಯೇ ಪಾರಂಪರಿಕ ತಜ್ಞರ ಸಮಿತಿ ಸಲಹೆ-ಸೂಚನೆ ಪಡೆದು ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡದ ಸಂರಕ್ಷಣೆ ಮಾಡುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ.
-ಗೌರೀಶ್ ಗೌಡ, ಎಇಇ, ಲೋಕೋಪಯೋಗಿ ಇಲಾಖೆ

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

4 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

9 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

10 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

10 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

11 hours ago