ಜಿಲ್ಲೆಗಳು

ಇತಿಹಾಸ ಸೇರಲಿದೆಯೇ ಮಹಾರಾಣಿ ಕಾಲೇಜು ಕಟ್ಟಡ?

ಸಂರಕ್ಷಣೆ ಕಾರ್ಯ ಕೈಗೆತ್ತಿಕೊಳ್ಳದಿದ್ದರೆ ಪಾಳು ಬಂಗಲೆಯಾಗಿ ಉಳಿಯುವ ಸಾಧ್ಯತೆ?; ಚುನಾವಣೆಗೂ ಮುನ್ನ ಎಚ್ಚೆತ್ತರೆ ಒಳಿತು

ಗಿರೀಶ್ ಹುಣಸೂರು

ಮೈಸೂರು: ಸ್ವಾತಂತ್ರ್ಯ ಪೂರ್ವದಲ್ಲಿಯೇ ಮಹಿಳೆಯರೂ ಶಿಕ್ಷಿತರಾಗಬೇಕೆಂಬ ಮಹದುದ್ದೇಶದಿಂದ ರಾಜಮಾತೆ ಕೆಂಪರಾಜಮ್ಮಣ್ಣಿ ವಾಣಿವಿಲಾಸ ಸನ್ನಿಧಾನ ಅವರು ಕಟ್ಟಿಸಿರುವ ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಇತಿಹಾಸದ ಕಾಲಗರ್ಭದಲ್ಲಿ ಸೇರಿ ಹೋಗಲಿದೆಯೇ? ಚುನಾವಣೆ ಘೋಷಣೆಯಾಗುವ ಮುನ್ನ ಸಂರಕ್ಷಣೆ ಕಾರ್ಯ ಕೈಗೆತ್ತಿಕೊಳ್ಳದಿದ್ದರೆ ಸುಂದರವಾದ ಕಾಲೇಜು ಕಟ್ಟಡ ನಗರದ ಹೃದಯ ಭಾಗದಲ್ಲಿ ಪಾಳು ಬಂಗಲೆಯಾಗಿ ಉಳಿಯಲಿದೆ.
ನಗರದ ಜೆಎಲ್‌ಬಿ ರಸ್ತೆಯಲ್ಲಿ ೧೮೮೧ರಲ್ಲಿ ಆರಂಭಿಸಲಾದ ಪ್ರಾಥಮಿಕ ಶಾಲೆ, ನಂತರದಲ್ಲಿ ಪ್ರಥಮ ದರ್ಜೆ ಕಾಲೇಜಾಗಿ ಮಾರ್ಪಟ್ಟು ಕಲಾ ಮತ್ತು ವಿಜ್ಞಾನ ವಿಭಾಗ ಒಟ್ಟಿಗೆ ನಡೆಯುತ್ತಿತ್ತು. ೧೯೭೯ರಲ್ಲಿ ಕಲಾ ಕಾ ಲೇಜಿನಿಂದ ಬೇರ್ಪಟ್ಟು, ವಿಜ್ಞಾನ ಕಾಲೇಜು ಆರಂಭವಾಯಿತು. ೫ ಎಕರೆ ಪ್ರದೇಶದ ವಿಶಾಲವಾದ ಜಾಗದಲ್ಲಿ ಸುಂದರವಾಗಿ ನಿರ್ಮಿಸಿರುವ ಈ ಕಲಾತ್ಮಕ ಕಟ್ಟಡಕ್ಕೆ ಇದೀಗ ಬರೋಬ್ಬರಿ ೧೦೫ ವರ್ಷಗಳಾಗಿವೆ.
ಕಟ್ಟಡದ ನಿರ್ವಹಣೆ ಇಲ್ಲದ ಕಾರಣಕ್ಕೆ ಸ್ಲ್ಯಾಬ್ ಮತ್ತು ಗೋಡೆಗಳಲ್ಲಿ ಬಿರುಕು ಬಿಟ್ಟು ಪಾಚಿ ಕಟ್ಟಿದೆ. ವಿಶಾಲವಾದ ಕಾಲೇಜು ಆವರಣದಲ್ಲಿ ನೆರಳಿಗಾಗಿ ಬೆಳೆಸಿರುವ ಮರಗಳು ಬೃಹದಾಕಾರವಾಗಿ ಬೆಳೆದು ನಿಂತಿ ದ್ದು, ಅದರ ಎಲೆಗಳು ಕಟ್ಟಡದ ಮೇಲೆ ಉದುರಿಬಿದ್ದು ಕಸ ಸಂಗ್ರಹಣೆಯಾಗುತ್ತಿದೆ. ಇದು ಮಳೆ ನೀರು ಹರಿದು ಹೋಗಲು ಅಳವಡಿಸಿರುವ ಪೈಪ್‌ಗಳಲ್ಲಿ ಶೇಖರಗೊಂಡು ನೀರು ಹೊರ ಹೋಗಲಾಗದೆ ಮಹಡಿಯ ಮೇಲೆ ನಿಂತು ಇಡೀ ಕಟ್ಟಡ ಶಿಥಿಲಗೊಳ್ಳುವಂತಾಗಿದೆ. ಜೊತೆಗೆ ಮಹಡಿಯ ನಾಲ್ಕು ದಿಕ್ಕುಗಳಲ್ಲೂ ಅರಳೀ ಮರಗಳು ಬೆಳೆದು ನಿಂತು ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಅಲ್ಲದೇ ಆಗಿನ ಕಾಲಕ್ಕೆ ಕಟ್ಟಡದ ಮೇಲೆ ಹಾಕಲಾಗಿರುವ ಮದ್ರಾಸ್ ಆರ್‌ಸಿಸಿಯ ಮೇಲೆ ಆಗಾಗ್ಗೆ ಟೈಲ್ಸ್‌ಗಳನ್ನು ಅಳವಡಿಸಿರುವುದರಿಂದ ಭಾರ ಹೆಚ್ಚಾಗಿದೆ. ಕಟ್ಟಡ ನಿರ್ಮಿಸುವ ಕಾಲಕ್ಕೆ ಬಳಸಲಾಗಿರುವ ಇಟ್ಟಿಗೆಯನ್ನು ಲೋಕೋಪಯೋಗಿ ಇಲಾಖೆ ಗುಣಮಟ್ಟದ ಪರೀಕ್ಷೆಗೆ ಕಳುಹಿಸಿ ವರದಿ ತರಿಸಿಕೊಂಡಿದ್ದು, ಆಗಿನ ಕಾಲದ ಸುಟ್ಟ ಇಟ್ಟಿಗೆ ಗಟ್ಟಿಯಾಗಿಯೇ ಇದೆ ಎಂದು ವರದಿ ಹೇಳಿದೆ. ಜತೆಗೆ ಕಟ್ಟಡ ನಿರ್ಮಾಣಕ್ಕೆ ಬಳಸಲಾಗಿರುವ ಸುಣ್ಣದ ಗಾರೆ ಗಟ್ಟಿಯಾಗಿದ್ದರೂ ಮಳೆ ನೀರು ಬಿದ್ದು ಕಟ್ಟಡದ ಗೋಡೆ ಮತ್ತು ಆರ್‌ಸಿಸಿ ಶಿಥಿಲವಾಗಿದ್ದರೆ, ಕಾಲೇಜು ಆವರಣದಲ್ಲಿ ಬೆಳೆದು ನಿಂತಿರುವ ಬೃಹತ್ ಮರಗಳ ಬೇರುಗಳು ತಳಪಾಯವನ್ನೇ ಸಡಿಲಗೊಳಿಸಿರುವುದರಿಂದ ಇಡೀ ಕಾಲೇಜು ಕಟ್ಟಡ ಅವಸಾನದ ಅಂಚಿಗೆ ಬಂದು ನಿಂತಿದೆ. ಶೀಘ್ರ ಸಂರಕ್ಷಣೆ ಕಾರ್ಯ ನಡೆಯದಿದ್ದರೆ ಭಾರೀ ದೊಡ್ಡ ಅನಾಹುತವಾಗಲಿದೆ ಎಂದು ತಜ್ಞರು ಮತ್ತು ಇಂಜಿನಿಯರುಗಳೇ ಹೇಳುತ್ತಾರೆ.
ಅ.೨೧ರಂದು ಇನ್ನೇನು ಕಾಲೇಜು ಆರಂಭವಾಗಬೇಕು ಆ ಸಂದರ್ಭದಲ್ಲಿಯೇ ಈ ಕಟ್ಟಡದಲ್ಲಿನ ಮೊದಲ ಮಹಡಿಯಲ್ಲಿದ್ದ ಪ್ರಯೋಗಾಲಯದ ಎರಡು ಕೊಠಡಿಗಳು ಕುಸಿದು ಬಿದ್ದು ಆತಂಕಕ್ಕೆ ಕಾರಣ ವಾಗಿತ್ತು. ವಿದ್ಯಾರ್ಥಿಗಳು ಮತ್ತು ಪೋಷಕರು ಸುರಕ್ಷತೆ ದೃಷ್ಟಿಯಿಂದ ಟೀಸಿ ಕೊಟ್ಟುಬಿಡಿ ಬೇರೆ ಕಾಲೇಜಿಗೆ ಸೇರಿಕೊಳ್ಳುತ್ತೇವೆ ಎಂದು ದುಗುಡ ತೋಡಿಕೊಂಡಿದ್ದರಿಂದ ಸ್ವತಃ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ರವಿ ಅವರ ಕೋರಿಕೆ ಮೇರೆಗೆ ಪುರಾತತ್ವ ಇಲಾಖೆ ಅಧಿಕಾರಿಗಳು, ಮಹಾ ನಗರಪಾಲಿಕೆ ಇಂಂಜಿನಿಯರುಗಳು ಹಾಗೂ ಪಾರಂಪರಿಕ ತಜ್ಞರು ಭೇಟಿ ನೀಡಿ ಪರಿಶೀಲಿಸಿ ಸಂರಕ್ಷಣೆ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು ಎಂದು ವರದಿ ನೀಡಿದೆ. ಸಂರಕ್ಷಣಾ ಕಾರ್ಯಕ್ಕೆ ಸಾಕಷ್ಟು ಹಣ ಮತ್ತು ಸಮಯ ಬೇಕಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಪಕ್ಕದ ಹೊಸ ಕಟ್ಟಡಕ್ಕೆ ಕಾಲೇಜಿನ ತರಗತಿಗಳನ್ನು ಸ್ಥಳಾಂತರಿಸಲಾಗಿದೆ.
ವಿಳಂಬ ನೀತಿ ಸರಿಯಲ್ಲ: ಕಟ್ಟಡ ಕುಸಿದು ತಿಂಗಳಾಗುತ್ತಾ ಬಂದರೂ ಪರಿಶೀಲನೆ, ವರದಿ ಇಷ್ಟರಲ್ಲೇ ಕಾಲಹರಣವಾಗುತ್ತಿದ್ದು, ಕಟ್ಟಡದ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಹೇಳಿ ಕೇಳಿ ೨೦೨೩ ಚುನಾವಣಾ ವರ್ಷ. ಈ ವರ್ಷಾಂತ್ಯದೊಳಗೆ ಕಟ್ಟಡದ ಸುರಕ್ಷತೆ ಕಾರ್ಯಕ್ಕೆ ಸರ್ಕಾರ ಹಣ ಬಿಡುಗಡೆ ಮಾಡಿ ಆದೇಶ ಹೊರಡಿಸಿ, ಏಜೆನ್ಸಿ ನಿಗದಿಪಡಿಸದಿದ್ದರೆ, ಚುನಾವಣೆ ಮುಗಿದು, ಹೊಸ ಸರ್ಕಾರ ರಚನೆಯಾಗಿ ಈ ಕಡೆ ಗಮನಹರಿಸುವವರೆಗೆ ಸುಂದರವಾದ ಈ ಕಟ್ಟಡ ಪಾಳು ಬೀಳಲಿದೆ ಎಂಬ ಆತಂಕವಿದೆ.


