ಜಿಲ್ಲೆಗಳು

ಹೂಗ್ಯಂ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಿಗೆ ನಿರಂತರ ಯೋಜನೆಯಡಿ ವಿದ್ಯುತ್ ಪೂರೈಕೆ : ಸಚಿವ ಸುನಿಲ್ ಕುಮಾರ್

ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ನಿರಂತರ ಯೋಜನೆಯಡಿ ಎರಡನೆ ಹಂತದಲ್ಲಿ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು  ಸಚಿವ ಸುನೀಲ್ ಕುಮಾರ್ ತಿಳಿಸಿದರು.

ಬೆಂಗಳೂರು ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ನೀಡಲು ವಿದ್ಯುತ್ ಮಾರ್ಗ ನಿರ್ಮಿಸುವ ವೇಳೆಯಲ್ಲಿ ಅರಣ್ಯ ಇಲಾಖೆಯಿಂದ ಮಾರ್ಗವನ್ನು ನಿರ್ಮಿಸಲು ಅನುಮತಿ ನೀಡದೆ ಇದ್ದರಿಂದ ಸದರಿ ಗ್ರಾಮಗಳಿಗೆ ಮೇ ಪಾವನಿ ಕಂಟ್ರೋಲ್ & ಪ್ಯಾನೆಲ್ ಆಂಧ್ರಪ್ರದೇಶದ Aerial Bunched cable ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.ಮುಂದುವರೆದು ಹನೂರು ಉಪ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 79.04 ಕಿಲೋಮೀಟರ್ ಎಬಿ ಕೇಬಲ್ ಅಳವಡಿಸಿದ್ದು ಅದರಲ್ಲಿ ಹೂಗ್ಯಂ ಗ್ರಾಮ ಪಂಚಾಯಿತಿಯ 6ಹಳ್ಳಿಗಳ ವ್ಯಾಪ್ತಿಯ 30ಕಿಲೋಮೀಟರ್ ಎಬಿ ಕೇಬಲ್ ಅಳವಡಿಸಿದ್ದು ಅದರಲ್ಲಿ 12 ಕಿಲೋ ಮೀಟರ್ ವಿದ್ಯುತ್ ಮಾರ್ಗವು ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುತ್ತವೆ ಹಾಗೂ ಸುಮಾರು 5 ವರ್ಷದ ಹಿಂದೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ಕೇಬಲ್‌ಗಳು ಪಂಚರಾಗಿ pot Head ಗಳು ವಿಫಲಗೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುತ್ತದೆ .ದುರಸ್ತಿ ಸಂದರ್ಭದಲ್ಲಿ ಹಾಲಿ ಇರುವ ಜಲ್ಲಿಪಾಳ್ಯ ಗ್ರಾಮಾಂತರ ಮಾರ್ಗದಿಂದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಸದರಿ ಎಬಿ ಕೇಬಲ್ ಗಳನ್ನು covered conductor ಯಿಂದ ಬದಲಾಯಿಸಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಬರೆಯಲಾಗಿದೆ. ಅನುಮತಿ ದೊರೆತ ಬಳಿಕ ಸದರಿ ಕೇಬಲ್ ಬದಲಾಯಿಸಲು ಕ್ರಮ ಕೈಗೊಳ್ಳಲಾಗುವುದು ರೈತರಿಗೆ ಪ್ರಸ್ತುತ ಯಾವುದೇ ತೊಂದರೆಯಾಗದಂತೆ ಸರ್ಕಾರದ ಆದೇಶದನ್ವಯ ರೈತರ ಪಂಪ್ ಸೆಟ್ ಗಳಿಗೆ ನಿರಂತರ 7ಗಂಟೆ 3ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

andolanait

Recent Posts

32 ಕ್ಷೇತ್ರಗಳ ಟಾರ್ಗೆಟ್‌: ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ…

60 mins ago

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…

1 hour ago

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಬಡಗಲಪುರ ನಾಗೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…

1 hour ago

ಕ್ರಿಕೆಟ್‌ ಪಂದ್ಯಾವಳಿ ವೇಳೆ ಜೇನುನೊಣಗಳ ದಾಳಿ: ಅಂಪೈರ್‌ ದಾರುಣ ಸಾವು

ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…

2 hours ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು…

2 hours ago

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

4 hours ago