ಕಾಲೇಜು ಕಟ್ಟಡ ಕುಸಿದು ಬಿದ್ದ ನಂತರ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕಾಲೇಜಿನ ಶೇ.೯೦ರಷ್ಟು ತರಗತಿಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಿದ್ದೇವೆ. ಕಾಲೇಜು ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಪಾರಂಪರಿಕ ಇಲಾಖೆ ಅಧಿಕಾರಿಗಳನ್ನೊಳಗೊಂಡ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿಯವರು ಭೇಟಿ ನೀಡಿ ಪರಿಶೀಲಿಸಿ ಹೋಗಿದ್ದಾರೆ. ಇನ್ನುಳಿದ ಕೆಲಸ ಸರ್ಕಾರದ ಮಟ್ಟದಲ್ಲಿ ಆಗಬೇಕಿದೆ.
-ಡಾ.ಡಿ.ರವಿ, ಪ್ರಾಂಶುಪಾಲರು.


ಈ ಹಿಂದೆ ಮಹಾರಾಜ ಕಾಲೇಜು ಹಾಗೂ ಜಲದರ್ಶಿನಿ ಅತಿಥಿ ಗೃಹದ ಒಂದು ಭಾಗ ಸಂರಕ್ಷಣೆ ಮಾಡಿದಂತೆಯೇ ಪಾರಂಪರಿಕ ತಜ್ಞರ ಸಮಿತಿ ಸಲಹೆ-ಸೂಚನೆ ಪಡೆದು ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡದ ಸಂರಕ್ಷಣೆ ಮಾಡುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ.
-ಗೌರೀಶ್ ಗೌಡ, ಎಇಇ, ಲೋಕೋಪಯೋಗಿ ಇಲಾಖೆ

andolanait

Recent Posts

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

3 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

4 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

5 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

5 hours ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

5 hours ago